ಕಡಿಮೆ ದರದಲ್ಲಿ ಸಿಮೆಂಟ್,ಕಬ್ಬಿಣ ಕೊಡಿಸುವ ಆಮಿಷ…2.30 ಕೋಟಿ ಪಂಗನಾಮ…ರಾತ್ರೋ ರಾತ್ರಿ ಎಸ್ಕೇಪ್…ದಂಪತಿ ವಿರುದ್ದ FIR…

ಕಡಿಮೆ ದರದಲ್ಲಿ ಸಿಮೆಂಟ್,ಕಬ್ಬಿಣ ಕೊಡಿಸುವ ಆಮಿಷ…2.30 ಕೋಟಿ ಪಂಗನಾಮ…ರಾತ್ರೋ ರಾತ್ರಿ ಎಸ್ಕೇಪ್…ದಂಪತಿ ವಿರುದ್ದ FIR…

ಮೈಸೂರು,ಆ28,Tv10 ಕನ್ನಡ

ಕಡಿಮೆ ದರದಲ್ಲಿ ಸಿಮೆಂಟ್ ಹಾಗೂ ಕಬ್ಬಿಣ ಕೊಡಿಸುವುದಾಗಿ ನಂಬಿಸಿದ ದಂಪತಿ 16 ಮಂದಿಗೆ 2,30,85,000/- ವಂಚಿಸಿ ಪರಾರಿಯಾದ ಘಟನೆ ಮೈಸೂರಿನ ಶ್ರೀರಾಂಪುರ ಬಡಾವಣೆಯಲ್ಲಿ ಬೆಳಕಿಗೆ ಬಂದಿದೆ.ಈ ಸಂಬಂಧ ವಂಚನೆಗೆ ಒಳಗಾದ 16 ಮಂದಿ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ದಂಪತಿ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.ರಾತ್ರೋ ರಾತ್ರಿ ದಂಪತಿ ಮನೆ ಹಾಗೂ ಮಳಿಗೆ ಬೀಗ ಹಾಕಿ ಎಸ್ಕೇಪ್ ಆಗಿದೆ.

ಶ್ರೀರಾಂಪುರದಲ್ಲಿರುವ ಶುಭಂ ಸ್ಟೀಲ್ಸ್ ಅಂಡ್ ಸಿಮೆಂಟ್ಸ್ ಮತ್ತು ಬಿಲ್ಡರ್ಸ್ ಸಂಸ್ಥೆಯ ಮಾಲೀಕರಾದ ಮೇನಕ ಪ್ರಿಯಾ ಹಾಗೂ ಪತಿ ಶಣ್ಮುಗ ಮುತ್ತುಸ್ವಾಮಿ ವಿರುದ್ದ ವಂಚನೆ ಪ್ರಕರಣ ದಾಖಲಾಗಿದೆ.ಸಧ್ಯ ದಂಪತಿ ತಲೆ ಮರೆಸಿಕೊಂಡಿದ್ದಾರೆ.ಕೆ.ಆರ್.ಮೊಹಲ್ಲ ಬಸವೇಶ್ವರ ರಸ್ತೆಯ ನಿವಾಸಿ ಬಿಲ್ಡರ್ ಶರತ್ ಸೇರಿದಂತೆ 16 ಮಂದಿ ವಂಚನೆಗೆ ಒಳಗಾಗಿದ್ದಾರೆ.ಶಣ್ಮುಖ ಮುತ್ತುಸ್ವಾಮಿ ಆಕಸ್ಮಿಕವಾಗಿ ಶರತ್ ಗೆ ಪರಿಚಯ ಆಗಿದ್ದಾರೆ.ಶುಭಂ ಸ್ಟೀಲ್ಸ್ ಮತ್ತು ಸಿಮೆಂಟ್ಸ್ ನನ್ನ ಪತ್ನಿ ಮೇನಕಾ ಪ್ರಿಯಾ ಮಾಲೀಕಳು ಎಂದು ತಿಳಿಸಿದ್ದಾರೆ.ಕಬ್ಬಿಣ ಹಾಗೂ ಸಿಮೆಂಟ್ ಗಳನ್ನ ಕಡಿಮೆ ಬೆಲೆಗೆ ತಮಿಳುನಾಡಿನಿಂದ ತರಿಸಿಕೊಡುವುದಾಗಿ ಶರತ್ ಗೆ ನಂಬಿಸಿದ್ದಾನೆ.ಶಣ್ಮುಖಸ್ವಾಮಿ ಮಾತನ್ನ ನಂಬಿದ ಶರತ್ ಹಂತ ಹಂತವಾಗಿ ಲಕ್ಷಾಂತರ ಹಣ ಕೊಟ್ಟಿದ್ದಾರೆ.ನಂತರ ಇವರ 15 ಸ್ನೇಹಿತರಿಂದಲೂ ಹಂತಹಂತವಾಗಿ 2,30,85,000/- ರೂಗಳನ್ನ ಕೊಡಿಸಿದ್ದಾರೆ.ಹಣ ಕೊಟ್ಟು ತಿಂಗಳುಗಳು ಉರುಳಿದರೂ ಕಬ್ಬಿಣ ಸಿಮೆಂಟ್ ಬಂದಿಲ್ಲ.ತಮಿಳುನಾಡಿನ ಕಂಪನಿಯಲ್ಲಿ ಬುಕ್ ಮಾಡಿರುವುದಾಗಿ ಸುಳ್ಳು ಹೇಳಿಕೊಂಡೇ ಷಣ್ಮುಖಮುತ್ತುಸ್ವಾಮಿ ನಂಬಿಸಿದ್ದಾರೆ.ಮೂರು ದಿನಗಳ ಹಿಂದೆ ಷಣ್ಮುಖ ಮುತ್ತುಸ್ವಾಮಿ ಮನೆಗೆ ಶರತ್ ಹೋದಾಗ ರಾತ್ರೋ ರಾತ್ರಿ ಮನೆ ಖಾಲಿ ಮಾಡಿರುವುದು ಗೊತ್ತಾಗಿದೆ.ಅಂಗಡಿಗೂ ಬೀಗ ಬಿದ್ದಿದೆ.ತಾವು ವಂಚನೆಗೆ ಒಳಗಾಗಿರುವುದ ಖಚಿತವಾದ ನಂತರ ಶರತ್ ಹಾಗೂ 15 ಸ್ನೇಹಿತರು ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು… ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *