ಕರ್ತವ್ಯ ನಿರತ ಪೊಲೀಸರಿಗೆ ಧಂಕಿ…ಅವಾಚ್ಯ ಶಬ್ದಗಳಿಂದ ನಿಂದನೆ…ಇಬ್ಬರು ಯುವಕರು ಅಂದರ್…ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಘಟನೆ…

ಕರ್ತವ್ಯ ನಿರತ ಪೊಲೀಸರಿಗೆ ಧಂಕಿ…ಅವಾಚ್ಯ ಶಬ್ದಗಳಿಂದ ನಿಂದನೆ…ಇಬ್ಬರು ಯುವಕರು ಅಂದರ್…ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಘಟನೆ…

  • Crime
  • August 30, 2025
  • No Comment
  • 475

ಕರ್ತವ್ಯ ನಿರತ ಪೊಲೀಸರಿಗೆ ಧಂಕಿ…ಅವಾಚ್ಯ ಶಬ್ದಗಳಿಂದ ನಿಂದನೆ…ಇಬ್ಬರು ಯುವಕರು ಅಂದರ್…ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಘಟನೆ…

ಮೈಸೂರು,ಆ30,Tv10 ಕನ್ನಡ

ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಕರ್ತವ್ಯ ನಿರತ ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಲು ಮುಂದಾದ ಯುವಕರನ್ನ ಕುವೆಂಪುನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.ರವಿಚಂದ್ರ ಹಾಗೂ ಭುವನ್ ಬಂಧಿತ ಯುವಕರು.ಕುವೆಂಪುನಗರ ಎಂ ಬ್ಲಾಕ್ ನಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು.ಕುವೆಂಪುನಗರ ಠಾಣೆ ಸಿಬ್ಬಂದಿಗಳಾದ ಮಾಲಯ್ಯ ಹಾಗೂ ಸುರೇಶ್ ರವರನ್ನ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು.ಮೆರವಣಿಗೆ ಶುಭೋಧ ಶಾಲೆ ಬಳಿ ಬಂದಾಗ ರವಿಚಂದ್ರ ಹಾಗೂ ಭುವನ್ ಬಂದು ಡ್ಯಾನ್ಸ್ ಮಾಡುತ್ತಿದ್ದರು.ನಗಾರಿಯವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ನಾವು ಹೇಳಿದಂತೆ ಬಾರಿಸಬೇಕೆಂದು ಧಂಕಿ ಹಾಕುತ್ತಿದ್ದರು.ಈ ವೇಳೆ ಕರ್ತವ್ಯ ನಿರತ ಸಿಬ್ಬಂದಿಗಳು ಯುವಕರಿಗೆ ಬುದ್ದಿವಾದ ಹೇಳಿದಾಗ ತಿರುಗಿ ಬಿದ್ದ ರವಿಚಂದ್ರನ್ ಹಾಗೂ ಭುವನ್ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಲು ಮುಂದಾದರು.ಈ ವೇಳೆ ಪಿಎಸ್ಸೈ ಮದನ್ ಕುಮಾರ್ ರವರಿಗೆ ಸಿಬ್ಬಂದಿಗಳು ಮಾಹಿತಿ ನೀಡಿದರು.ಮದನ್ ಕುಮಾರ್ ಗೂ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಲು ಮುಂದಾದರು.ರವಿಚಂದ್ರನ್ ಹಾಗೂ ಭುವನ್ ಇಬ್ಬರನ್ನೂ ವಶಕ್ಕೆ ಪಡೆದ ಪೊಲೀಸರು ಠಾಣೆ ಕರೆತಂದು ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *