ವಿದೇಶಿ ಮಹಿಳೆ ಜೊತೆ ಅನುಚಿತ ವರ್ತನೆ…ಮಧ್ಯರಾತ್ರಿ ಮನೆಗೆ ನುಗ್ಗಿದ ಖದೀಮ…ಕಪಿಮುಷ್ಠಿಯಿಂದ ಬಚಾವ್ ಆದ ಮಹಿಳೆ…ತಡವಾಗಿ ಬೆಳಕಿಗೆ ಬಂದ ಪ್ರಕರಣ…

ವಿದೇಶಿ ಮಹಿಳೆ ಜೊತೆ ಅನುಚಿತ ವರ್ತನೆ…ಮಧ್ಯರಾತ್ರಿ ಮನೆಗೆ ನುಗ್ಗಿದ ಖದೀಮ…ಕಪಿಮುಷ್ಠಿಯಿಂದ ಬಚಾವ್ ಆದ ಮಹಿಳೆ…ತಡವಾಗಿ ಬೆಳಕಿಗೆ ಬಂದ ಪ್ರಕರಣ…

  • Crime
  • August 13, 2025
  • No Comment
  • 287

ಮೈಸೂರು,ಆ13,Tv10 ಕನ್ನಡ

ಮಧ್ಯರಾತ್ರಿ ವೇಳೆ ಬಲವಂತವಾಗಿ ಮನೆಗೆ ನುಗ್ಗಿದ ಅಪರಿಚಿತ ವ್ಯಕ್ತಿಯೊಬ್ಬ ವಿದೇಶಿ ಮಹಿಳೆಯ ಜೊತೆ ಅಸಭ್ಯವಾಗಿ ನಡೆದುಕೊಂಡ ಘಟನೆ ಮೈಸೂರಿನ ಗೋಕುಲಂ ಬಡಾವಣೆಯಲ್ಲಿ ನಡೆದಿದೆ.ವಿದೇಶಿ ಮಹಿಳೆಯ ಸಮಯಪ್ರಜ್ಞೆ ಆಕೆಯನ್ನ ಅನಾಹುತದಿಂದ ಪಾರು ಮಾಡಿದೆ.ಅಪರಿಚಿತನ ವಿರುದ್ದ ವಿದೇಶಿ ಮಹಿಳೆ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.

ಯು.ಕೆ.ಪ್ರಜೆ 45 ವರ್ಷದ ಮಹಿಳೆಯಿಂದ ಪ್ರಕರಣ ದಾಖಲಾಗಿದೆ.ಜುಲೈ 18 ರಂದು ಯೋಗಾಭ್ಯಾಸಕ್ಕಾಗಿ ಪ್ರವಾಸಿ ವೀಸಾದಲ್ಲಿ ಬಂದ ಯು.ಕೆ.ಮಹಿಳೆ ಗೋಕುಲಂ ಬಡಾವಣೆಯಲ್ಲಿ ತಂಗಿದ್ದರು.27-7-2025 ರ ರಾತ್ರಿ ಸುಮಾರು 11.45 ರಲ್ಲಿ ಬಾಗಿಲು ತಟ್ಟಿದ ಶಬ್ದವಾಗಿದೆ.ಫುಡ್ ಡೆಲಿವರಿ ಬಾಯ್ ಇರಬಹುದೆಂದು ಮಹಿಳೆ ಬಾಗಿಲು ತೆರೆದಿದ್ದಾರೆ.ಫುಡ್ ಆರ್ಡರ್ ಮಾಡಿಲ್ಲವೆಂದು ಹೇಳುತ್ತಿದ್ದ ವೇಳೆ ಮಹಿಳೆಯನ್ನ ಬೆಡ್ ಮೇಲೆ ತಳ್ಳಿ ಬಾಗಿಲು ಚಿಲಕ ಹಾಕುವ ಪ್ರಯತ್ನ ಮಾಡಿದ್ದಾನೆ.ಈ ವೇಳೆ ಮಹಿಳೆ ಕಿರುಚಲು ಪ್ರಯತ್ನಿಸಿದಾಗ ಬಾಯಿಮುಚ್ಚಿದ್ದಾನೆ.ಆತನನ್ನ ತಳ್ಳಿ ಮಹಿಳೆ ಹೊರಬಂದು ಕಿರುಚಾಡಿದಾಗ ರಾಜೀವ್ ಎಂಬುವರು ಸಹಾಯಕ್ಕೆ ಬಂದಿದ್ದಾರೆ.ಅಪರಿಚಿತನನ್ನು ಮನೆಯೊಳಗೆ ತಳ್ಳಿ ಹೊರಗಿನಿಂದ ಬಾಗಿಲು ಭದ್ರಪಡಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಪೊಲೀಸರು ಬರುವಷ್ಟರಲ್ಲಿ ಬಾಲ್ಕನಿಯಿಂದ ಕಿಡಿಗೇಡಿ ಪರಾರಿಯಾಗಿದ್ದಾನೆ
ನೊಂದ ವಿದೇಶಿ ಮಹಿಳೆ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *