ವಿಷ್ಣು ಸಮಾಧಿ ಇದ್ದ ಸ್ಥಳ ಮುಟ್ಟುಗೋಲು…ಮೈಸೂರಿನಲ್ಲಿ ಅಭಿಮಾನಿಗಳ ಸಂಭ್ರಮ…

ವಿಷ್ಣು ಸಮಾಧಿ ಇದ್ದ ಸ್ಥಳ ಮುಟ್ಟುಗೋಲು…ಮೈಸೂರಿನಲ್ಲಿ ಅಭಿಮಾನಿಗಳ ಸಂಭ್ರಮ…

ಮೈಸೂರು,ಆ29,Tv10 ಕನ್ನಡ

ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣು ಸಮಾಧಿ ಇದ್ದ ಸ್ಥಳವನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಂಡ ಕ್ರಮವನ್ನ ಅಭಿಮಾನಿಗಳು ಸಂತಸದಿಂದ ಸ್ವಾಗತಿಸಿದ್ದಾರೆ. ಪುಣ್ಯಭೂಮಿಯನ್ನು
ಸಂರಕ್ಷಿಸಲು ಮುಂದಾಗಿರುವ ಸರ್ಕಾರದ ನಿಲುವನ್ನು ಸಮರ್ಥಿಸಿದ್ದಾರೆ. ವಿಷ್ಣುವರ್ಧನ್ ಅಭಿಮಾನಿಗಳು ಮೈಸೂರಿನ ಅಗ್ರಹಾರ ವೃತ್ತದಲ್ಲಿ ಸಾಹಸಸಿಂಹ ನ ಭಾವಚಿತ್ರ ಹಿಡಿದು ಜೈಕಾರ ಕೂಗುತ್ತಾ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.
ಅಭಿಮಾನಿಗಳ 15 ವರ್ಷಗಳ ಹೋರಾಟಕ್ಕೆ ಸಂದ ಜಯ ಎಂದು ಬಣ್ಣಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ವಿಷ್ಣುವರ್ಧನ್ ಅಭಿಮಾನಿಗಳ ಒಕ್ಕೂಟದ ಅಧ್ಯಕ್ಷ ಎಂ ಡಿ ಪಾರ್ಥಸಾರಥಿ
75ನೇ ವರ್ಷದ ಸಂಭ್ರಮ ಸಂದರ್ಭದಲ್ಲಿ ವಿಷ್ಣುವರ್ಧನ್ ರವರಿಗೆ ಜಯ ಸಿಕ್ಕಿದೆ.
ವಿಷ್ಣುವರ್ಧನ್ ವಿಚಾರದಲ್ಲಿ ಪದೇ ಪದೇ ತೊಂದರೆ ಕೊಡುತ್ತಾ ಬಂದಿದ್ದರು. ಅಭಿಮಾನಿಗಳು ಸಹನೆ ಹಾಗೂ ಶಾಂತಿ ರೀತಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ರಾತ್ರೋರಾತ್ರಿ ಅವರ ಪುಣ್ಯಭೂಮಿಯನ್ನು ಕಿಡಿಗೇಡಿಗಳು ಧ್ವಂಸ ಮಾಡಿ ಕನ್ನಡದ ಮೇರು ನಟ ವಿಷ್ಣುವರ್ಧನ್ ಅಭಿಮಾನಿಗಳಿಗೆ ನೋವನ್ನು ಉಂಟು ಮಾಡಿದರು ಆದರೆ ಒಳ್ಳೆಯವರಿಗೆ ಒಳ್ಳೆಯದೇ ಆಗುತ್ತದೆ ಎಂಬ ಉದಾಹರಣೆ ಈ ಘಟನೆ ಸಾಕ್ಷಿ ಎಂದು ಸಂತಸ ವ್ಯಕ್ತಪಡಿಸಿದರು..

ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷರಾದ ಚಂದ್ರಶೇಖರ್, ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆಯ ಅಧ್ಯಕ್ಷ ಶಿವರಾಂ, ಜೆಡಿಎಸ್ ಕಾರ್ಯದಕ್ಷ ಎಸ್ ಪ್ರಕಾಶ್ ಪ್ರಿಯದರ್ಶನ್, ಕರುಣಾಮಯಿ ವಿಷ್ಣು ಅಭಿಮಾನಿ ಬಳಗದ ಅಧ್ಯಕ್ಷ ಎಸ್ ಎನ್ ರಾಜೇಶ್, ಮಡಿವಾಳ ಸಂಘದ ರಾಜ್ಯಾಧ್ಯಕ್ಷ ರವಿ, ಸಂತೋಷ್, ಕುಮಾರ್ ಆರಾಧ್ಯ, ರಂಗನಾಥ್, ಅಭಿ, ಲಕ್ಷ್ಮಣ್, ಮಹದೇವ್, ಜಗದೀಶ್, ನಾಗೇಶ್, ಕಿರಣ್ ಹಾಗೂ ಇನ್ನಿತರರು ಹಾಜರಿದ್ದರು…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *