ಕರ್ತವ್ಯ ನಿರತ ಪೊಲೀಸರಿಗೆ ಧಂಕಿ…ಅವಾಚ್ಯ ಶಬ್ದಗಳಿಂದ ನಿಂದನೆ…ಇಬ್ಬರು ಯುವಕರು ಅಂದರ್…ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಘಟನೆ…

ಕರ್ತವ್ಯ ನಿರತ ಪೊಲೀಸರಿಗೆ ಧಂಕಿ…ಅವಾಚ್ಯ ಶಬ್ದಗಳಿಂದ ನಿಂದನೆ…ಇಬ್ಬರು ಯುವಕರು ಅಂದರ್…ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಘಟನೆ…

  • Crime
  • August 30, 2025
  • No Comment
  • 413

ಕರ್ತವ್ಯ ನಿರತ ಪೊಲೀಸರಿಗೆ ಧಂಕಿ…ಅವಾಚ್ಯ ಶಬ್ದಗಳಿಂದ ನಿಂದನೆ…ಇಬ್ಬರು ಯುವಕರು ಅಂದರ್…ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಘಟನೆ…

ಮೈಸೂರು,ಆ30,Tv10 ಕನ್ನಡ

ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಕರ್ತವ್ಯ ನಿರತ ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಲು ಮುಂದಾದ ಯುವಕರನ್ನ ಕುವೆಂಪುನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.ರವಿಚಂದ್ರ ಹಾಗೂ ಭುವನ್ ಬಂಧಿತ ಯುವಕರು.ಕುವೆಂಪುನಗರ ಎಂ ಬ್ಲಾಕ್ ನಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು.ಕುವೆಂಪುನಗರ ಠಾಣೆ ಸಿಬ್ಬಂದಿಗಳಾದ ಮಾಲಯ್ಯ ಹಾಗೂ ಸುರೇಶ್ ರವರನ್ನ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು.ಮೆರವಣಿಗೆ ಶುಭೋಧ ಶಾಲೆ ಬಳಿ ಬಂದಾಗ ರವಿಚಂದ್ರ ಹಾಗೂ ಭುವನ್ ಬಂದು ಡ್ಯಾನ್ಸ್ ಮಾಡುತ್ತಿದ್ದರು.ನಗಾರಿಯವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ನಾವು ಹೇಳಿದಂತೆ ಬಾರಿಸಬೇಕೆಂದು ಧಂಕಿ ಹಾಕುತ್ತಿದ್ದರು.ಈ ವೇಳೆ ಕರ್ತವ್ಯ ನಿರತ ಸಿಬ್ಬಂದಿಗಳು ಯುವಕರಿಗೆ ಬುದ್ದಿವಾದ ಹೇಳಿದಾಗ ತಿರುಗಿ ಬಿದ್ದ ರವಿಚಂದ್ರನ್ ಹಾಗೂ ಭುವನ್ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಲು ಮುಂದಾದರು.ಈ ವೇಳೆ ಪಿಎಸ್ಸೈ ಮದನ್ ಕುಮಾರ್ ರವರಿಗೆ ಸಿಬ್ಬಂದಿಗಳು ಮಾಹಿತಿ ನೀಡಿದರು.ಮದನ್ ಕುಮಾರ್ ಗೂ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಲು ಮುಂದಾದರು.ರವಿಚಂದ್ರನ್ ಹಾಗೂ ಭುವನ್ ಇಬ್ಬರನ್ನೂ ವಶಕ್ಕೆ ಪಡೆದ ಪೊಲೀಸರು ಠಾಣೆ ಕರೆತಂದು ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು… ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *