ವಿದೇಶಿ ಮಹಿಳೆ ಜೊತೆ ಅನುಚಿತ ವರ್ತನೆ…ಮಧ್ಯರಾತ್ರಿ ಮನೆಗೆ ನುಗ್ಗಿದ ಖದೀಮ…ಕಪಿಮುಷ್ಠಿಯಿಂದ ಬಚಾವ್ ಆದ ಮಹಿಳೆ…ತಡವಾಗಿ ಬೆಳಕಿಗೆ ಬಂದ ಪ್ರಕರಣ…

ವಿದೇಶಿ ಮಹಿಳೆ ಜೊತೆ ಅನುಚಿತ ವರ್ತನೆ…ಮಧ್ಯರಾತ್ರಿ ಮನೆಗೆ ನುಗ್ಗಿದ ಖದೀಮ…ಕಪಿಮುಷ್ಠಿಯಿಂದ ಬಚಾವ್ ಆದ ಮಹಿಳೆ…ತಡವಾಗಿ ಬೆಳಕಿಗೆ ಬಂದ ಪ್ರಕರಣ…

  • Crime
  • August 13, 2025
  • No Comment
  • 258

ಮೈಸೂರು,ಆ13,Tv10 ಕನ್ನಡ

ಮಧ್ಯರಾತ್ರಿ ವೇಳೆ ಬಲವಂತವಾಗಿ ಮನೆಗೆ ನುಗ್ಗಿದ ಅಪರಿಚಿತ ವ್ಯಕ್ತಿಯೊಬ್ಬ ವಿದೇಶಿ ಮಹಿಳೆಯ ಜೊತೆ ಅಸಭ್ಯವಾಗಿ ನಡೆದುಕೊಂಡ ಘಟನೆ ಮೈಸೂರಿನ ಗೋಕುಲಂ ಬಡಾವಣೆಯಲ್ಲಿ ನಡೆದಿದೆ.ವಿದೇಶಿ ಮಹಿಳೆಯ ಸಮಯಪ್ರಜ್ಞೆ ಆಕೆಯನ್ನ ಅನಾಹುತದಿಂದ ಪಾರು ಮಾಡಿದೆ.ಅಪರಿಚಿತನ ವಿರುದ್ದ ವಿದೇಶಿ ಮಹಿಳೆ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.

ಯು.ಕೆ.ಪ್ರಜೆ 45 ವರ್ಷದ ಮಹಿಳೆಯಿಂದ ಪ್ರಕರಣ ದಾಖಲಾಗಿದೆ.ಜುಲೈ 18 ರಂದು ಯೋಗಾಭ್ಯಾಸಕ್ಕಾಗಿ ಪ್ರವಾಸಿ ವೀಸಾದಲ್ಲಿ ಬಂದ ಯು.ಕೆ.ಮಹಿಳೆ ಗೋಕುಲಂ ಬಡಾವಣೆಯಲ್ಲಿ ತಂಗಿದ್ದರು.27-7-2025 ರ ರಾತ್ರಿ ಸುಮಾರು 11.45 ರಲ್ಲಿ ಬಾಗಿಲು ತಟ್ಟಿದ ಶಬ್ದವಾಗಿದೆ.ಫುಡ್ ಡೆಲಿವರಿ ಬಾಯ್ ಇರಬಹುದೆಂದು ಮಹಿಳೆ ಬಾಗಿಲು ತೆರೆದಿದ್ದಾರೆ.ಫುಡ್ ಆರ್ಡರ್ ಮಾಡಿಲ್ಲವೆಂದು ಹೇಳುತ್ತಿದ್ದ ವೇಳೆ ಮಹಿಳೆಯನ್ನ ಬೆಡ್ ಮೇಲೆ ತಳ್ಳಿ ಬಾಗಿಲು ಚಿಲಕ ಹಾಕುವ ಪ್ರಯತ್ನ ಮಾಡಿದ್ದಾನೆ.ಈ ವೇಳೆ ಮಹಿಳೆ ಕಿರುಚಲು ಪ್ರಯತ್ನಿಸಿದಾಗ ಬಾಯಿಮುಚ್ಚಿದ್ದಾನೆ.ಆತನನ್ನ ತಳ್ಳಿ ಮಹಿಳೆ ಹೊರಬಂದು ಕಿರುಚಾಡಿದಾಗ ರಾಜೀವ್ ಎಂಬುವರು ಸಹಾಯಕ್ಕೆ ಬಂದಿದ್ದಾರೆ.ಅಪರಿಚಿತನನ್ನು ಮನೆಯೊಳಗೆ ತಳ್ಳಿ ಹೊರಗಿನಿಂದ ಬಾಗಿಲು ಭದ್ರಪಡಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಪೊಲೀಸರು ಬರುವಷ್ಟರಲ್ಲಿ ಬಾಲ್ಕನಿಯಿಂದ ಕಿಡಿಗೇಡಿ ಪರಾರಿಯಾಗಿದ್ದಾನೆ
ನೊಂದ ವಿದೇಶಿ ಮಹಿಳೆ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು… ಹುಣಸೂರು,ಡಿ20,Tv10 ಕನ್ನಡ ಸುಡುತ್ತಿರುವ ಬಿಸಿನೀರಿನ ಪಾತ್ರೆಗೆ ಬಿದ್ದು ಹೆಣ್ಣುಮಗು ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ವಿಜಯಗಿರಿ ಹಾಡಿಯಲ್ಲಿ ನಡೆದಿದೆ. ಆದಿವಾಸಿ…
ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ… ಹುಣಸೂರು,ಡಿ19,Tv10 ಕನ್ನಡ ಕ್ಲುಲ್ಲಕ ಕಾರಣಕ್ಕೆ ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಹುಣಸೂರು ನಗರದಲ್ಲಿ ನಡೆದಿದೆ.ನಿಜಾಂ ಮೊಹಲ್ಲಾದ ನಿವಾಸಿ ಖಾಜಾಪೀರ್(44)ಕೊಲೆಯಾದ…
ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ… ಮಂಡ್ಯ,ಡಿ19,Tv10 ಕನ್ನಡ ಜಮೀನು ವಿಚಾರದಲ್ಲಿ ಮಾಜಿ ಶಾಸಕ ಹಾಗೂ ಪುತ್ರ ವ್ಯಕ್ತಿ ಮೇಲೆ…

Leave a Reply

Your email address will not be published. Required fields are marked *