ಕರ್ತವ್ಯ ನಿರತ ಪೊಲೀಸರಿಗೆ ಧಂಕಿ…ಅವಾಚ್ಯ ಶಬ್ದಗಳಿಂದ ನಿಂದನೆ…ಇಬ್ಬರು ಯುವಕರು ಅಂದರ್…ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಘಟನೆ…

ಕರ್ತವ್ಯ ನಿರತ ಪೊಲೀಸರಿಗೆ ಧಂಕಿ…ಅವಾಚ್ಯ ಶಬ್ದಗಳಿಂದ ನಿಂದನೆ…ಇಬ್ಬರು ಯುವಕರು ಅಂದರ್…ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಘಟನೆ…

  • Crime
  • August 30, 2025
  • No Comment
  • 460

ಕರ್ತವ್ಯ ನಿರತ ಪೊಲೀಸರಿಗೆ ಧಂಕಿ…ಅವಾಚ್ಯ ಶಬ್ದಗಳಿಂದ ನಿಂದನೆ…ಇಬ್ಬರು ಯುವಕರು ಅಂದರ್…ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಘಟನೆ…

ಮೈಸೂರು,ಆ30,Tv10 ಕನ್ನಡ

ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಕರ್ತವ್ಯ ನಿರತ ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಲು ಮುಂದಾದ ಯುವಕರನ್ನ ಕುವೆಂಪುನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.ರವಿಚಂದ್ರ ಹಾಗೂ ಭುವನ್ ಬಂಧಿತ ಯುವಕರು.ಕುವೆಂಪುನಗರ ಎಂ ಬ್ಲಾಕ್ ನಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು.ಕುವೆಂಪುನಗರ ಠಾಣೆ ಸಿಬ್ಬಂದಿಗಳಾದ ಮಾಲಯ್ಯ ಹಾಗೂ ಸುರೇಶ್ ರವರನ್ನ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು.ಮೆರವಣಿಗೆ ಶುಭೋಧ ಶಾಲೆ ಬಳಿ ಬಂದಾಗ ರವಿಚಂದ್ರ ಹಾಗೂ ಭುವನ್ ಬಂದು ಡ್ಯಾನ್ಸ್ ಮಾಡುತ್ತಿದ್ದರು.ನಗಾರಿಯವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ನಾವು ಹೇಳಿದಂತೆ ಬಾರಿಸಬೇಕೆಂದು ಧಂಕಿ ಹಾಕುತ್ತಿದ್ದರು.ಈ ವೇಳೆ ಕರ್ತವ್ಯ ನಿರತ ಸಿಬ್ಬಂದಿಗಳು ಯುವಕರಿಗೆ ಬುದ್ದಿವಾದ ಹೇಳಿದಾಗ ತಿರುಗಿ ಬಿದ್ದ ರವಿಚಂದ್ರನ್ ಹಾಗೂ ಭುವನ್ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಲು ಮುಂದಾದರು.ಈ ವೇಳೆ ಪಿಎಸ್ಸೈ ಮದನ್ ಕುಮಾರ್ ರವರಿಗೆ ಸಿಬ್ಬಂದಿಗಳು ಮಾಹಿತಿ ನೀಡಿದರು.ಮದನ್ ಕುಮಾರ್ ಗೂ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಲು ಮುಂದಾದರು.ರವಿಚಂದ್ರನ್ ಹಾಗೂ ಭುವನ್ ಇಬ್ಬರನ್ನೂ ವಶಕ್ಕೆ ಪಡೆದ ಪೊಲೀಸರು ಠಾಣೆ ಕರೆತಂದು ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ…

Spread the love

Related post

ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ ಹರಿಸಲು ರೈತರ ಮನವಿ

ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ…

ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ ಹರಿಸಲು ರೈತರ ಮನವಿ ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಗೇಟ್ ಸಮೀಪದ ಸರ್ವೇ ನಂ.218/1ಕ್ಕೆ ಸೇರಿದ ಸರ್ಕಾರಿ…
ಮೈಸೂರು, ಏಪ್ರಿಲ್ 13: ವಿಶ್ವಪ್ರಸಿದ್ಧ KRS Brindavan Gardens ನಲ್ಲಿ ಡಿಜಿಟಲ್ ಯುಗದಲ್ಲಿಯೂ “ಕ್ಯಾಶ್ ಮಾತ್ರ” ನಿಯಮ ಮುಂದುವರಿಯುತ್ತಿರುವುದು ಪ್ರವಾಸಿಗರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.

ಮೈಸೂರು, ಏಪ್ರಿಲ್ 13: ವಿಶ್ವಪ್ರಸಿದ್ಧ KRS Brindavan Gardens ನಲ್ಲಿ ಡಿಜಿಟಲ್…

ಮೈಸೂರು, ಏಪ್ರಿಲ್ 13: ವಿಶ್ವಪ್ರಸಿದ್ಧ KRS Brindavan Gardens ನಲ್ಲಿ ಡಿಜಿಟಲ್ ಯುಗದಲ್ಲಿಯೂ “ಕ್ಯಾಶ್ ಮಾತ್ರ” ನಿಯಮ ಮುಂದುವರಿಯುತ್ತಿರುವುದು ಪ್ರವಾಸಿಗರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಪ್ರವೇಶ ಟಿಕೆಟ್ ಪಡೆಯಲು ಬರುವವರಿಗೆ…
ಯುವಕನ ಕಿಡ್ನಾಪ್…ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್…ಸೆಕ್ಸ್ ವರ್ಕ್ ಗೆಯೂಸ್…ಕರಾಳದಂಧೆಯ ಮತ್ತೊಂದು ಮುಖ ಬಯಲು…

ಯುವಕನ ಕಿಡ್ನಾಪ್…ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್…ಸೆಕ್ಸ್ ವರ್ಕ್ ಗೆಯೂಸ್…ಕರಾಳದಂಧೆಯ ಮತ್ತೊಂದು ಮುಖ…

ಯುವಕನ ಕಿಡ್ನಾಪ್…ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್…ಸೆಕ್ಸ್ ವರ್ಕ್ ಗೆಯೂಸ್…ಕರಾಳದಂಧೆಯ ಮತ್ತೊಂದು ಮುಖ ಬಯಲು… ನಂಜನಗೂಡು,ಏ12,Tv10 ಕನ್ನಡ ಯುವಕನೊಬ್ಬನನ್ನ ಕಿಡ್ನಾಪ್ ಮಾಡಿ ಬಲವಂತವಾಗಿ ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್ ಹಾಗೂ…

Leave a Reply

Your email address will not be published. Required fields are marked *