ಮೈಸೂರು ಜಿಲ್ಲಾ ಪೊಲೀಸರ ಭರ್ಜರಿ ಬೇಟೆ…2 ಕೋಟಿ ಮೌಲ್ಯದ ನಕಲಿ ಹನ್ಸ್ ವಶ…ಮೂವರ ವಿರುದ್ದ FIR

ಮೈಸೂರು ಜಿಲ್ಲಾ ಪೊಲೀಸರ ಭರ್ಜರಿ ಬೇಟೆ…2 ಕೋಟಿ ಮೌಲ್ಯದ ನಕಲಿ ಹನ್ಸ್ ವಶ…ಮೂವರ ವಿರುದ್ದ FIR

  • Crime
  • September 2, 2025
  • No Comment
  • 196

ಹೆಚ್.ಡಿ.ಕೋಟೆ,ಸೆ2,Tv10 ಕನ್ನಡ

ಮೈಸೂರು ಜಿಲ್ಲಾ ಪೊಲೀಸರು ನಡೆಸಿದ ಭರ್ಜರಿ‌ ಕಾರ್ಯಾಚರಣೆಯಲ್ಲಿ 2 ಕೋಟಿ ನಕಲಿ ಹನ್ಸ್ ವಶಪಡಿಸಿಕೊಳ್ಳಲಾಗಿದೆ.
ಹೆಚ್.ಡಿ ಕೋಟೆಯ ಮದ್ದೂರು ಪಟ್ಟಣದಲ್ಲಿ ನಕಲಿ ಹನ್ಸ್ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿ ಮೂವರ ವಿರುದ್ದ ಪ್ರಕರಣ ದಾಖಲಿಸಿ ಎರಡು ಕೋಟಿಗೂ ಅಧಿಕ ಮೌಲ್ಯದ ಹನ್ಸ್ ವಶಕ್ಕೆ ಪಡೆದಿದ್ದಾರೆ.
ಬೆಟ್ಟಹಳ್ಳಿ ಸರ್ವೇ 1/17, 18 ರಲ್ಲಿ ನಕಲಿ ಹನ್ಸ್ ತಯಾರಿಕಾ ಘಟಕದಲ್ಲಿ ನಕಲಿ ಹನ್ಸ್ ತಯಾರಿಸಲಾಗುತ್ತಿತ್ತು.ಖಚಿತ ಮಾಹಿತಿ ಆಧರಿಸಿ ಹೆಚ್.ಡಿ.ಕೋಟೆ ಪೊಲೀಸರು ಹಾಗೂ ಜಿಲ್ಲಾ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಯಶಸ್ವಿಯಾಗಿದ್ದಾರೆ.
ಶೈನ್ ಪ್ರಸಾದ್, ಪ್ರಭುಸ್ವಾಮಿ ಹಾಗಣು ಅಶ್ವಿನಿ ಕೆ.ಶೈನ್ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲು ಮಾಡಿದ್ದಾರೆ.
ಸ್ಥಳದಲ್ಲಿ 75 ಲಕ್ಷ ಮೌಲ್ಯದ 3 ಹನ್ಸ್ ಪ್ಯಾಕೆಟ್,ಹನ್ಸ್ ತಯಾರು ಮಾಡುವ ಮಿಷನ್ ಗಳು,16 ಸಾವಿರ ಮೌಲ್ಯದ ಚೀಲ, ಹೊಲಿಗೆ ಹಾಕುವ 2 ಮಿಷನ್ , 96 ಸಾವಿರದ 4 ಹನ್ಸ್ ಪ್ಯಾಕೇಜ್ ಚೀಲಗಳು, ಹಳೆಯ ಹನ್ಸ್ ಪ್ಯಾಕೆಟ್ ಚೀಲಗಳು 146 (ಮೌಲ್ಯ 17 ಲಕ್ಷದ 57 ಸಾವಿರ), 20 ಲೀಟರ್ ಅಳತೆಯ ಟಿಪಿಆರ್ ಕೆಮಿಕಲ್ ಕ್ಯಾನ್ (ಮೌಲ್ಯ 8.40 ಲಕ್ಷ), ಲೇಬಲ್ ರೋಲ್ ,ಸಣ್ಣ ಸಣ್ಣ ಪ್ಯಾಲೆಟ್ ರೋಲ್, 2 ಲಕ್ಷ ಮೌಲ್ಯದ, ಕೆಂಪು ಬಣ್ಣದ ಹನ್ಸ್ ಪ್ಯಾಕೆಟ್ ಪೇಪರ್ 6 ಚೀಲ, ನೀಲಿ ಬಣ್ಣದ ಹನ್ಸ್ ಪ್ಯಾಕೆಟ್ ತುಂಬವ ಎರಡು ಪ್ಲಾಸ್ಟಿಕ್ ಚೀಲ (87 ಸಾವಿರ),‌ಸೇರಿ ಲಕ್ಷಾಂತರ ರೂ ಮೌಲ್ಯದ ವಸ್ತುಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕ್ ರವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ…

Spread the love

Related post

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು… ಹುಣಸೂರು,ಡಿ20,Tv10 ಕನ್ನಡ ಸುಡುತ್ತಿರುವ ಬಿಸಿನೀರಿನ ಪಾತ್ರೆಗೆ ಬಿದ್ದು ಹೆಣ್ಣುಮಗು ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ವಿಜಯಗಿರಿ ಹಾಡಿಯಲ್ಲಿ ನಡೆದಿದೆ. ಆದಿವಾಸಿ…
ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ… ಹುಣಸೂರು,ಡಿ19,Tv10 ಕನ್ನಡ ಕ್ಲುಲ್ಲಕ ಕಾರಣಕ್ಕೆ ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಹುಣಸೂರು ನಗರದಲ್ಲಿ ನಡೆದಿದೆ.ನಿಜಾಂ ಮೊಹಲ್ಲಾದ ನಿವಾಸಿ ಖಾಜಾಪೀರ್(44)ಕೊಲೆಯಾದ…
ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ… ಮಂಡ್ಯ,ಡಿ19,Tv10 ಕನ್ನಡ ಜಮೀನು ವಿಚಾರದಲ್ಲಿ ಮಾಜಿ ಶಾಸಕ ಹಾಗೂ ಪುತ್ರ ವ್ಯಕ್ತಿ ಮೇಲೆ…

Leave a Reply

Your email address will not be published. Required fields are marked *