ಜಾಮೀನು ನೀಡಲು ಬಂದ ವ್ಯಕ್ತಿ ಮೇಲೆ ಹಲ್ಲೆ…ನ್ಯಾಯಾಲಯದ ಆವರಣದಲ್ಲೇ ಘಟನೆ…ಇಬ್ಬರು ವಕೀಲರು ಸೇರಿದಂತೆ ನಾಲ್ವರ ವಿರುದ್ದ FIR…

ಜಾಮೀನು ನೀಡಲು ಬಂದ ವ್ಯಕ್ತಿ ಮೇಲೆ ಹಲ್ಲೆ…ನ್ಯಾಯಾಲಯದ ಆವರಣದಲ್ಲೇ ಘಟನೆ…ಇಬ್ಬರು ವಕೀಲರು ಸೇರಿದಂತೆ ನಾಲ್ವರ ವಿರುದ್ದ FIR…

  • Crime
  • September 2, 2025
  • No Comment
  • 122

ಜಾಮೀನು ನೀಡಲು ಬಂದ ವ್ಯಕ್ತಿ ಮೇಲೆ ಹಲ್ಲೆ…ನ್ಯಾಯಾಲಯದ ಆವರಣದಲ್ಲೇ ಘಟನೆ…ಇಬ್ಬರು ವಕೀಲರು ಸೇರಿದಂತೆ ನಾಲ್ವರ ವಿರುದ್ದ FIR…

ಮೈಸೂರು,ಸೆ2,Tv10 ಕನ್ನಡ

ಜಾಮೀನು ನೀಡಲು ಬಂದ ವ್ಯಕ್ತಿ ಮೇಲೆ ನ್ಯಾಯಾಲಯದ ಆವರಣದಲ್ಲೇ ಹಲ್ಲೆ ನಡೆಸಿದ ಘಟನೆ ಕುರಿತಂತೆ ಅಶೋಕಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಗದ್ದಿಗೆ ಬಳಿಯ ಮರಯ್ಯನಹುಂಡಿ ನಿವಾಸಿ ಕೆಂಡಗಣ್ಣಪ್ಪ ಎಂಬುವರೇ ಹಲ್ಲೆಗೆ ಒಳಗಾದವರು.ವಕೀಲರಾದ ರವಿ,ಸುರೇಶ್ ಹಾಗೂ ಇವರ ತಂದೆ ಶಿವಣ್ಣ ಹಾಗೂ ಸಹೋದರ ಕೆಂಡಗಣ್ಣ ಎಂಬುವರ ವಿರುದ್ದ ಪ್ರಕರಣ ದಾಖಲಾಗಿದೆ.

ಮರಯ್ಯನಹುಂಡಿ ಗ್ರಾಮದ ನಾಗರಾಜ್ ಎಂಬುವರಿಗೆ ಜಾಮೀನು ನೀಡಲು ಕೆಂಡಗಣ್ಣಪ್ಪ ಹೊಸನ್ಯಾಯಾಲಯಕ್ಕೆ ಬಂದಿದ್ದರು.2 ನೇ ಜೆಎಂಎಫ್ ಸಿ ಬಾಗಿಲ ಬಳಿ ಜಯಣ್ಣ ಎಂಬುವರ ಜೊತೆ ನಿಂತಿದ್ದಾಗ ರವಿ ಹಾಗೂ ಸುರೇಶ್ ದಿಟ್ಟಿಸಿ ನೋಡಿದ್ದಾರೆ.ನಂತರ ಆವರಣದಲ್ಲೇ ಜೆರಾಕ್ಸ್ ಮಾಡುವ ಸ್ಥಳಕ್ಕೆ ಬಂದಾಗ ಎದುರಾದ ರವಿ ಹಾಗೂ ಸುರೇಶ್ ಜಾಮೀನು ನೀಡದಂತೆ ಒತ್ತಾಯಿಸಿದ್ದಲ್ಲದೆ ಏಕಾಏಕಿ ಕೆಂಡಗಣ್ಣಪ್ಪ ರವರ ಮೇಲೆ ಹಲ್ಲೆ ನಡೆಸಿದ್ದಾರೆ.ನಾವು ಲಾಯರ್ ಗಳು ಇದರಿಂದ ಹೊರಬರುವುದು ಗೊತ್ತು ಎಂದು ಧಂಕಿ ಹಾಕಿ ಹಲ್ಲೆ ನಡೆಸಿದ್ದಾರೆಂದು ಕೆಂಡಗಣ್ಣಪ್ಪ ದೂರಿನಲ್ಲಿ ದಾಖಲಿಸಿದ್ದಾರೆ.ಹಲ್ಲೆಗೆ ರವಿ ಹಾಗೂ ಸುರೇಶ್ ತಂದೆ ಶಿವಣ್ಣ ಹಾಗೂ ಸಹೋದರ ಕೆಂಡಗಣ್ಣ ಸಹಕರಿಸಿರುವುದಾಗಿ ಆರೋಪಿಸಿರುವ ಕೆಂಡಗಣ್ಣಪ್ಪ ಕಾನೂನು ಕ್ರಮ ಕೈಗೊಳ್ಳುವಂತೆ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ ಹರಿಸಲು ರೈತರ ಮನವಿ

ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ…

ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ ಹರಿಸಲು ರೈತರ ಮನವಿ ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಗೇಟ್ ಸಮೀಪದ ಸರ್ವೇ ನಂ.218/1ಕ್ಕೆ ಸೇರಿದ ಸರ್ಕಾರಿ…
ಮೈಸೂರು, ಏಪ್ರಿಲ್ 13: ವಿಶ್ವಪ್ರಸಿದ್ಧ KRS Brindavan Gardens ನಲ್ಲಿ ಡಿಜಿಟಲ್ ಯುಗದಲ್ಲಿಯೂ “ಕ್ಯಾಶ್ ಮಾತ್ರ” ನಿಯಮ ಮುಂದುವರಿಯುತ್ತಿರುವುದು ಪ್ರವಾಸಿಗರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.

ಮೈಸೂರು, ಏಪ್ರಿಲ್ 13: ವಿಶ್ವಪ್ರಸಿದ್ಧ KRS Brindavan Gardens ನಲ್ಲಿ ಡಿಜಿಟಲ್…

ಮೈಸೂರು, ಏಪ್ರಿಲ್ 13: ವಿಶ್ವಪ್ರಸಿದ್ಧ KRS Brindavan Gardens ನಲ್ಲಿ ಡಿಜಿಟಲ್ ಯುಗದಲ್ಲಿಯೂ “ಕ್ಯಾಶ್ ಮಾತ್ರ” ನಿಯಮ ಮುಂದುವರಿಯುತ್ತಿರುವುದು ಪ್ರವಾಸಿಗರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಪ್ರವೇಶ ಟಿಕೆಟ್ ಪಡೆಯಲು ಬರುವವರಿಗೆ…
ಯುವಕನ ಕಿಡ್ನಾಪ್…ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್…ಸೆಕ್ಸ್ ವರ್ಕ್ ಗೆಯೂಸ್…ಕರಾಳದಂಧೆಯ ಮತ್ತೊಂದು ಮುಖ ಬಯಲು…

ಯುವಕನ ಕಿಡ್ನಾಪ್…ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್…ಸೆಕ್ಸ್ ವರ್ಕ್ ಗೆಯೂಸ್…ಕರಾಳದಂಧೆಯ ಮತ್ತೊಂದು ಮುಖ…

ಯುವಕನ ಕಿಡ್ನಾಪ್…ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್…ಸೆಕ್ಸ್ ವರ್ಕ್ ಗೆಯೂಸ್…ಕರಾಳದಂಧೆಯ ಮತ್ತೊಂದು ಮುಖ ಬಯಲು… ನಂಜನಗೂಡು,ಏ12,Tv10 ಕನ್ನಡ ಯುವಕನೊಬ್ಬನನ್ನ ಕಿಡ್ನಾಪ್ ಮಾಡಿ ಬಲವಂತವಾಗಿ ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್ ಹಾಗೂ…

Leave a Reply

Your email address will not be published. Required fields are marked *