ದರೋಡೆ ಆರೋಪಿ ಕಾಲಿಗೆ ಗುಂಡಿನ ರುಚಿ…ಪೇದೆ ಮೇಲೆ ಅಟ್ಯಾಕ್ ಮಾಡಿದ ಆರೋಪಿ…ಆತ್ಮರಕ್ಷಣೆಗಾಗಿ ಫೈರಿಂಗ್…

ದರೋಡೆ ಆರೋಪಿ ಕಾಲಿಗೆ ಗುಂಡಿನ ರುಚಿ…ಪೇದೆ ಮೇಲೆ ಅಟ್ಯಾಕ್ ಮಾಡಿದ ಆರೋಪಿ…ಆತ್ಮರಕ್ಷಣೆಗಾಗಿ ಫೈರಿಂಗ್…

  • Crime
  • August 22, 2025
  • No Comment
  • 187

ದರೋಡೆ ಆರೋಪಿ ಕಾಲಿಗೆ ಗುಂಡಿನ ರುಚಿ…ಪೇದೆ ಮೇಲೆ ಅಟ್ಯಾಕ್ ಮಾಡಿದ ಆರೋಪಿ…ಆತ್ಮರಕ್ಷಣೆಗಾಗಿ ಫೈರಿಂಗ್…

ಮಂಡ್ಯ,ಆ22,Tv10 ಕನ್ನಡ

ಚಿನ್ನದಂಗಡಿ ಕಳ್ಳತನ ಮಾಡುವುದನ್ನು ಕಂಡ ಹೋಟೆಲ್ ಮಾಲೀಕನ ಹತ್ಯೆ ಪ್ರಕರಣಕ್ಕೆ ಸಂಭಂಧಿಸಿದ
ಪ್ರಮುಖ ಆರೋಪಿಗೆ ಮಂಡ್ಯ ಪೊಲೀಸರು ಗುಂಡಿನ ರುಚಿ ತೋರಿಸಿದ್ದಾರೆ.
ಆರೋಪಿ ಕಿರಣ್ ಕಾಲಿಗೆ ಪೊಲೀಸರ ಗುಂಡೇಟು ಬಿದ್ದಿದೆ.ಬಂಧಿಸುವ ವೇಳೆ ಪೊಲೀಸ್ ಪೇದೆ ಮೇಲೆ ಚಾಕುವಿನಿಂದ ಕಿರಣ್ ಹಲ್ಲೆ ಮಾಡಿದ್ದಾನೆ.ಈ ವೇಳೆ ಪ್ರಾಣ ರಕ್ಷಣೆಗಾಗಿ ಆರೋಪಿ ಕಾಲಿಗೆ ಖಾಕಿ ಗುಂಡು ಹೊಡೆದಿದೆ.
ಹಲಗೂರು ಠಾಣೆ CPI ಶ್ರೀಧರ್ ಅವರು ಫೈರಿಂಗ್ ಮಾಡಿ ಪೇದೆ ನೆರವಿಗೆ ಬಂದಿದ್ದಾರೆ.
ಮಂಡ್ಯದ ಮಳವಳ್ಳಿ ತಾಲೂಕಿನ ಭೀಮನಹಳ್ಳಿ ಬಳಿ ಘಟನೆ ನಡೆದಿದೆ.
ಆಗಸ್ಟ್ 17ರಂದು ಕಿರುಗಾವಲು ಗ್ರಾಮದ ಮಹಾಲಕ್ಷ್ಮಿ ಜ್ಯುವೆಲರಿ ಶಾಪ್‌ಗೆ ದರೋಡೆ ಗ್ಯಾಂಗ್ ಕನ್ನ ಹಾಕಿತ್ತು.
ಬೆಳಗಿನ ಜಾವ 3ಗಂಟೆ ಸಮಯದಲ್ಲಿ ಗ್ಯಾಸ್ ಕಟರ್‌ನಿಂದ ಶೆಟರ್ ಮುರಿದು ಕಳ್ಳತನ ಮಾಡಲಾಗಿತ್ತು.
110ಗ್ರಾಂ ಚಿನ್ನ, 2 ಕೆಜಿ ಬೆಳ್ಳಿ ಕಳವು ಮಾಡಿದ್ದರು. ಐವರು ಖದೀಮರ ತಂಡ ಕೃತ್ಯವೆಸಗಿತ್ತು.
ಕಳ್ಳತನ ಮಾಡುವುದನ್ನ ನೋಡಿದ ಪಕ್ಕದ ಹೋಟೆಲ್ ಮಾಲೀಕ ಮಾದಪ್ಪರನ್ನ
ಉಸಿರುಗಟ್ಟಿಸಿ ಹತ್ಯೆ ಮಾಡಿ‌ದ್ದ ಖದೀಮರು ಎಸ್ಕೇಪ್ ಆಗಿದ್ದರು.
ಈಚಗರೆ ಗ್ರಾಮದ ಕಿರಣ್(24), ಕೊತ್ತತ್ತಿ ಗ್ರಾಮದ ಆನಂದ್, ಶರತ್, ಶ್ರೀನಿವಾಸ್, ಕೃಷ್ಣಾಚಾರಿ ಬಂಧಿತರು.
ಕೇರಳದಲ್ಲೂ ವಾಹನ ಕಳ್ಳತನ ಪ್ರಕರಣದಲ್ಲಿ ಆನಂದ್ ಭಾಗಿಯಾಗಿದ್ದರು.
ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *