ಗಣಪತಿ ಮೆರಣಿಗೆಯಲ್ಲಿ ಡ್ಯಾನ್ಸ್ ಮಾಡಲು ನಿರಾಕರಣೆ…ಯುವಕನಿಗೆ ಡ್ರಾಗನ್ ನಿಂದ ಇರಿದ ಗ್ಯಾಂಗ್…ನಾಲ್ವರ ವಿರುದ್ದ FIR…

ಗಣಪತಿ ಮೆರಣಿಗೆಯಲ್ಲಿ ಡ್ಯಾನ್ಸ್ ಮಾಡಲು ನಿರಾಕರಣೆ…ಯುವಕನಿಗೆ ಡ್ರಾಗನ್ ನಿಂದ ಇರಿದ ಗ್ಯಾಂಗ್…ನಾಲ್ವರ ವಿರುದ್ದ FIR…

  • Crime
  • September 2, 2025
  • No Comment
  • 306

ಮೈಸೂರು,ಸೆ2,Tv10 ಕನ್ನಡ

ಗಣಪತಿ ಮೆರವಣಿಗೆಯಲ್ಲಿ ಡ್ಯಾನ್ಸ್ ಮಾಡಲು ನಿರಾಕರಿಸಿದ ಯುವಕನ ಮೇಲೆ ನಾಲ್ವರ ಗುಂಪು ಅಟ್ಯಾಕ್ ಮಾಡಿ ಡ್ರಾಗನ್ ನಿಂದ ಇರಿದ ಘಟನೆ ವಿದ್ಯಾರಣ್ಯಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಗಂಭೀರ ಗಾಯಗೊಂಡ ಯುವಕ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.ಘಟನೆ ಸಂಭಂಧ ನಾಲ್ವರ ವಿರುದ್ದ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹದೇವಪುರದ ರವಿ ಗಾಯಗೊಂಡ ಯುವಕ.ಪ್ರಶಾಂತ್,ನಾಗ,ಸುದೀಪ್,ಕಿರಣ್ ಹಾಗೂ ಇತರರ ವಿರುದ್ದ ಪ್ರಕರಣ ದಾಖಲಾಗಿದೆ.

ಗಣಪತಿ ಮೆರವಣಿಗೆ ಸಾಗುತ್ತಿದ್ದಾಗ ರವಿ ತನ್ನ ಮನೆ ಮುಂದೆ ನಿಂತಿದ್ದ.ಈ ವೇಳೆ ಡ್ಯಾನ್ಸ್ ಮಾಡುವಂತೆ ಕಿರಣ್,ನಾಗ,ಸುದೀಪ್,ಕಿರಣ್ ಆಹ್ವಾನಿಸಿದ್ದಾರೆ.ಇದಕ್ಕೆ ರವಿ ನಿರಾಕರಿಸಿದ್ದಾನೆ.ಇಷ್ಟಕ್ಕೆ ರವಿ ಮೇಲೆ ದಾಳಿ ನಡೆಸಿ ಗಾಯಗೊಳಿಸಿದ್ದಾರೆ.ತಂದೆ ತಾಯಿ ನೆರವಿನಿಂದ ರವಿ ಬಚಾವ್ ಆಗಿದ್ದಾನೆ.ನಂತರ ಔಷಧಿ ತರಲೆಂದು ಮನೆಯಿಂದ ಹೊರಬಂದಾಗ ಹೊಂಚು ಹಾಕಿದ ನಾಲ್ವರ ಗುಂಪು ಮತ್ತೆ ಸುತ್ತುವರೆದು ದಾಳಿ ಮಾಡಿದ್ದಾರೆ.ನಮ್ಮ ಮಾತು ಕೇಳುತ್ತಿಲ್ಲ ಇವನನ್ನ ಮುಗಿಸಿದ್ರೆ ಇಡೀ ಏರಿಯಾಗೆ ನಮ್ಮ ತಾಕತ್ತು ಗೊತ್ತಾಗುತ್ತೆ ಎಂದು ಹೇಳುತ್ತಾ ಡ್ರಾಗನ್ ನಿಂದ ಇರಿದಿದ್ದಾರೆ.ಈ ವೇಳೆ ರವಿ ಸ್ನೇಹಿತರು ಮಧ್ಯ ಪ್ರವೇಶಿಸಿ ರವಿಯನ್ನ ಬಿಡಿಸಿಕೊಂಡಿದ್ದಾರೆ.ತೀವ್ರ ಗಾಯಗೊಂಡ ರವಿಯನ್ನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ.ದಾಳಿ ನಡೆಸಿದ ನಾಲ್ವರ ವಿರುದ್ದ ಪ್ರಕರಣ ದಾಖಲಾಗಿದೆ…

Spread the love

Related post

KRSನಲ್ಲಿ ಮತ್ತೆ ಭದ್ರತಾ ಲೋಪ ಆರೋಪ…ನಿರ್ಬಂಧಿತ ಪ್ರದೇಶದಲ್ಲಿ ಪ್ರಭಾವಿಗಳ ಕಾರುಬಾರು…

KRSನಲ್ಲಿ ಮತ್ತೆ ಭದ್ರತಾ ಲೋಪ ಆರೋಪ…ನಿರ್ಬಂಧಿತ ಪ್ರದೇಶದಲ್ಲಿ ಪ್ರಭಾವಿಗಳ ಕಾರುಬಾರು…

KRSನಲ್ಲಿ ಮತ್ತೆ ಭದ್ರತಾ ಲೋಪ ಆರೋಪ…ನಿರ್ಬಂಧಿತ ಪ್ರದೇಶದಲ್ಲಿ ಪ್ರಭಾವಿಗಳ ಕಾರುಬಾರು… ಮಂಡ್ಯ,ನ4,Tv10 ಕನ್ನಡ ಕೆ.ಆರ್.ಎಸ್.ನಲ್ಲಿ ಮತ್ತೆ ಭದ್ರತಾ ಲೋಪದ ಕೂಗು ಕೇಳಿ ಬರುತ್ತಿದೆ.ಪದೇ ಪದೇ ಭದ್ರತಾ ಲೋಪವಾದರೂ ಸಂಬಧಪಟ್ಟವರು…
ಕಾಳಿದಾಸ ರಸ್ತೆ ಮ್ಯಾನ್ ಹೋಲ್ ಗೆ ಮರುಜೀವ…ಕಾಮಗಾರಿ ಆರಂಭ…Tv10 ಕನ್ನಡ ವರದಿ ಫಲಶೃತಿ…

ಕಾಳಿದಾಸ ರಸ್ತೆ ಮ್ಯಾನ್ ಹೋಲ್ ಗೆ ಮರುಜೀವ…ಕಾಮಗಾರಿ ಆರಂಭ…Tv10 ಕನ್ನಡ ವರದಿ…

ಕಾಳಿದಾಸ ರಸ್ತೆ ಮ್ಯಾನ್ ಹೋಲ್ ಗೆ ಮರುಜೀವ…ಕಾಮಗಾರಿ ಆರಂಭ…Tv10 ಕನ್ನಡ ವರದಿ ಫಲಶೃತಿ… ಮೈಸೂರು,ನ3,Tv10 ಕನ್ನಡ ಕೊನೆಗೂ ಮೈಸೂರಿನ ಕಾಳಿದಾಸ ರಸ್ತೆಯಲ್ಲಿ ಕುಸಿದು ಅಪಾಯಕ್ಕೆ ಆಹ್ವಾನ ನೀಡುತ್ತಿದ್ದ ಮ್ಯಾನ್…
ಬೈಕ್ ಕೆಎಸ್ ಆರ್ ಟಿಸಿ ಬಸ್ ಢಿಕ್ಕಿ…ಓರ್ವ ಸಾವು…ಇಬ್ಬರಿಗೆ ಗಂಭೀರ ಗಾಯ…

ಬೈಕ್ ಕೆಎಸ್ ಆರ್ ಟಿಸಿ ಬಸ್ ಢಿಕ್ಕಿ…ಓರ್ವ ಸಾವು…ಇಬ್ಬರಿಗೆ ಗಂಭೀರ ಗಾಯ…

ಬೈಕ್ ಕೆಎಸ್ ಆರ್ ಟಿಸಿ ಬಸ್ ಢಿಕ್ಕಿ…ಓರ್ವ ಸಾವು…ಇಬ್ಬರಿಗೆ ಗಂಭೀರ ಗಾಯ… ನಂಜನಗೂಡು,ನ2,Tv10 ಕನ್ನಡ ಟ್ರಿಪ್ಸ್ ನಲ್ಲಿ ಸಾಗುತ್ತಿದ್ದ ಬೈಕ್ ಗೆ ಕೆಎಸ್ ಆರ್ ಟಿಸಿ ಬೈಕ್ ಢಿಕ್ಕಿ…

Leave a Reply

Your email address will not be published. Required fields are marked *