ಮಾದಕ ವಸ್ತುಗಳ ಹಾವಳಿಗೆ ಬ್ರೇಕ್ ಹಾಕಲು ನಗರ ಪೊಲೀಸರ ಸಮರ…ನಗರದಾದ್ಯಂತ ಜಾಗೃತಿ…ನಶ ಮುಕ್ತ ಭಾರತ ಅಭಿಯಾನ ಆರಂಭ…

ಮಾದಕ ವಸ್ತುಗಳ ಹಾವಳಿಗೆ ಬ್ರೇಕ್ ಹಾಕಲು ನಗರ ಪೊಲೀಸರ ಸಮರ…ನಗರದಾದ್ಯಂತ ಜಾಗೃತಿ…ನಶ ಮುಕ್ತ ಭಾರತ ಅಭಿಯಾನ ಆರಂಭ…

ಮೈಸೂರು,ಆ13,Tv10 ಕನ್ನಡ

ಮಾದಕ ವಸ್ತುಗಳ ಹಾವಳಿಗೆ ಬ್ರೇಕ್ ಹಾಕಲು ಮೈಸೂರು ನಗರ ಖಾಕಿ ಪಡೆ ಸಮರ ಸಾರಿದೆ.ಮಾದಕ ವಸ್ತುಗಳ ತಯಾರಿಕಾ ಘಟಕ ಪತ್ತೆಯಾದ ಬೆನ್ನ ಹಿಂದೆಯೇ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ನೇತೃತ್ವದಲ್ಲಿ ದಾಳಿಗಳು ನಡೆಯುತ್ತಿದೆ.ಈಗಾಗಲೇ ವಿವಿದ ಪೊಲೀಸ್ ಠಾಣೆಗಳಲ್ಲಿ ನೂರಾರು ಪ್ರಕರಣಗಳು ದಾಖಲಾಗಿವೆ.ಸಾಕಷ್ಟು ಪ್ರಮಾಣದಲ್ಲಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ.ಹಲವರನ್ನ ಬಂಧಿಸಲಾಗಿದೆ.ಹಾಸ್ಟೆಲ್ ಗಳು,ಪಿಜಿ ಗಳು,ಸ್ಟೂಡೆಂಟ್ ಗಳು ತಂಗಿರುವ ಕೊಠಡಿಗಳು,ಲಾಡ್ಜ್ ಗಳು ಸೇರಿದಂತೆ ಸಾಕಷ್ಟು ಸ್ಥಳಗಳ ಮೇಲೆ ದಾಳಿ ನಡೆಸಿ ಮಾದಕ ವಸ್ತುಗಳ ವಿರುದ್ದ ಕಾರ್ಯಾಚರಣೆ ನಡೆಸಿದ್ದಾರೆ. ಮತ್ತೊಂದು ಹೆಜ್ಜೆ ಮುಂದಿಟ್ಟಿರುವ ಪೊಲೀಸರು ನಶ ಮುಕ್ತ ಭಾರತ ಅಭಿಯಾನ ಆರಂಭಿಸಿದ್ದಾರೆ.ಮಾದಕ ವಸ್ತುಗಳಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಅಭಿಯಾನ ಆರಂಭಿಸಿದ್ದಾರೆ.ನಗರದ ಎಲ್ಲಾ ಠಾಣೆಗಳಲ್ಲೂ ವಿಧ್ಯಾರ್ಥಿಗಳು ಹಾಗೂ ಸಾರ್ವಜನಿಕರ ಸಹಯೋಗದೊಂದಿಗೆ ಜಾಗೃತಿ ಮೂಡಿಸಲಾಗುತ್ತಿದೆ.ವಿಜಯನಗರ ಉಪವಿಭಾಗದ ವತಿಯಿಂದ ಅಭಿಯಾನಕ್ಕೆ ಅದ್ದೂರಿಯಾಗಿ ಚಾಲನೆ ದೊರೆತಿದೆ.ಮಂಡಿ,ಮೇಟಗಳ್ಳಿ,ಲಷ್ಕರ್,ವಿಜಯನಗರ,ಹೆಬ್ಬಾಳ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅರಿವು ಮೂಡಿಸಲಾಗುತ್ತಿದೆ.ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕರು ಸಹ ಪೊಲೀಸರಿಗೆ ಸಾಥ್ ನೀಡಿದ್ದಾರೆ.ಪೋಸ್ಟರ್ ಗಳು,ಬ್ಯಾನರ್ ಗಳ,ಭಿತ್ತಿಪತ್ರಗಳ ಮೂಲಕ ಸಂದೇಶಗಳನ್ನ ರವಾನಿಸಲಾಗುತ್ತಿದೆ.ಸಸಿಗಳನ್ನ‌ ನೆಡುವ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಕಾಲೇಜ್ ಗಳಲ್ಲಿ ಸಹ ವಿಧ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿಗಳನ್ನ ನೀಡಲಾಗುತ್ತಿದೆ.ಮೊದಲ ಬಾರಿಗೆ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಉರ್ದು ಭಾಷೆಯಲ್ಲಿ ಬರೆದ ಸಂದೇಶಗಳು ಗಮನ ಸೆಳೆಯುತ್ತಿದೆ.ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಬಿಂದುಮಣಿ,ಅಪರಾಧ ಮತ್ತು ಸಂಚಾರ ಡಿಸಿಪಿ ಸುಂದರ ರಾಜ್,ಎಸಿಪಿ ರವಿಪ್ರಸಾದ್ ನಿರೀಕ್ಷಕರಾದ ಅರುಣ್,ಪ್ರಸಾದ್,ಸುರೇಶ್ ಕುಮಾರ್,ದಿವಾಕರ್ ರವರು ಸೇರಿದಂತೆ ಹಲವು ಸಿಬ್ಬಂದಿಗಳು ಅಭಿಯಾನದ ಮೂಲಕ ಜನರ ಮನೆ ಮನೆಗೆ ತಲುಪುವ ಪ್ರಯತ್ನ ಮಾಡುತ್ತಿದ್ದಾರೆ…

Spread the love

Related post

ಸಿಸಿಬಿ ಪೊಲೀಸರ ಕಾರ್ಯಾಚರಣೆ…ನಾಲ್ವರ ಬಂಧನ…10.40 ಲಕ್ಷ ಮೌಲ್ಯದ ಎಂಡಿಎಂಎ ಒಂದು ಕಾರ್ ವಶ…

ಸಿಸಿಬಿ ಪೊಲೀಸರ ಕಾರ್ಯಾಚರಣೆ…ನಾಲ್ವರ ಬಂಧನ…10.40 ಲಕ್ಷ ಮೌಲ್ಯದ ಎಂಡಿಎಂಎ ಒಂದು ಕಾರ್…

ಸಿಸಿಬಿ ಪೊಲೀಸರ ಕಾರ್ಯಾಚರಣೆ…ನಾಲ್ವರ ಬಂಧನ…10.40 ಲಕ್ಷ ಮೌಲ್ಯದ ಎಂಡಿಎಂಎ ಒಂದು ಕಾರ್ ವಶ… ಮೈಸೂರು,ಫೆ23,Tv10 ಕನ್ನಡ ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆಯಲ್ಲಿ ನಾಲ್ವರು ಆರೋಪಿಗಳನ್ನ ವಶಕ್ಕೆ ಪಡೆಯಲಾಗಿದ್ದು ಬಂಧಿತರಿಂದ…
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ! ಆಲ್ಫಾ ಅಂದರೇನೇ ಡಾಮಿನೇಶನ್. ಈ ವಾರ ತೆರೆಕಂಡ ಆಲ್ಫಾ‌ ಚಿತ್ರದಲ್ಲಿ ಡಾಮಿನೇಟ್ ಮಾಡುತ್ತಿರುವವರೇ ಚಿತ್ರದ ನಾಯಕ ಹೇಮಂತ್ ಕುಮಾರ್. ಹೇಮಂತ್…
ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್… ಮೈಸೂರು,ಫೆ17,Tv10 ಕನ್ನಡ ಮೈಸೂರಿನ ಹೃದಯಭಾಗದಲ್ಲಿರುವ…

Leave a Reply

Your email address will not be published. Required fields are marked *