ಕರ್ತವ್ಯ ನಿರತ ಪೊಲೀಸರಿಗೆ ಧಂಕಿ…ಅವಾಚ್ಯ ಶಬ್ದಗಳಿಂದ ನಿಂದನೆ…ಇಬ್ಬರು ಯುವಕರು ಅಂದರ್…ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಘಟನೆ…

ಕರ್ತವ್ಯ ನಿರತ ಪೊಲೀಸರಿಗೆ ಧಂಕಿ…ಅವಾಚ್ಯ ಶಬ್ದಗಳಿಂದ ನಿಂದನೆ…ಇಬ್ಬರು ಯುವಕರು ಅಂದರ್…ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಘಟನೆ…

  • Crime
  • August 30, 2025
  • No Comment
  • 449

ಕರ್ತವ್ಯ ನಿರತ ಪೊಲೀಸರಿಗೆ ಧಂಕಿ…ಅವಾಚ್ಯ ಶಬ್ದಗಳಿಂದ ನಿಂದನೆ…ಇಬ್ಬರು ಯುವಕರು ಅಂದರ್…ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಘಟನೆ…

ಮೈಸೂರು,ಆ30,Tv10 ಕನ್ನಡ

ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಕರ್ತವ್ಯ ನಿರತ ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಲು ಮುಂದಾದ ಯುವಕರನ್ನ ಕುವೆಂಪುನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.ರವಿಚಂದ್ರ ಹಾಗೂ ಭುವನ್ ಬಂಧಿತ ಯುವಕರು.ಕುವೆಂಪುನಗರ ಎಂ ಬ್ಲಾಕ್ ನಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು.ಕುವೆಂಪುನಗರ ಠಾಣೆ ಸಿಬ್ಬಂದಿಗಳಾದ ಮಾಲಯ್ಯ ಹಾಗೂ ಸುರೇಶ್ ರವರನ್ನ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು.ಮೆರವಣಿಗೆ ಶುಭೋಧ ಶಾಲೆ ಬಳಿ ಬಂದಾಗ ರವಿಚಂದ್ರ ಹಾಗೂ ಭುವನ್ ಬಂದು ಡ್ಯಾನ್ಸ್ ಮಾಡುತ್ತಿದ್ದರು.ನಗಾರಿಯವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ನಾವು ಹೇಳಿದಂತೆ ಬಾರಿಸಬೇಕೆಂದು ಧಂಕಿ ಹಾಕುತ್ತಿದ್ದರು.ಈ ವೇಳೆ ಕರ್ತವ್ಯ ನಿರತ ಸಿಬ್ಬಂದಿಗಳು ಯುವಕರಿಗೆ ಬುದ್ದಿವಾದ ಹೇಳಿದಾಗ ತಿರುಗಿ ಬಿದ್ದ ರವಿಚಂದ್ರನ್ ಹಾಗೂ ಭುವನ್ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಲು ಮುಂದಾದರು.ಈ ವೇಳೆ ಪಿಎಸ್ಸೈ ಮದನ್ ಕುಮಾರ್ ರವರಿಗೆ ಸಿಬ್ಬಂದಿಗಳು ಮಾಹಿತಿ ನೀಡಿದರು.ಮದನ್ ಕುಮಾರ್ ಗೂ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಲು ಮುಂದಾದರು.ರವಿಚಂದ್ರನ್ ಹಾಗೂ ಭುವನ್ ಇಬ್ಬರನ್ನೂ ವಶಕ್ಕೆ ಪಡೆದ ಪೊಲೀಸರು ಠಾಣೆ ಕರೆತಂದು ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ…

Spread the love

Related post

ಸಿಸಿಬಿ ಪೊಲೀಸರ ಕಾರ್ಯಾಚರಣೆ…ನಾಲ್ವರ ಬಂಧನ…10.40 ಲಕ್ಷ ಮೌಲ್ಯದ ಎಂಡಿಎಂಎ ಒಂದು ಕಾರ್ ವಶ…

ಸಿಸಿಬಿ ಪೊಲೀಸರ ಕಾರ್ಯಾಚರಣೆ…ನಾಲ್ವರ ಬಂಧನ…10.40 ಲಕ್ಷ ಮೌಲ್ಯದ ಎಂಡಿಎಂಎ ಒಂದು ಕಾರ್…

ಸಿಸಿಬಿ ಪೊಲೀಸರ ಕಾರ್ಯಾಚರಣೆ…ನಾಲ್ವರ ಬಂಧನ…10.40 ಲಕ್ಷ ಮೌಲ್ಯದ ಎಂಡಿಎಂಎ ಒಂದು ಕಾರ್ ವಶ… ಮೈಸೂರು,ಫೆ23,Tv10 ಕನ್ನಡ ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆಯಲ್ಲಿ ನಾಲ್ವರು ಆರೋಪಿಗಳನ್ನ ವಶಕ್ಕೆ ಪಡೆಯಲಾಗಿದ್ದು ಬಂಧಿತರಿಂದ…
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ! ಆಲ್ಫಾ ಅಂದರೇನೇ ಡಾಮಿನೇಶನ್. ಈ ವಾರ ತೆರೆಕಂಡ ಆಲ್ಫಾ‌ ಚಿತ್ರದಲ್ಲಿ ಡಾಮಿನೇಟ್ ಮಾಡುತ್ತಿರುವವರೇ ಚಿತ್ರದ ನಾಯಕ ಹೇಮಂತ್ ಕುಮಾರ್. ಹೇಮಂತ್…
ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್… ಮೈಸೂರು,ಫೆ17,Tv10 ಕನ್ನಡ ಮೈಸೂರಿನ ಹೃದಯಭಾಗದಲ್ಲಿರುವ…

Leave a Reply

Your email address will not be published. Required fields are marked *