ಕುಡಿತಕ್ಕೆ ಹಣ ನೀಡದ ಪತ್ನಿ ಭೀಕರ ಕೊಲೆ…ಪತಿಯಿಂದಲೇ ಕೃತ್ಯ…ಆರೋಪಿ ಅಂದರ್…

ಕುಡಿತಕ್ಕೆ ಹಣ ನೀಡದ ಪತ್ನಿ ಭೀಕರ ಕೊಲೆ…ಪತಿಯಿಂದಲೇ ಕೃತ್ಯ…ಆರೋಪಿ ಅಂದರ್…

ಮೈಸೂರು,ಆ17,Tv10 ಕನ್ನಡ

ಕುಡಿತದ ಚಟಕ್ಕೆ ದಾಸನಾಗಿದ್ದ ಪತಿ ಹಣ ನೀಡದ ಪತ್ನಿಯನ್ನ ಮೊಚ್ಚಿನಿಂದ ಹಲ್ಲೆ ಮಾಡಿ ಭೀಕರವಾಗಿ ಕೊಂದ ಘಟನೆ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಹದೇಶ್ವರ ಬಡಾವಣೆಯಲ್ಲಿ ನಡೆದಿದೆ.ಪತ್ನಿ ಗಾಯಿತ್ರಿ ರವರನ್ಮ ಕೊಲೆ ಮಾಡಿದ ಪತಿ ಪಾಪಣ್ಣ ಪೊಲೀಸರ ಅತಿಥಿಯಾಗಿದ್ದಾನೆ.

ಈ ಹಿಂದೆ ರಿಯಲ್ ಎಸ್ಟೇಟ್ ವಹಿವಾಟು ನಡೆಸುತ್ತಿದ್ದ ಪಾಪಣ್ಣ ಸಾಲಗಾರನಾಗಿದ್ದ.ಜೊತೆಗೆ ಕುಡಿತದ ಚಟಕ್ಕೆ ದಾಸನಾಗಿದ್ದ.ಕೆಲಸವಿಲ್ಲದೆ ಅಲೆಯುತ್ತಿದ್ದ ಪಾಪಣ್ಣ ಹಣಕ್ಕಾಗಿ ಪತ್ನಿ ಹಾಗೂ ಮಕ್ಕಳನ್ನ ಪೀಡಿಸುತ್ತಿದ್ದ.ಪಾಪಣ್ಣ ಮಗಳ ಮದುವೆಯನ್ನ ಇಬ್ಬರು ಗಂಡು ಮಕ್ಕಳು ಮಾಡಿದ್ದರು.ಇದಕ್ಕಾಗಿ ಮಾಡಿದ್ದ ಸಾಲ ಗಂಡು ಮಕ್ಕಳೇ ತೀರಿಸುತ್ತಿದ್ದರು.ಹೀಗಿದ್ದರೂ ದುಶ್ಚಟಗಳಿಂದ ಮಾಡಿದ್ದ ಸಾಲ ತೀರಿಸಲು ಆಗಾಗ ಹಣಕ್ಕಾಗಿ ಪತ್ನಿಯನ್ನ ಹಾಗೂ ಮಕ್ಕಳನ್ನ ಪೀಡಿಸುತ್ತಿದ್ದ.

ಸಾಹುಕಾರಹುಂಡಿಯಲ್ಲಿ ಜಮೀನು ಇತ್ತು.ಜಮೀನು ಮಾರಾಟ ಮಾಡಿ ಹಣ ಕೊಡುವಂತೆ ಪಟ್ಟು ಹಿಡಿದಿದ್ದ.ಈ ವಿಚಾರದಲ್ಲಿ ದಂಪತಿ ನಡುವೆ ಆಗಾಗ ಗಲಾಟೆ ಆಗುತ್ತಿತ್ತು.ಇದೇ ವಿಚಾರದಲ್ಲಿ ಕ್ಯಾತೆ ತೆಗೆದು ಪಾಪಣ್ಣ ಮನೆಯಲ್ಲಿ ಮಕ್ಕಳು ಇಲ್ಲದಿದ್ದಾಗ ಪತ್ನಿ ಗಾಯಿತ್ರಿಯನ್ನ ಮೊಚ್ಚಿನಿಂದ ಹಲ್ಲೆ ನಡೆಸಿ ಕೊಂದಿದ್ದಾನೆ. ಕೃತ್ಯವೆಸಗಿದ ಪಾಪಣ್ಣ ಗಾಬರಿಯಿಂದ ಹೊರಗಿನಿಂದ ಬೀಗ ಹಾಕುತ್ತಿದ್ದ ದೃಶ್ಯ ಮಗ ನೋಡಿದ್ದಾರೆ.ಪ್ರಶ್ನಿಸಿದಾಗ ಪಾಪಣ್ಣ ತಬ್ಬಿಬ್ಬಾಗಿದ್ದಾರೆ.ಕೈಗಳು ರಕ್ತಮಯವಾಗಿರುವುದನ್ನ ಗಮನಿಸಿ ಬಾಗಿಲು ತೆರೆದು ನೋಡಿದಾಗ ಗಾಯಿತ್ರಿ ರಕ್ತದ ಮಡುವಿನಲ್ಲಿ ಕಂಡುಬಂದಿದ್ದಾರೆ.ಹಣಕ್ಕಾಗಿ ಪೀಡಿಸಿದ ತಂದೆ ಪಾಪಣ್ಣ ತಾಯಿ ಗಾಯಿತ್ರಿ ರವರನ್ನ ಕೊಲೆ ಮಾಡಿದ್ದಾನೆಂದು ಪುತ್ರ ವಿಜಯನಗರ ಪೊಲೀಸ್ ಠಾಣೆಯಲ್ಲಿ ಲಿಖಿತ ಹೇಳಿಕೆ ನೀಡಿದ್ದಾರೆ.ಪ್ರಕರಣ ದಾಖಲಿಸಿಕೊಂಡ ವಿಜಯನಗರ ಪೊಲೀಸರು ಪಾಪಣ್ಣ ನನ್ನು ಬಂದಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *