ಮಾದಕ ವಸ್ತುಗಳ ಹಾವಳಿಗೆ ಬ್ರೇಕ್ ಹಾಕಲು ನಗರ ಪೊಲೀಸರ ಸಮರ…ನಗರದಾದ್ಯಂತ ಜಾಗೃತಿ…ನಶ ಮುಕ್ತ ಭಾರತ ಅಭಿಯಾನ ಆರಂಭ…

ಮಾದಕ ವಸ್ತುಗಳ ಹಾವಳಿಗೆ ಬ್ರೇಕ್ ಹಾಕಲು ನಗರ ಪೊಲೀಸರ ಸಮರ…ನಗರದಾದ್ಯಂತ ಜಾಗೃತಿ…ನಶ ಮುಕ್ತ ಭಾರತ ಅಭಿಯಾನ ಆರಂಭ…

ಮೈಸೂರು,ಆ13,Tv10 ಕನ್ನಡ

ಮಾದಕ ವಸ್ತುಗಳ ಹಾವಳಿಗೆ ಬ್ರೇಕ್ ಹಾಕಲು ಮೈಸೂರು ನಗರ ಖಾಕಿ ಪಡೆ ಸಮರ ಸಾರಿದೆ.ಮಾದಕ ವಸ್ತುಗಳ ತಯಾರಿಕಾ ಘಟಕ ಪತ್ತೆಯಾದ ಬೆನ್ನ ಹಿಂದೆಯೇ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ನೇತೃತ್ವದಲ್ಲಿ ದಾಳಿಗಳು ನಡೆಯುತ್ತಿದೆ.ಈಗಾಗಲೇ ವಿವಿದ ಪೊಲೀಸ್ ಠಾಣೆಗಳಲ್ಲಿ ನೂರಾರು ಪ್ರಕರಣಗಳು ದಾಖಲಾಗಿವೆ.ಸಾಕಷ್ಟು ಪ್ರಮಾಣದಲ್ಲಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ.ಹಲವರನ್ನ ಬಂಧಿಸಲಾಗಿದೆ.ಹಾಸ್ಟೆಲ್ ಗಳು,ಪಿಜಿ ಗಳು,ಸ್ಟೂಡೆಂಟ್ ಗಳು ತಂಗಿರುವ ಕೊಠಡಿಗಳು,ಲಾಡ್ಜ್ ಗಳು ಸೇರಿದಂತೆ ಸಾಕಷ್ಟು ಸ್ಥಳಗಳ ಮೇಲೆ ದಾಳಿ ನಡೆಸಿ ಮಾದಕ ವಸ್ತುಗಳ ವಿರುದ್ದ ಕಾರ್ಯಾಚರಣೆ ನಡೆಸಿದ್ದಾರೆ. ಮತ್ತೊಂದು ಹೆಜ್ಜೆ ಮುಂದಿಟ್ಟಿರುವ ಪೊಲೀಸರು ನಶ ಮುಕ್ತ ಭಾರತ ಅಭಿಯಾನ ಆರಂಭಿಸಿದ್ದಾರೆ.ಮಾದಕ ವಸ್ತುಗಳಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಅಭಿಯಾನ ಆರಂಭಿಸಿದ್ದಾರೆ.ನಗರದ ಎಲ್ಲಾ ಠಾಣೆಗಳಲ್ಲೂ ವಿಧ್ಯಾರ್ಥಿಗಳು ಹಾಗೂ ಸಾರ್ವಜನಿಕರ ಸಹಯೋಗದೊಂದಿಗೆ ಜಾಗೃತಿ ಮೂಡಿಸಲಾಗುತ್ತಿದೆ.ವಿಜಯನಗರ ಉಪವಿಭಾಗದ ವತಿಯಿಂದ ಅಭಿಯಾನಕ್ಕೆ ಅದ್ದೂರಿಯಾಗಿ ಚಾಲನೆ ದೊರೆತಿದೆ.ಮಂಡಿ,ಮೇಟಗಳ್ಳಿ,ಲಷ್ಕರ್,ವಿಜಯನಗರ,ಹೆಬ್ಬಾಳ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅರಿವು ಮೂಡಿಸಲಾಗುತ್ತಿದೆ.ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕರು ಸಹ ಪೊಲೀಸರಿಗೆ ಸಾಥ್ ನೀಡಿದ್ದಾರೆ.ಪೋಸ್ಟರ್ ಗಳು,ಬ್ಯಾನರ್ ಗಳ,ಭಿತ್ತಿಪತ್ರಗಳ ಮೂಲಕ ಸಂದೇಶಗಳನ್ನ ರವಾನಿಸಲಾಗುತ್ತಿದೆ.ಸಸಿಗಳನ್ನ‌ ನೆಡುವ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಕಾಲೇಜ್ ಗಳಲ್ಲಿ ಸಹ ವಿಧ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿಗಳನ್ನ ನೀಡಲಾಗುತ್ತಿದೆ.ಮೊದಲ ಬಾರಿಗೆ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಉರ್ದು ಭಾಷೆಯಲ್ಲಿ ಬರೆದ ಸಂದೇಶಗಳು ಗಮನ ಸೆಳೆಯುತ್ತಿದೆ.ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಬಿಂದುಮಣಿ,ಅಪರಾಧ ಮತ್ತು ಸಂಚಾರ ಡಿಸಿಪಿ ಸುಂದರ ರಾಜ್,ಎಸಿಪಿ ರವಿಪ್ರಸಾದ್ ನಿರೀಕ್ಷಕರಾದ ಅರುಣ್,ಪ್ರಸಾದ್,ಸುರೇಶ್ ಕುಮಾರ್,ದಿವಾಕರ್ ರವರು ಸೇರಿದಂತೆ ಹಲವು ಸಿಬ್ಬಂದಿಗಳು ಅಭಿಯಾನದ ಮೂಲಕ ಜನರ ಮನೆ ಮನೆಗೆ ತಲುಪುವ ಪ್ರಯತ್ನ ಮಾಡುತ್ತಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು… ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *