ಕುಡಿಯಲು ಹಣ ನೀಡದ ಯುವಕನ ತಲೆ ಕೂದಲು ಕತ್ತರಿಸಿ,ಬಸ್ಕಿ ಹೊಡೆಸಿ,ಕೊಲೆ ಬೆದರಿಕೆ…ಮೂವರ ವಿರುದ್ದ FIR…

ಕುಡಿಯಲು ಹಣ ನೀಡದ ಯುವಕನ ತಲೆ ಕೂದಲು ಕತ್ತರಿಸಿ,ಬಸ್ಕಿ ಹೊಡೆಸಿ,ಕೊಲೆ ಬೆದರಿಕೆ…ಮೂವರ ವಿರುದ್ದ FIR…

  • Crime
  • September 2, 2025
  • No Comment
  • 310

ಕುಡಿಯಲು ಹಣ ನೀಡದ ಯುವಕನ ತಲೆ ಕೂದಲು ಕತ್ತರಿಸಿ,ಬಸ್ಕಿ ಹೊಡೆಸಿ,ಕೊಲೆ ಬೆದರಿಕೆ…ಮೂವರ ವಿರುದ್ದ FIR…

ಮೈಸೂರು,ಸೆ2,Tv10 ಕನ್ನಡ

ಕುಡಿಯಲು ಹಣ ನೀಡದ ಯುವಕನ ಮೇಲೆ ಮೂವರ ತಂಡ ದಾಳಿ ನಡೆಸಿ ತಲೆ ಕೂದಲು ಕಟ್ ಮಾಡಿ ಬಸ್ಕಿ ಹೊಡೆಸಿ ಬಲವಂತವಾಗಿ ಜೇಬಿನಿಂದ ಒಂದು ಸಾವಿರ ಕಿತ್ತು ಕೊಲೆ ಬೆದರಿಕೆ ಹಾಕಿ ಪರಾರಿಯಾದ ಘಟನೆ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಮಸ್ಜಿದ್ ಬ್ಲಾಕ್ ನ ಮೊಹಮದ್ ಸಾಕ್ಲೇನ್ ಹಣ ಕಳೆದುಕೊಂಡ ಯುವಕ.ನವಾಜ್,ಅಬ್ರಾರ್ ಹಾಗೂ ಸೇಠು ಎಂಬುವರ ವಿರುದ್ದ ಪ್ರಕರಣ ದಾಖಲಾಗಿದೆ.

ಹೂವು ಕಟ್ಟುವ ಕೆಲಸ ಮಾಡುವ ಮಹಮದ್ ಸಾಕ್ಲೇನ್ ಕೆಲಸ ಮುಗಿಸಿ ರಾತ್ರಿ ಸುಮಾರು 11.30 ರಲ್ಲಿ ಮನೆಗೆ ತೆರಳುತ್ತಿದ್ದಾಗ ನವಾಜ್,ಅಬ್ರಾರ್ ಹಾಗೂ ಸೇಠ ಅಡ್ಡಗಟ್ಟಿ ಕುಡಿಯಲು ಹಣ ನೀಡುವಂತೆ ಧಂಕಿ ಹಾಕಿದ್ದಾರೆ.ಹಣ ನೀಡಲು ನಿರಾಕರಿಸಿದಾಗ ಇಬ್ಬರು ಮಹಮದ್ ಸಾಕ್ಲೇನ್ ನ ಗಟ್ಟಿಯಾಗಿ ಹಿಡಿದುಕೊಂಡಿದ್ದಾರೆ.ಮತ್ತೊಬ್ಬ ಬ್ಲೇಡ್ ತೆಗೆದು ಕೂದಲನ್ನ ಕಟ್ ಮಾಡಿ ನಂತರ ಬಲವಂತವಾಗಿ ಬಸ್ಕಿ ಹೊಡೆಸಿ ಜೇಬಿನಲ್ಲಿದ್ದ ಒಂದು ಸಾವಿರ ಹಣವನ್ನ ಕಸಿದು ಯಾರಿಗಾದ್ರೂ ಹೇಳಿದ್ರೆ ಕೊಲೆ ಮಾಡುವುದಾಗಿ ಬೆದರಿಸಿ ಹಿಗ್ಗಮುಗ್ಗಾ ಥಳಿಸಿ ಪರಾರಿಯಾಗಿದ್ದಾರೆ.ಮೂವರು ಖದೀಮರಿಂದ ಬಿಡಿಸಿಕೊಂಡ ಮಹಮದ್ ಸಕ್ಲೇನ್ ಮನೆಗೆ ಬಂದು ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನಂತರ ಸಂಪೂರ್ಣ ಕೂದಲನ್ನ ತೆಗೆಸಿ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾನೆ…

Spread the love

Related post

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…
ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು… ಎಚ್.ಡಿ.ಕೋಟೆ,ಜೂ4,Tv10 ಕನ್ನಡ ಸರ್ಕಾರಿ ಶಾಲಾ ದಾಖಲಾತಿಯಲ್ಲಿ ಬೋವಿ ಎಂಬುದನ್ನು ಬೋಯಿ ಎಂದು ತಿದ್ದಿದ ಆರೋಪದ ಹಿನ್ನಲೆ ಶಾಲೆ ಮುಖ್ಯಶಿಕ್ಷಕ ಅಮಾನತುಪಡಿಸಲಾಗಿದೆ.ಹೆಚ್.ಡಿ.ಕೋಟೆ…

Leave a Reply

Your email address will not be published. Required fields are marked *