ಮಾವುತರು ಹಾಗೂ ಕವಾಡಿಗರೊಂದಿಗೆ ರಕ್ಷಾಬಂಧನ್ ಆಚರಣೆ…ರಾಖಿ ಕಟ್ಟಿ ಶುಭ ಹಾರೈಸಿದ ಮಹಿಳೆಯರು…

ಮಾವುತರು ಹಾಗೂ ಕವಾಡಿಗರೊಂದಿಗೆ ರಕ್ಷಾಬಂಧನ್ ಆಚರಣೆ…ರಾಖಿ ಕಟ್ಟಿ ಶುಭ ಹಾರೈಸಿದ ಮಹಿಳೆಯರು…

ಮೈಸೂರು,ಆ12,Tv10 ಕನ್ನಡ

ದಸರಾ ಮಹೋತ್ಸವ ಆಚರಣೆಗಾಗಿ ಕಾಡಿನಿಂದ ನಾಡಿಗೆ ಬಂದ ಗಜಪಡೆಯ ಮಾಹುತರು ಹಾಗೂ ಕಾವಾಡಿಗರು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ರಾಖಿ ಕಟ್ಟುವ ಮೂಲಕ ರಕ್ಷಾ ಬಂಧನ ಆಚರಣೆ ಮಾಡಲಾಯಿತು.ಇದೇ ವೇಳೆ ಶ್ರಾವಣ ಮಾಸದ ಲಡ್ಡು ಪ್ರಸಾದ ವಿತರಣೆ ಮಾಡಿ ದಸರಾ ಮಹೋತ್ಸವ ಯಶಸ್ಸಿಗಾಗಿ ಮಹಿಳೆಯರು ಹಾರೈಸಿದರು.
ಅರಮನೆ ಆವರಣದಲ್ಲಿ ತಂಗಿರುವ ಮಾಹುತರು ಮತ್ತು ಕಾವಾಡಿಗಳಿಗೆ ಆರತಿ ಬೆಳಗಿ, ಕುಂಕುಮದ ತಿಲಕವನ್ನುಇಟ್ಟು, ಶ್ರಾವಣ ಮಾಸದ ಲಡ್ಡು ಪ್ರಸಾದವನ್ನು ವಿತರಿಸಿ, ರಕ್ಷೆಯನ್ನು ಕಟ್ಟುವ ಮೂಲಕ ಶ್ರೀ ದುರ್ಗಾ ಫೌಂಡೇಶನ್ ಮಹಿಳೆಯರು ವಿಶೇಷವಾಗಿ ರಕ್ಷಾಬಂಧನನ್ನು ಆಚರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್ ಸಹೋದರರ ಸಮಾನರಾದ ಮಾವುತರು ಹಾಗೂ ಕವಾಡಿಗಳಿಗೆ ರಕ್ಷೆ ಕಟ್ಟುವ ಸೌಭಾಗ್ಯ ನಮ್ಮದಾಗಿರುವುದು ಸಂತಸವನ್ನುಂಟು ಮಾಡಿದೆ. ಭಾರತೀಯ ಪರಂಪರೆಯಲ್ಲಿ ರಕ್ಷಾ ಬಂಧನ್ ಹಬ್ಬಕ್ಕೆ ಬಹಳ ಮಹತ್ವವಿದೆ, ಸಹೋದರಿಯರು ತಮ್ಮ ಸಹೋದರರಿಗೆ ರಕ್ಷೆ ಕೋರಿ ರಕ್ಷಾಬಂಧನ ಕಟ್ಟುವ ಭಾವನಾತ್ಮಕ ಮತ್ತು ಪವಿತ್ರ
ಹಬ್ಬವಿದು ಎಂದು ಬಣ್ಣಿಸಿದರು.ಈ ಸಂದರ್ಭದಲ್ಲಿ ಡಿಸಿಎಫ್ ಪ್ರಭು ರವರಿಗೆ ಮಹಿಳೆಯರು ರಕ್ಷೆಯನ್ನು ಕಟ್ಟಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಶ್ರೀ ದುರ್ಗಾ ಫೌಂಡೇಶನ್ ಖುಷಿ ವಿನು,ಕಾವ್ಯ,ಜಿ ರಾಘವೇಂದ್ರ,ಎಸ್.ಎನ್ ರಾಜೇಶ್ ಹಾಗೂ ಇನ್ನಿತರರು ಹಾಜರಿದ್ದರು…

Spread the love

Related post

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು… ಹುಣಸೂರು,ಡಿ20,Tv10 ಕನ್ನಡ ಸುಡುತ್ತಿರುವ ಬಿಸಿನೀರಿನ ಪಾತ್ರೆಗೆ ಬಿದ್ದು ಹೆಣ್ಣುಮಗು ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ವಿಜಯಗಿರಿ ಹಾಡಿಯಲ್ಲಿ ನಡೆದಿದೆ. ಆದಿವಾಸಿ…
ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ… ಹುಣಸೂರು,ಡಿ19,Tv10 ಕನ್ನಡ ಕ್ಲುಲ್ಲಕ ಕಾರಣಕ್ಕೆ ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಹುಣಸೂರು ನಗರದಲ್ಲಿ ನಡೆದಿದೆ.ನಿಜಾಂ ಮೊಹಲ್ಲಾದ ನಿವಾಸಿ ಖಾಜಾಪೀರ್(44)ಕೊಲೆಯಾದ…
ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ… ಮಂಡ್ಯ,ಡಿ19,Tv10 ಕನ್ನಡ ಜಮೀನು ವಿಚಾರದಲ್ಲಿ ಮಾಜಿ ಶಾಸಕ ಹಾಗೂ ಪುತ್ರ ವ್ಯಕ್ತಿ ಮೇಲೆ…

Leave a Reply

Your email address will not be published. Required fields are marked *