ಮಾವುತರು ಹಾಗೂ ಕವಾಡಿಗರೊಂದಿಗೆ ರಕ್ಷಾಬಂಧನ್ ಆಚರಣೆ…ರಾಖಿ ಕಟ್ಟಿ ಶುಭ ಹಾರೈಸಿದ ಮಹಿಳೆಯರು…

ಮಾವುತರು ಹಾಗೂ ಕವಾಡಿಗರೊಂದಿಗೆ ರಕ್ಷಾಬಂಧನ್ ಆಚರಣೆ…ರಾಖಿ ಕಟ್ಟಿ ಶುಭ ಹಾರೈಸಿದ ಮಹಿಳೆಯರು…

ಮೈಸೂರು,ಆ12,Tv10 ಕನ್ನಡ

ದಸರಾ ಮಹೋತ್ಸವ ಆಚರಣೆಗಾಗಿ ಕಾಡಿನಿಂದ ನಾಡಿಗೆ ಬಂದ ಗಜಪಡೆಯ ಮಾಹುತರು ಹಾಗೂ ಕಾವಾಡಿಗರು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ರಾಖಿ ಕಟ್ಟುವ ಮೂಲಕ ರಕ್ಷಾ ಬಂಧನ ಆಚರಣೆ ಮಾಡಲಾಯಿತು.ಇದೇ ವೇಳೆ ಶ್ರಾವಣ ಮಾಸದ ಲಡ್ಡು ಪ್ರಸಾದ ವಿತರಣೆ ಮಾಡಿ ದಸರಾ ಮಹೋತ್ಸವ ಯಶಸ್ಸಿಗಾಗಿ ಮಹಿಳೆಯರು ಹಾರೈಸಿದರು.
ಅರಮನೆ ಆವರಣದಲ್ಲಿ ತಂಗಿರುವ ಮಾಹುತರು ಮತ್ತು ಕಾವಾಡಿಗಳಿಗೆ ಆರತಿ ಬೆಳಗಿ, ಕುಂಕುಮದ ತಿಲಕವನ್ನುಇಟ್ಟು, ಶ್ರಾವಣ ಮಾಸದ ಲಡ್ಡು ಪ್ರಸಾದವನ್ನು ವಿತರಿಸಿ, ರಕ್ಷೆಯನ್ನು ಕಟ್ಟುವ ಮೂಲಕ ಶ್ರೀ ದುರ್ಗಾ ಫೌಂಡೇಶನ್ ಮಹಿಳೆಯರು ವಿಶೇಷವಾಗಿ ರಕ್ಷಾಬಂಧನನ್ನು ಆಚರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್ ಸಹೋದರರ ಸಮಾನರಾದ ಮಾವುತರು ಹಾಗೂ ಕವಾಡಿಗಳಿಗೆ ರಕ್ಷೆ ಕಟ್ಟುವ ಸೌಭಾಗ್ಯ ನಮ್ಮದಾಗಿರುವುದು ಸಂತಸವನ್ನುಂಟು ಮಾಡಿದೆ. ಭಾರತೀಯ ಪರಂಪರೆಯಲ್ಲಿ ರಕ್ಷಾ ಬಂಧನ್ ಹಬ್ಬಕ್ಕೆ ಬಹಳ ಮಹತ್ವವಿದೆ, ಸಹೋದರಿಯರು ತಮ್ಮ ಸಹೋದರರಿಗೆ ರಕ್ಷೆ ಕೋರಿ ರಕ್ಷಾಬಂಧನ ಕಟ್ಟುವ ಭಾವನಾತ್ಮಕ ಮತ್ತು ಪವಿತ್ರ
ಹಬ್ಬವಿದು ಎಂದು ಬಣ್ಣಿಸಿದರು.ಈ ಸಂದರ್ಭದಲ್ಲಿ ಡಿಸಿಎಫ್ ಪ್ರಭು ರವರಿಗೆ ಮಹಿಳೆಯರು ರಕ್ಷೆಯನ್ನು ಕಟ್ಟಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಶ್ರೀ ದುರ್ಗಾ ಫೌಂಡೇಶನ್ ಖುಷಿ ವಿನು,ಕಾವ್ಯ,ಜಿ ರಾಘವೇಂದ್ರ,ಎಸ್.ಎನ್ ರಾಜೇಶ್ ಹಾಗೂ ಇನ್ನಿತರರು ಹಾಜರಿದ್ದರು…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *