ಜಾಮೀನು ನೀಡಲು ಬಂದ ವ್ಯಕ್ತಿ ಮೇಲೆ ಹಲ್ಲೆ…ನ್ಯಾಯಾಲಯದ ಆವರಣದಲ್ಲೇ ಘಟನೆ…ಇಬ್ಬರು ವಕೀಲರು ಸೇರಿದಂತೆ ನಾಲ್ವರ ವಿರುದ್ದ FIR…

ಜಾಮೀನು ನೀಡಲು ಬಂದ ವ್ಯಕ್ತಿ ಮೇಲೆ ಹಲ್ಲೆ…ನ್ಯಾಯಾಲಯದ ಆವರಣದಲ್ಲೇ ಘಟನೆ…ಇಬ್ಬರು ವಕೀಲರು ಸೇರಿದಂತೆ ನಾಲ್ವರ ವಿರುದ್ದ FIR…

  • Crime
  • September 2, 2025
  • No Comment
  • 97

ಜಾಮೀನು ನೀಡಲು ಬಂದ ವ್ಯಕ್ತಿ ಮೇಲೆ ಹಲ್ಲೆ…ನ್ಯಾಯಾಲಯದ ಆವರಣದಲ್ಲೇ ಘಟನೆ…ಇಬ್ಬರು ವಕೀಲರು ಸೇರಿದಂತೆ ನಾಲ್ವರ ವಿರುದ್ದ FIR…

ಮೈಸೂರು,ಸೆ2,Tv10 ಕನ್ನಡ

ಜಾಮೀನು ನೀಡಲು ಬಂದ ವ್ಯಕ್ತಿ ಮೇಲೆ ನ್ಯಾಯಾಲಯದ ಆವರಣದಲ್ಲೇ ಹಲ್ಲೆ ನಡೆಸಿದ ಘಟನೆ ಕುರಿತಂತೆ ಅಶೋಕಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಗದ್ದಿಗೆ ಬಳಿಯ ಮರಯ್ಯನಹುಂಡಿ ನಿವಾಸಿ ಕೆಂಡಗಣ್ಣಪ್ಪ ಎಂಬುವರೇ ಹಲ್ಲೆಗೆ ಒಳಗಾದವರು.ವಕೀಲರಾದ ರವಿ,ಸುರೇಶ್ ಹಾಗೂ ಇವರ ತಂದೆ ಶಿವಣ್ಣ ಹಾಗೂ ಸಹೋದರ ಕೆಂಡಗಣ್ಣ ಎಂಬುವರ ವಿರುದ್ದ ಪ್ರಕರಣ ದಾಖಲಾಗಿದೆ.

ಮರಯ್ಯನಹುಂಡಿ ಗ್ರಾಮದ ನಾಗರಾಜ್ ಎಂಬುವರಿಗೆ ಜಾಮೀನು ನೀಡಲು ಕೆಂಡಗಣ್ಣಪ್ಪ ಹೊಸನ್ಯಾಯಾಲಯಕ್ಕೆ ಬಂದಿದ್ದರು.2 ನೇ ಜೆಎಂಎಫ್ ಸಿ ಬಾಗಿಲ ಬಳಿ ಜಯಣ್ಣ ಎಂಬುವರ ಜೊತೆ ನಿಂತಿದ್ದಾಗ ರವಿ ಹಾಗೂ ಸುರೇಶ್ ದಿಟ್ಟಿಸಿ ನೋಡಿದ್ದಾರೆ.ನಂತರ ಆವರಣದಲ್ಲೇ ಜೆರಾಕ್ಸ್ ಮಾಡುವ ಸ್ಥಳಕ್ಕೆ ಬಂದಾಗ ಎದುರಾದ ರವಿ ಹಾಗೂ ಸುರೇಶ್ ಜಾಮೀನು ನೀಡದಂತೆ ಒತ್ತಾಯಿಸಿದ್ದಲ್ಲದೆ ಏಕಾಏಕಿ ಕೆಂಡಗಣ್ಣಪ್ಪ ರವರ ಮೇಲೆ ಹಲ್ಲೆ ನಡೆಸಿದ್ದಾರೆ.ನಾವು ಲಾಯರ್ ಗಳು ಇದರಿಂದ ಹೊರಬರುವುದು ಗೊತ್ತು ಎಂದು ಧಂಕಿ ಹಾಕಿ ಹಲ್ಲೆ ನಡೆಸಿದ್ದಾರೆಂದು ಕೆಂಡಗಣ್ಣಪ್ಪ ದೂರಿನಲ್ಲಿ ದಾಖಲಿಸಿದ್ದಾರೆ.ಹಲ್ಲೆಗೆ ರವಿ ಹಾಗೂ ಸುರೇಶ್ ತಂದೆ ಶಿವಣ್ಣ ಹಾಗೂ ಸಹೋದರ ಕೆಂಡಗಣ್ಣ ಸಹಕರಿಸಿರುವುದಾಗಿ ಆರೋಪಿಸಿರುವ ಕೆಂಡಗಣ್ಣಪ್ಪ ಕಾನೂನು ಕ್ರಮ ಕೈಗೊಳ್ಳುವಂತೆ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು… ಹುಣಸೂರು,ಡಿ20,Tv10 ಕನ್ನಡ ಸುಡುತ್ತಿರುವ ಬಿಸಿನೀರಿನ ಪಾತ್ರೆಗೆ ಬಿದ್ದು ಹೆಣ್ಣುಮಗು ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ವಿಜಯಗಿರಿ ಹಾಡಿಯಲ್ಲಿ ನಡೆದಿದೆ. ಆದಿವಾಸಿ…
ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ… ಹುಣಸೂರು,ಡಿ19,Tv10 ಕನ್ನಡ ಕ್ಲುಲ್ಲಕ ಕಾರಣಕ್ಕೆ ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಹುಣಸೂರು ನಗರದಲ್ಲಿ ನಡೆದಿದೆ.ನಿಜಾಂ ಮೊಹಲ್ಲಾದ ನಿವಾಸಿ ಖಾಜಾಪೀರ್(44)ಕೊಲೆಯಾದ…
ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ… ಮಂಡ್ಯ,ಡಿ19,Tv10 ಕನ್ನಡ ಜಮೀನು ವಿಚಾರದಲ್ಲಿ ಮಾಜಿ ಶಾಸಕ ಹಾಗೂ ಪುತ್ರ ವ್ಯಕ್ತಿ ಮೇಲೆ…

Leave a Reply

Your email address will not be published. Required fields are marked *