ಕರ್ತವ್ಯ ನಿರತ ಪೊಲೀಸರಿಗೆ ಧಂಕಿ…ಅವಾಚ್ಯ ಶಬ್ದಗಳಿಂದ ನಿಂದನೆ…ಇಬ್ಬರು ಯುವಕರು ಅಂದರ್…ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಘಟನೆ…

ಕರ್ತವ್ಯ ನಿರತ ಪೊಲೀಸರಿಗೆ ಧಂಕಿ…ಅವಾಚ್ಯ ಶಬ್ದಗಳಿಂದ ನಿಂದನೆ…ಇಬ್ಬರು ಯುವಕರು ಅಂದರ್…ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಘಟನೆ…

  • Crime
  • August 30, 2025
  • No Comment
  • 469

ಕರ್ತವ್ಯ ನಿರತ ಪೊಲೀಸರಿಗೆ ಧಂಕಿ…ಅವಾಚ್ಯ ಶಬ್ದಗಳಿಂದ ನಿಂದನೆ…ಇಬ್ಬರು ಯುವಕರು ಅಂದರ್…ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಘಟನೆ…

ಮೈಸೂರು,ಆ30,Tv10 ಕನ್ನಡ

ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಕರ್ತವ್ಯ ನಿರತ ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಲು ಮುಂದಾದ ಯುವಕರನ್ನ ಕುವೆಂಪುನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.ರವಿಚಂದ್ರ ಹಾಗೂ ಭುವನ್ ಬಂಧಿತ ಯುವಕರು.ಕುವೆಂಪುನಗರ ಎಂ ಬ್ಲಾಕ್ ನಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು.ಕುವೆಂಪುನಗರ ಠಾಣೆ ಸಿಬ್ಬಂದಿಗಳಾದ ಮಾಲಯ್ಯ ಹಾಗೂ ಸುರೇಶ್ ರವರನ್ನ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು.ಮೆರವಣಿಗೆ ಶುಭೋಧ ಶಾಲೆ ಬಳಿ ಬಂದಾಗ ರವಿಚಂದ್ರ ಹಾಗೂ ಭುವನ್ ಬಂದು ಡ್ಯಾನ್ಸ್ ಮಾಡುತ್ತಿದ್ದರು.ನಗಾರಿಯವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ನಾವು ಹೇಳಿದಂತೆ ಬಾರಿಸಬೇಕೆಂದು ಧಂಕಿ ಹಾಕುತ್ತಿದ್ದರು.ಈ ವೇಳೆ ಕರ್ತವ್ಯ ನಿರತ ಸಿಬ್ಬಂದಿಗಳು ಯುವಕರಿಗೆ ಬುದ್ದಿವಾದ ಹೇಳಿದಾಗ ತಿರುಗಿ ಬಿದ್ದ ರವಿಚಂದ್ರನ್ ಹಾಗೂ ಭುವನ್ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಲು ಮುಂದಾದರು.ಈ ವೇಳೆ ಪಿಎಸ್ಸೈ ಮದನ್ ಕುಮಾರ್ ರವರಿಗೆ ಸಿಬ್ಬಂದಿಗಳು ಮಾಹಿತಿ ನೀಡಿದರು.ಮದನ್ ಕುಮಾರ್ ಗೂ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಲು ಮುಂದಾದರು.ರವಿಚಂದ್ರನ್ ಹಾಗೂ ಭುವನ್ ಇಬ್ಬರನ್ನೂ ವಶಕ್ಕೆ ಪಡೆದ ಪೊಲೀಸರು ಠಾಣೆ ಕರೆತಂದು ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *