ಮಾವುತರು ಹಾಗೂ ಕವಾಡಿಗರೊಂದಿಗೆ ರಕ್ಷಾಬಂಧನ್ ಆಚರಣೆ…ರಾಖಿ ಕಟ್ಟಿ ಶುಭ ಹಾರೈಸಿದ ಮಹಿಳೆಯರು…

ಮಾವುತರು ಹಾಗೂ ಕವಾಡಿಗರೊಂದಿಗೆ ರಕ್ಷಾಬಂಧನ್ ಆಚರಣೆ…ರಾಖಿ ಕಟ್ಟಿ ಶುಭ ಹಾರೈಸಿದ ಮಹಿಳೆಯರು…

ಮೈಸೂರು,ಆ12,Tv10 ಕನ್ನಡ

ದಸರಾ ಮಹೋತ್ಸವ ಆಚರಣೆಗಾಗಿ ಕಾಡಿನಿಂದ ನಾಡಿಗೆ ಬಂದ ಗಜಪಡೆಯ ಮಾಹುತರು ಹಾಗೂ ಕಾವಾಡಿಗರು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ರಾಖಿ ಕಟ್ಟುವ ಮೂಲಕ ರಕ್ಷಾ ಬಂಧನ ಆಚರಣೆ ಮಾಡಲಾಯಿತು.ಇದೇ ವೇಳೆ ಶ್ರಾವಣ ಮಾಸದ ಲಡ್ಡು ಪ್ರಸಾದ ವಿತರಣೆ ಮಾಡಿ ದಸರಾ ಮಹೋತ್ಸವ ಯಶಸ್ಸಿಗಾಗಿ ಮಹಿಳೆಯರು ಹಾರೈಸಿದರು.
ಅರಮನೆ ಆವರಣದಲ್ಲಿ ತಂಗಿರುವ ಮಾಹುತರು ಮತ್ತು ಕಾವಾಡಿಗಳಿಗೆ ಆರತಿ ಬೆಳಗಿ, ಕುಂಕುಮದ ತಿಲಕವನ್ನುಇಟ್ಟು, ಶ್ರಾವಣ ಮಾಸದ ಲಡ್ಡು ಪ್ರಸಾದವನ್ನು ವಿತರಿಸಿ, ರಕ್ಷೆಯನ್ನು ಕಟ್ಟುವ ಮೂಲಕ ಶ್ರೀ ದುರ್ಗಾ ಫೌಂಡೇಶನ್ ಮಹಿಳೆಯರು ವಿಶೇಷವಾಗಿ ರಕ್ಷಾಬಂಧನನ್ನು ಆಚರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್ ಸಹೋದರರ ಸಮಾನರಾದ ಮಾವುತರು ಹಾಗೂ ಕವಾಡಿಗಳಿಗೆ ರಕ್ಷೆ ಕಟ್ಟುವ ಸೌಭಾಗ್ಯ ನಮ್ಮದಾಗಿರುವುದು ಸಂತಸವನ್ನುಂಟು ಮಾಡಿದೆ. ಭಾರತೀಯ ಪರಂಪರೆಯಲ್ಲಿ ರಕ್ಷಾ ಬಂಧನ್ ಹಬ್ಬಕ್ಕೆ ಬಹಳ ಮಹತ್ವವಿದೆ, ಸಹೋದರಿಯರು ತಮ್ಮ ಸಹೋದರರಿಗೆ ರಕ್ಷೆ ಕೋರಿ ರಕ್ಷಾಬಂಧನ ಕಟ್ಟುವ ಭಾವನಾತ್ಮಕ ಮತ್ತು ಪವಿತ್ರ
ಹಬ್ಬವಿದು ಎಂದು ಬಣ್ಣಿಸಿದರು.ಈ ಸಂದರ್ಭದಲ್ಲಿ ಡಿಸಿಎಫ್ ಪ್ರಭು ರವರಿಗೆ ಮಹಿಳೆಯರು ರಕ್ಷೆಯನ್ನು ಕಟ್ಟಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಶ್ರೀ ದುರ್ಗಾ ಫೌಂಡೇಶನ್ ಖುಷಿ ವಿನು,ಕಾವ್ಯ,ಜಿ ರಾಘವೇಂದ್ರ,ಎಸ್.ಎನ್ ರಾಜೇಶ್ ಹಾಗೂ ಇನ್ನಿತರರು ಹಾಜರಿದ್ದರು…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *