ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಸ್ತಾಕ್ ಆಯ್ಕೆ ಹಿಂಪಡೆಯಿರಿ…ಮೈಸೂರಿನಲ್ಲಿ ಪ್ರತಿಭಟನೆ

ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಸ್ತಾಕ್ ಆಯ್ಕೆ ಹಿಂಪಡೆಯಿರಿ…ಮೈಸೂರಿನಲ್ಲಿ ಪ್ರತಿಭಟನೆ

ಮೈಸೂರು,ಆ29,Tv10 ಕನ್ನಡ

ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಸ್ತಾಕ್ ಆಯ್ಕೆ ಮಾಡಿರುವ ವಿಚಾರ ದಿನೇ ದನೇ ವಿರೋಧ ಹೆಚ್ಚಾಗುತ್ತಿದೆ.ಆಯ್ಕೆ ಹಿಂಪಡೆಯುವಂತೆ ಅಗ್ರಹಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆದಿದೆ.
ಹಳೇ ಜಿಲ್ಲಾಧಿಕಾರಿ ಬಳಿ ಕನ್ನಡ ಪರ ಹೋರಾಟಗಾರರು ಪ್ರತಿಭಟನೆ ನಡೆಸಿದ್ದಾರೆ.
ತಾಯಿ ಚಾಮುಂಡೇಶ್ವರಿಯನ್ನ ನವರಾತ್ರಿಯ 9 ದಿನಗಳ ಕಾಲ ಆರಾಧಿಸುವ ಹಿಂದೂಗಳು ಈ ಆಯ್ಕೆಯನ್ನ ವಿರೋಧಿಸುತಿದ್ದೇವೆ.
ಕನ್ನಡಾಂಬೆ ತಾಯಿ ಭುವನೇಶ್ವರಿಯ ಬಗ್ಗೆ, ಅರಿಶಿನ ಕುಂಕುಮದ ಬಗ್ಗೆ, ಕನ್ನಡ ಭಾಷೆಯ ವೈಶಾಲ್ಯತೆಯ ಬಗ್ಗೆ, ನಾಡಿನ ಸಂಸ್ಕೃತಿಯ ಬಗ್ಗೆ ಸಂಕುಚಿತವಾಗಿ ಮಾತನಾಡಿದ್ದಾರೆ.
ಕನ್ನಡಿಗರ ಭಾವನೆಗೆ ಬಾನು ಮುಷ್ತಾಕ್ ಧಕ್ಕೆ ತಂದಿರುತ್ತಾರೆ.ದೇಶದ ಸಂಸ್ಕೃತಿ, ಆಚಾರ ವಿಚಾರಗಳಿಗೆ ಗೌರವ ಕೊಡದೆ ಇರುವವರಿಗೆ ನಮ್ಮ ಧಾರ್ಮಿಕ ನಾಡಹಬ್ಬವನ್ನು ಉದ್ಘಾಟಿಸುವ ಅರ್ಹತೆ ಇಲ್ಲ.ಕನ್ನಡವನ್ನು ಭುವನೇಶ್ವರಿ ಆಗಿ ಒಪ್ಪದ ಭಾನು ಮುಷ್ತಾಕ್ ತಾಯಿ ಚಾಮುಂಡೇಶ್ವರಿಯನ್ನು ನಾಡದೇವತೆಯಾಗಿ ಒಪ್ಪಿ, ಪುಷ್ಪಾರ್ಚನೆ ಮಾಡಿ ಮಂಗಳಾರತಿ ತೆಗೆದುಕೊಳ್ಳುತ್ತಾರ..?
ಕರ್ನಾಟಕ ರಾಜ್ಯ ಸರ್ಕಾರವು ತಕ್ಷಣ ಬಾನುಮುಸ್ತಾಕ್ ಆಯ್ಕೆಯನ್ನ ಹಿಂಪಡೆಯಬೇಕು.
ನಮ್ಮ ರಾಜ್ಯದಲ್ಲಿ ಅನೇಕ ಹಿರಿಯ ಘಟಾನುಘಟಿ ಸಾಧಕರುಗಳಿದ್ದಾರೆ.
ಮಾಜಿ ಪ್ರಧಾನಿ, ಹೆಚ್ ಡಿ ದೇವೇಗೌಡ, ಕನ್ನಡದ ಕಟ್ಟಾಳು ಹೋರಾಟಗಾರ ವಾಟಾಳ್ ನಾಗರಾಜ್, ಪದ್ಮಭೂಷಣ ಪ್ರಶಸ್ತಿ ಪಡೆದ ನಟ ಅನಂತನಾಗ್, ಸಾಲುಮರದ ತಿಮ್ಮಕ್ಕ, ಸಮಾಜ ಸೇವಕಿ ಕೊಡುಗೈದಾನಿ ಇನ್ಫೋಸಿಸ್ ನ ಸುಧಾ ಮೂರ್ತಿ, ಭೂಕರ್ ಪ್ರಶಸ್ತಿ ಬರಲು ಮುಖ್ಯ ಕಾರಣಕರ್ತರಾಗಿರುವ ಅನುವಾದಕಿ ದೀಪ ಬಸ್ತಿ ಅವರನ್ನ ಆಯ್ಕೆ ಮಾಡಿ.
ಮೈಸೂರಿನಲ್ಲಿ ಕರ್ನಾಟಕ ಸೇನಾ ಪಡೆ ಒತ್ತಾಯಿಸಿದೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು… ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *