ಮಾದಕ ವಸ್ತುಗಳ ಹಾವಳಿಗೆ ಬ್ರೇಕ್ ಹಾಕಲು ನಗರ ಪೊಲೀಸರ ಸಮರ…ನಗರದಾದ್ಯಂತ ಜಾಗೃತಿ…ನಶ ಮುಕ್ತ ಭಾರತ ಅಭಿಯಾನ ಆರಂಭ…

ಮಾದಕ ವಸ್ತುಗಳ ಹಾವಳಿಗೆ ಬ್ರೇಕ್ ಹಾಕಲು ನಗರ ಪೊಲೀಸರ ಸಮರ…ನಗರದಾದ್ಯಂತ ಜಾಗೃತಿ…ನಶ ಮುಕ್ತ ಭಾರತ ಅಭಿಯಾನ ಆರಂಭ…

ಮೈಸೂರು,ಆ13,Tv10 ಕನ್ನಡ

ಮಾದಕ ವಸ್ತುಗಳ ಹಾವಳಿಗೆ ಬ್ರೇಕ್ ಹಾಕಲು ಮೈಸೂರು ನಗರ ಖಾಕಿ ಪಡೆ ಸಮರ ಸಾರಿದೆ.ಮಾದಕ ವಸ್ತುಗಳ ತಯಾರಿಕಾ ಘಟಕ ಪತ್ತೆಯಾದ ಬೆನ್ನ ಹಿಂದೆಯೇ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ನೇತೃತ್ವದಲ್ಲಿ ದಾಳಿಗಳು ನಡೆಯುತ್ತಿದೆ.ಈಗಾಗಲೇ ವಿವಿದ ಪೊಲೀಸ್ ಠಾಣೆಗಳಲ್ಲಿ ನೂರಾರು ಪ್ರಕರಣಗಳು ದಾಖಲಾಗಿವೆ.ಸಾಕಷ್ಟು ಪ್ರಮಾಣದಲ್ಲಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ.ಹಲವರನ್ನ ಬಂಧಿಸಲಾಗಿದೆ.ಹಾಸ್ಟೆಲ್ ಗಳು,ಪಿಜಿ ಗಳು,ಸ್ಟೂಡೆಂಟ್ ಗಳು ತಂಗಿರುವ ಕೊಠಡಿಗಳು,ಲಾಡ್ಜ್ ಗಳು ಸೇರಿದಂತೆ ಸಾಕಷ್ಟು ಸ್ಥಳಗಳ ಮೇಲೆ ದಾಳಿ ನಡೆಸಿ ಮಾದಕ ವಸ್ತುಗಳ ವಿರುದ್ದ ಕಾರ್ಯಾಚರಣೆ ನಡೆಸಿದ್ದಾರೆ. ಮತ್ತೊಂದು ಹೆಜ್ಜೆ ಮುಂದಿಟ್ಟಿರುವ ಪೊಲೀಸರು ನಶ ಮುಕ್ತ ಭಾರತ ಅಭಿಯಾನ ಆರಂಭಿಸಿದ್ದಾರೆ.ಮಾದಕ ವಸ್ತುಗಳಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಅಭಿಯಾನ ಆರಂಭಿಸಿದ್ದಾರೆ.ನಗರದ ಎಲ್ಲಾ ಠಾಣೆಗಳಲ್ಲೂ ವಿಧ್ಯಾರ್ಥಿಗಳು ಹಾಗೂ ಸಾರ್ವಜನಿಕರ ಸಹಯೋಗದೊಂದಿಗೆ ಜಾಗೃತಿ ಮೂಡಿಸಲಾಗುತ್ತಿದೆ.ವಿಜಯನಗರ ಉಪವಿಭಾಗದ ವತಿಯಿಂದ ಅಭಿಯಾನಕ್ಕೆ ಅದ್ದೂರಿಯಾಗಿ ಚಾಲನೆ ದೊರೆತಿದೆ.ಮಂಡಿ,ಮೇಟಗಳ್ಳಿ,ಲಷ್ಕರ್,ವಿಜಯನಗರ,ಹೆಬ್ಬಾಳ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅರಿವು ಮೂಡಿಸಲಾಗುತ್ತಿದೆ.ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕರು ಸಹ ಪೊಲೀಸರಿಗೆ ಸಾಥ್ ನೀಡಿದ್ದಾರೆ.ಪೋಸ್ಟರ್ ಗಳು,ಬ್ಯಾನರ್ ಗಳ,ಭಿತ್ತಿಪತ್ರಗಳ ಮೂಲಕ ಸಂದೇಶಗಳನ್ನ ರವಾನಿಸಲಾಗುತ್ತಿದೆ.ಸಸಿಗಳನ್ನ‌ ನೆಡುವ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಕಾಲೇಜ್ ಗಳಲ್ಲಿ ಸಹ ವಿಧ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿಗಳನ್ನ ನೀಡಲಾಗುತ್ತಿದೆ.ಮೊದಲ ಬಾರಿಗೆ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಉರ್ದು ಭಾಷೆಯಲ್ಲಿ ಬರೆದ ಸಂದೇಶಗಳು ಗಮನ ಸೆಳೆಯುತ್ತಿದೆ.ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಬಿಂದುಮಣಿ,ಅಪರಾಧ ಮತ್ತು ಸಂಚಾರ ಡಿಸಿಪಿ ಸುಂದರ ರಾಜ್,ಎಸಿಪಿ ರವಿಪ್ರಸಾದ್ ನಿರೀಕ್ಷಕರಾದ ಅರುಣ್,ಪ್ರಸಾದ್,ಸುರೇಶ್ ಕುಮಾರ್,ದಿವಾಕರ್ ರವರು ಸೇರಿದಂತೆ ಹಲವು ಸಿಬ್ಬಂದಿಗಳು ಅಭಿಯಾನದ ಮೂಲಕ ಜನರ ಮನೆ ಮನೆಗೆ ತಲುಪುವ ಪ್ರಯತ್ನ ಮಾಡುತ್ತಿದ್ದಾರೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *