ಕಡಿಮೆ ದರದಲ್ಲಿ ಸಿಮೆಂಟ್,ಕಬ್ಬಿಣ ಕೊಡಿಸುವ ಆಮಿಷ…2.30 ಕೋಟಿ ಪಂಗನಾಮ…ರಾತ್ರೋ ರಾತ್ರಿ ಎಸ್ಕೇಪ್…ದಂಪತಿ ವಿರುದ್ದ FIR…

ಕಡಿಮೆ ದರದಲ್ಲಿ ಸಿಮೆಂಟ್,ಕಬ್ಬಿಣ ಕೊಡಿಸುವ ಆಮಿಷ…2.30 ಕೋಟಿ ಪಂಗನಾಮ…ರಾತ್ರೋ ರಾತ್ರಿ ಎಸ್ಕೇಪ್…ದಂಪತಿ ವಿರುದ್ದ FIR…

ಮೈಸೂರು,ಆ28,Tv10 ಕನ್ನಡ

ಕಡಿಮೆ ದರದಲ್ಲಿ ಸಿಮೆಂಟ್ ಹಾಗೂ ಕಬ್ಬಿಣ ಕೊಡಿಸುವುದಾಗಿ ನಂಬಿಸಿದ ದಂಪತಿ 16 ಮಂದಿಗೆ 2,30,85,000/- ವಂಚಿಸಿ ಪರಾರಿಯಾದ ಘಟನೆ ಮೈಸೂರಿನ ಶ್ರೀರಾಂಪುರ ಬಡಾವಣೆಯಲ್ಲಿ ಬೆಳಕಿಗೆ ಬಂದಿದೆ.ಈ ಸಂಬಂಧ ವಂಚನೆಗೆ ಒಳಗಾದ 16 ಮಂದಿ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ದಂಪತಿ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.ರಾತ್ರೋ ರಾತ್ರಿ ದಂಪತಿ ಮನೆ ಹಾಗೂ ಮಳಿಗೆ ಬೀಗ ಹಾಕಿ ಎಸ್ಕೇಪ್ ಆಗಿದೆ.

ಶ್ರೀರಾಂಪುರದಲ್ಲಿರುವ ಶುಭಂ ಸ್ಟೀಲ್ಸ್ ಅಂಡ್ ಸಿಮೆಂಟ್ಸ್ ಮತ್ತು ಬಿಲ್ಡರ್ಸ್ ಸಂಸ್ಥೆಯ ಮಾಲೀಕರಾದ ಮೇನಕ ಪ್ರಿಯಾ ಹಾಗೂ ಪತಿ ಶಣ್ಮುಗ ಮುತ್ತುಸ್ವಾಮಿ ವಿರುದ್ದ ವಂಚನೆ ಪ್ರಕರಣ ದಾಖಲಾಗಿದೆ.ಸಧ್ಯ ದಂಪತಿ ತಲೆ ಮರೆಸಿಕೊಂಡಿದ್ದಾರೆ.ಕೆ.ಆರ್.ಮೊಹಲ್ಲ ಬಸವೇಶ್ವರ ರಸ್ತೆಯ ನಿವಾಸಿ ಬಿಲ್ಡರ್ ಶರತ್ ಸೇರಿದಂತೆ 16 ಮಂದಿ ವಂಚನೆಗೆ ಒಳಗಾಗಿದ್ದಾರೆ.ಶಣ್ಮುಖ ಮುತ್ತುಸ್ವಾಮಿ ಆಕಸ್ಮಿಕವಾಗಿ ಶರತ್ ಗೆ ಪರಿಚಯ ಆಗಿದ್ದಾರೆ.ಶುಭಂ ಸ್ಟೀಲ್ಸ್ ಮತ್ತು ಸಿಮೆಂಟ್ಸ್ ನನ್ನ ಪತ್ನಿ ಮೇನಕಾ ಪ್ರಿಯಾ ಮಾಲೀಕಳು ಎಂದು ತಿಳಿಸಿದ್ದಾರೆ.ಕಬ್ಬಿಣ ಹಾಗೂ ಸಿಮೆಂಟ್ ಗಳನ್ನ ಕಡಿಮೆ ಬೆಲೆಗೆ ತಮಿಳುನಾಡಿನಿಂದ ತರಿಸಿಕೊಡುವುದಾಗಿ ಶರತ್ ಗೆ ನಂಬಿಸಿದ್ದಾನೆ.ಶಣ್ಮುಖಸ್ವಾಮಿ ಮಾತನ್ನ ನಂಬಿದ ಶರತ್ ಹಂತ ಹಂತವಾಗಿ ಲಕ್ಷಾಂತರ ಹಣ ಕೊಟ್ಟಿದ್ದಾರೆ.ನಂತರ ಇವರ 15 ಸ್ನೇಹಿತರಿಂದಲೂ ಹಂತಹಂತವಾಗಿ 2,30,85,000/- ರೂಗಳನ್ನ ಕೊಡಿಸಿದ್ದಾರೆ.ಹಣ ಕೊಟ್ಟು ತಿಂಗಳುಗಳು ಉರುಳಿದರೂ ಕಬ್ಬಿಣ ಸಿಮೆಂಟ್ ಬಂದಿಲ್ಲ.ತಮಿಳುನಾಡಿನ ಕಂಪನಿಯಲ್ಲಿ ಬುಕ್ ಮಾಡಿರುವುದಾಗಿ ಸುಳ್ಳು ಹೇಳಿಕೊಂಡೇ ಷಣ್ಮುಖಮುತ್ತುಸ್ವಾಮಿ ನಂಬಿಸಿದ್ದಾರೆ.ಮೂರು ದಿನಗಳ ಹಿಂದೆ ಷಣ್ಮುಖ ಮುತ್ತುಸ್ವಾಮಿ ಮನೆಗೆ ಶರತ್ ಹೋದಾಗ ರಾತ್ರೋ ರಾತ್ರಿ ಮನೆ ಖಾಲಿ ಮಾಡಿರುವುದು ಗೊತ್ತಾಗಿದೆ.ಅಂಗಡಿಗೂ ಬೀಗ ಬಿದ್ದಿದೆ.ತಾವು ವಂಚನೆಗೆ ಒಳಗಾಗಿರುವುದ ಖಚಿತವಾದ ನಂತರ ಶರತ್ ಹಾಗೂ 15 ಸ್ನೇಹಿತರು ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ ಹರಿಸಲು ರೈತರ ಮನವಿ

ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ…

ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ ಹರಿಸಲು ರೈತರ ಮನವಿ ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಗೇಟ್ ಸಮೀಪದ ಸರ್ವೇ ನಂ.218/1ಕ್ಕೆ ಸೇರಿದ ಸರ್ಕಾರಿ…
ಮೈಸೂರು, ಏಪ್ರಿಲ್ 13: ವಿಶ್ವಪ್ರಸಿದ್ಧ KRS Brindavan Gardens ನಲ್ಲಿ ಡಿಜಿಟಲ್ ಯುಗದಲ್ಲಿಯೂ “ಕ್ಯಾಶ್ ಮಾತ್ರ” ನಿಯಮ ಮುಂದುವರಿಯುತ್ತಿರುವುದು ಪ್ರವಾಸಿಗರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.

ಮೈಸೂರು, ಏಪ್ರಿಲ್ 13: ವಿಶ್ವಪ್ರಸಿದ್ಧ KRS Brindavan Gardens ನಲ್ಲಿ ಡಿಜಿಟಲ್…

ಮೈಸೂರು, ಏಪ್ರಿಲ್ 13: ವಿಶ್ವಪ್ರಸಿದ್ಧ KRS Brindavan Gardens ನಲ್ಲಿ ಡಿಜಿಟಲ್ ಯುಗದಲ್ಲಿಯೂ “ಕ್ಯಾಶ್ ಮಾತ್ರ” ನಿಯಮ ಮುಂದುವರಿಯುತ್ತಿರುವುದು ಪ್ರವಾಸಿಗರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಪ್ರವೇಶ ಟಿಕೆಟ್ ಪಡೆಯಲು ಬರುವವರಿಗೆ…
ಯುವಕನ ಕಿಡ್ನಾಪ್…ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್…ಸೆಕ್ಸ್ ವರ್ಕ್ ಗೆಯೂಸ್…ಕರಾಳದಂಧೆಯ ಮತ್ತೊಂದು ಮುಖ ಬಯಲು…

ಯುವಕನ ಕಿಡ್ನಾಪ್…ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್…ಸೆಕ್ಸ್ ವರ್ಕ್ ಗೆಯೂಸ್…ಕರಾಳದಂಧೆಯ ಮತ್ತೊಂದು ಮುಖ…

ಯುವಕನ ಕಿಡ್ನಾಪ್…ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್…ಸೆಕ್ಸ್ ವರ್ಕ್ ಗೆಯೂಸ್…ಕರಾಳದಂಧೆಯ ಮತ್ತೊಂದು ಮುಖ ಬಯಲು… ನಂಜನಗೂಡು,ಏ12,Tv10 ಕನ್ನಡ ಯುವಕನೊಬ್ಬನನ್ನ ಕಿಡ್ನಾಪ್ ಮಾಡಿ ಬಲವಂತವಾಗಿ ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್ ಹಾಗೂ…

Leave a Reply

Your email address will not be published. Required fields are marked *