ನಕಲಿ ದಾಖಲೆ ಸಲ್ಲಿಸಿ SBI ಗೆ 27.16 ಲಕ್ಷ ಧೋಖಾ…ಮೂವರ ವಿರುದ್ದ ಪ್ರತ್ಯೇಕ FIR…

ನಕಲಿ ದಾಖಲೆ ಸಲ್ಲಿಸಿ SBI ಗೆ 27.16 ಲಕ್ಷ ಧೋಖಾ…ಮೂವರ ವಿರುದ್ದ ಪ್ರತ್ಯೇಕ FIR…

  • Crime
  • August 16, 2025
  • No Comment
  • 359

ನಕಲಿ ದಾಖಲೆ ಸಲ್ಲಿಸಿ SBI ಗೆ 27.16 ಲಕ್ಷ ಧೋಖಾ…ಮೂವರ ವಿರುದ್ದ ಪ್ರತ್ಯೇಕ FIR…

ಮೈಸೂರು,ಆ16,Tv10 ಕನ್ನಡ

ನಕಲಿ ದಾಖಲೆಗಳನ್ನ ಸಲ್ಲಿಸಿ ಮೈಸೂರಿನ ಬೃಂದಾವನ ಬಡಾವಣೆಯ SBI ಬ್ಯಾಂಕ್ ಗೆ ಮೂವರು ಐನಾತಿಗಳು 27.16 ಲಕ್ಷ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ವಂಚಕರ ವಿರುದ್ದ ಬ್ರಾಂಚ್ ಮ್ಯಾನೇಜರ್ ಪ್ರತಿಭಾ ರವರು ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ್ ಪ್ರಕರಣಗಳನ್ನ ದಾಖಲಿಸಿದ್ದಾರೆ.

ಕೆ.ಆರ್.ನಗರ ಮೂಲದ ಮೇಘ ಎಂಬ ಮಹಿಳೆ ಮೈಸೂರು ಮಹಾನಗರ ಪಾಲಿಕೆ ಕಚೇರಿಯಲ್ಲಿ ಸಹಾಯಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು ಮಾಸಿಕ ಸಂಬಳ 34,700/- ರೂ ಬರುತ್ತಿದ್ದು ಬೃಂದಾವನ ಬಡಾವಣೆಯ ಕೆನರಾ ಬ್ಯಾಂಕ್ ಖಾತೆಗೆ ಜಮಾ ಆಗುತ್ತಿರುವುದಾಗಿ ದಾಖಲೆ ಸೃಷ್ಟಿಸಿದ್ದಾರೆ.ಸ್ಯಾಲರಿ ಸರ್ಟಿಫಿಕೇಟ್,ಬ್ಯಾಂಕ್ ನಲ್ಲಿ ವಹಿವಾಟು ನಡೆಸಿರುವ ಲೆಡ್ಜರ್ ಎಕ್ಟ್ರಾಕ್ಟ್ ಸೇರಿದಂತೆ ಸಾಕಷ್ಟು ದಾಖಲೆಗಳನ್ನ ನಕಲಿಯಾಗಿ ಸೃಷ್ಟಿಸಿ ಸಲ್ಲಿಸಿದ್ದಾರೆ.ಈ ದಾಖಲೆಗಳ ಆಧಾರದ ಮೇಲೆ SBI ನಿಂದ 9.16 ಲಕ್ಷ ಸಾಲ ಮಂಜೂರಾಗಿದೆ.ಹಣ ಮರುಪಾವತಿ ಮಾಡದೆ ಸುಸ್ತಿಯಾದಾಗ ಬ್ಯಾಂಕ್ ನಿಂದ ಪರಿಶೀಲನೆ ನಡೆಸಿದ್ದಾರೆ.ಈ ವೇಳೆ ಮೇಘಾ ಬ್ಯಾಂಕ್ ಗೆ ನಕಲಿ ದಾಖಲೆಗಳನ್ನ‌ ನೀಡಿ ವಂಚಿಸಿರುವುದು ಬೆಳಕಿಗೆ ಬಂದಿದೆ.

ಎರಡನೇ ಪ್ರಕರಣದಲ್ಲಿ ಕ್ಯಾತಮಾರನಹಳ್ಳಿಯ ರವಿಕುಮಾರ್ ಎಂಬುವರು ಸಗ್ರಹ ಮ್ಯಾನೇಜ್ ಮೆಂಟ್ ಸರ್ವಿಸಸ್ ಪ್ರೈ ಲಿಮಿಟೆಡ್ ನಲ್ಲಿ ಟೀಮ್ ಲೀಡರ್ ಎಂದು ನಂಬಿಸಿ 37,800 ರೂ ಮಾಸಿಕ ಸಂಬಳ ಬರುತ್ತಿರುವುದಾಗಿ ನಕಲಿ ಸ್ಯಾಲರಿ ಸರ್ಟಿಫಿಕೇಟ್,ಬ್ಯಾಂಕ್ ವಹಿವಾಟಿನ ದಾಖಲೆಗಳನ್ನ ಸಲ್ಲಿಸಿ 8 ಲಕ್ಷ ಸಾಲ ಪಡೆದು ವಂಚಿಸಿದ್ದಾರೆ.

ಮೂರನೇ ಪ್ರಕರಣದಲ್ಲಿ ರಾಘವೇಂದ್ರ ನಗರದ ಪಿ.ದೀಪಕ್ ಎಂಬುವರು ಸ್ಯಾನ್ ಇಂಜಿನಿಯರಿಂಗ್ ಅಂಡ್ ಲೋಕೋಮೋಟಿವ್ ಕಂಪನಿಯ ಸೇಲ್ಸ್ ಆಫೀಸರ್ ಎಂದು ನಂಬಿಸಿ ಮಾಸಿಕ 22,817/- ರೂ ಸಂಬಳ ಬರುತ್ತಿರುವುದಾಗಿ ಹಾಗೂ ಬ್ಯಾಂಕ್ ವಹಿವಾಟಿನ ನಕಲಿ ದಾಖಲೆ ಸೃಷ್ಟಿಸಿ SBI ನಿಂದ 6 ಲಕ್ಷ ಸಾಲ ಪಡೆದಿದ್ದಾರೆ.

ಮೂರು ವಂಚಕರೂ ಸಹ ಒಂದೇ ರೀತಿ ನಕಲಿ ದಾಖಲೆಗಳನ್ನ ಸೃಷ್ಟಿಸಿ ಬ್ಯಾಂಕ್ ಗೆ ವಂಚಿಸಿದ್ದಾರೆ.ನ್ಯಾಯಾಲಯದ ಆದೇಶದಂತೆ ವಿವಿಪುರಂ ಠಾಣಾ ಪೊಲೀಸರು ಮೂವರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ ಹರಿಸಲು ರೈತರ ಮನವಿ

ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ…

ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ ಹರಿಸಲು ರೈತರ ಮನವಿ ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಗೇಟ್ ಸಮೀಪದ ಸರ್ವೇ ನಂ.218/1ಕ್ಕೆ ಸೇರಿದ ಸರ್ಕಾರಿ…
ಮೈಸೂರು, ಏಪ್ರಿಲ್ 13: ವಿಶ್ವಪ್ರಸಿದ್ಧ KRS Brindavan Gardens ನಲ್ಲಿ ಡಿಜಿಟಲ್ ಯುಗದಲ್ಲಿಯೂ “ಕ್ಯಾಶ್ ಮಾತ್ರ” ನಿಯಮ ಮುಂದುವರಿಯುತ್ತಿರುವುದು ಪ್ರವಾಸಿಗರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.

ಮೈಸೂರು, ಏಪ್ರಿಲ್ 13: ವಿಶ್ವಪ್ರಸಿದ್ಧ KRS Brindavan Gardens ನಲ್ಲಿ ಡಿಜಿಟಲ್…

ಮೈಸೂರು, ಏಪ್ರಿಲ್ 13: ವಿಶ್ವಪ್ರಸಿದ್ಧ KRS Brindavan Gardens ನಲ್ಲಿ ಡಿಜಿಟಲ್ ಯುಗದಲ್ಲಿಯೂ “ಕ್ಯಾಶ್ ಮಾತ್ರ” ನಿಯಮ ಮುಂದುವರಿಯುತ್ತಿರುವುದು ಪ್ರವಾಸಿಗರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಪ್ರವೇಶ ಟಿಕೆಟ್ ಪಡೆಯಲು ಬರುವವರಿಗೆ…
ಯುವಕನ ಕಿಡ್ನಾಪ್…ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್…ಸೆಕ್ಸ್ ವರ್ಕ್ ಗೆಯೂಸ್…ಕರಾಳದಂಧೆಯ ಮತ್ತೊಂದು ಮುಖ ಬಯಲು…

ಯುವಕನ ಕಿಡ್ನಾಪ್…ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್…ಸೆಕ್ಸ್ ವರ್ಕ್ ಗೆಯೂಸ್…ಕರಾಳದಂಧೆಯ ಮತ್ತೊಂದು ಮುಖ…

ಯುವಕನ ಕಿಡ್ನಾಪ್…ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್…ಸೆಕ್ಸ್ ವರ್ಕ್ ಗೆಯೂಸ್…ಕರಾಳದಂಧೆಯ ಮತ್ತೊಂದು ಮುಖ ಬಯಲು… ನಂಜನಗೂಡು,ಏ12,Tv10 ಕನ್ನಡ ಯುವಕನೊಬ್ಬನನ್ನ ಕಿಡ್ನಾಪ್ ಮಾಡಿ ಬಲವಂತವಾಗಿ ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್ ಹಾಗೂ…

Leave a Reply

Your email address will not be published. Required fields are marked *