ಮದುವೆ ಆಗುವುದಾಗಿ ನಂಬಿಸಿ ಕೈಕೊಟ್ಟ ವಿವಾಹಿತ…ಎರಡನೇ ಮಹಡಿಯಿಂದ ತಳ್ಳಿ ಪ್ರಿಯಕರಳ ಕೊಲೆಗೆ ಯತ್ನ…ಮೂವರ ವಿರುದ್ದ FIR…

ಮದುವೆ ಆಗುವುದಾಗಿ ನಂಬಿಸಿ ಕೈಕೊಟ್ಟ ವಿವಾಹಿತ…ಎರಡನೇ ಮಹಡಿಯಿಂದ ತಳ್ಳಿ ಪ್ರಿಯಕರಳ ಕೊಲೆಗೆ ಯತ್ನ…ಮೂವರ ವಿರುದ್ದ FIR…

  • Crime
  • September 10, 2025
  • No Comment
  • 132

ಮದುವೆ ಆಗುವುದಾಗಿ ನಂಬಿಸಿ ಕೈಕೊಟ್ಟ ವಿವಾಹಿತ…ಎರಡನೇ ಮಹಡಿಯಿಂದ ತಳ್ಳಿ ಪ್ರಿಯಕರಳ ಕೊಲೆಗೆ ಯತ್ನ…ಮೂವರ ವಿರುದ್ದ FIR…

ಮೈಸೂರು,ಸೆ10,Tv10 ಕನ್ನಡ

ಒಂದು ಮದುವೆ ಆಗಿದ್ದರೂ ಯುವತಿಯೊಬ್ಬಳನ್ನ ಪ್ರೀತಿಸಿ ಮದುವೆ ಆಗುವುದಾಗಿ ನಂಬಿಸಿ ಕೈಕೊಟ್ಟ ಪ್ರಿಯಕರ ಪ್ರೇಯಸಿಯನ್ನ ಎರಡನೇ ಮಹಡಿಯಿಂದ ತಳ್ಳಿ ಕೊಲೆಗೆ ಯತ್ನಿಸಿದ ಘಟನೆ ಮೈಸೂರಿನ ದಟ್ಟಗಳ್ಳಿ ಬಡಾವಣೆಯಲ್ಲಿ ನಡೆದಿದೆ.ಎರಡನೇ ಮಹಡಿಯಿಂದ ಕೆಳಬಿದ್ದ ಯುವತಿ ತೀವ್ರ ಗಾಯಗೊಂಡಿದ್ದು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಈ ಸಂಭಂಧ ಪ್ರಿಯಕರ ಆಲ್ಬರ್ಟ್,ಈತನ ತಮ್ಮ ಗೋಕುಲ್ ಹಾಗೂ ಪತ್ನಿ ಸುಭಿತ ಮೇಲೆ ಯುವತಿ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ನೊಂದ ಯುವತಿ ಹಾಗೂ ಆಲ್ಬರ್ಟ್ ಬೆಂಗಳೂರಿನ ಕಾರ್ ಶೋರೂಂ ನಲ್ಲಿ ಸಹದ್ಯೋಗಿಗಳು.ಕಳೆದ ಮೂರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು.ಒಂದು ವರ್ಷದ ಹಿಂದೆ ಆಲ್ಬರ್ಟ್ ಮೈಸೂರಿನಲ್ಲಿ ನೆಲೆಸಿದ್ದು ಖಾಸಗಿ ಕಾರ್ ಶೋರೂಂ ನಲ್ಲಿ ಕೆಲಸ ಮಾಡುತ್ತಿದ್ದ.4 ತಿಂಗಳ ಹಿಂದೆ ಪ್ರೇಯಸಿಯನ್ನೂ ಸಹ ಮೈಸೂರಿಗೆ ಕರೆಸಿಕೊಂಡು ವಿಜಯನಗರದಲ್ಲಿ ಮನೆ ಮಾಡಿ ಇರಿಸಿದ್ದ.ವಿವಾಹಿತನಾಗಿದ್ದ ಆಲ್ಬರ್ಟ್ ತನಗೂ ಹಾಗೂ ಪತ್ನಿ ನಡುವಿನ ವೈವಾಹಿಕ ಜೀವನ ಸರಿ ಇಲ್ಲ,ಡೈವೋರ್ಸ್ ಕೊಡುತ್ತಿದ್ದೇನೆ ನಂತರ ನಿನ್ನನ್ನು ಮದುವೆ ಆಗುತ್ತೇನೆಂದು ನಂಬಿಸಿದ್ದ.ಕಳೆದ ನಾಲ್ಕಾರು ದಿನಗಳಿಂದ ಆಲ್ಬರ್ಟ್ ಮನೆಗೆ ಬಂದಿರಲಿಲ್ಲ.ಮದುವೆ ವಿಚಾರದಲ್ಲಿ ಇಬ್ಬರ ನಡುವೆ ಗಲಾಟೆ ಆಗಿತ್ತು.ಆಲ್ಬರ್ಟ್ ಕೆಲಸ ಮಾಡುತ್ತಿದ್ದ ಕಾರ್ ಶೋರೂಂ ಗೆ ಹೋಗಿ ಪರಿಶೀಲಿಸಿದಾಗ ಬಂದಿರಲಿಲ್ಲ.ನೇರವಾಗಿ ದಟ್ಟಗಳ್ಳಿಯಲ್ಲಿದ್ದ ಆಲ್ಬರ್ಟ್ ಮನೆಗೆ ಯುವತಿ ತೆರಳಿದಾಗ ಪತ್ನಿ ಸುಭಿತ ಎದುರಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.ನಂತರ ಆಲ್ಬರ್ಟ್ ತಮ್ಮ ಗೋಕುಲ್ ಸಹ ಬಂದು ಯುವತಿಗೆ ನಿಂದಿಸಿದ್ದಾರೆ.ಇದೇ ವೇಳೆ ಬಂದ ಆಲ್ಬರ್ಟ್ ಮಹಡಿಯಿಂದ ಕೆಳಗೆ ತಳ್ಳುವಂತೆ ಗೋಕುಲ್ ಗೆ ಸೂಚಿಸಿದ್ದಾನೆ.ಆಲ್ಬರ್ಟ್ ಸಹ ಎರಡನೇ ಮಹಡಿ ತಲುಪಿ ಇಬ್ಬರೂ ಸೇರಿ ಯುವತಿಯನ್ನ ಕೆಳಗೆ ತಳ್ಳಿದ್ದಾರೆ.ಘಟನೆಯಲ್ಲಿ ತೀವ್ರ ಗಾಯಗೊಂಡ ಯುವತಿಯನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ತನ್ನನ್ನು ಕೊಲೆ ಮಾಡುವು ಉದ್ದೇಶದಿಂದ ಮಹಡಿಯಿಂದ ಕೆಳಗೆ ತಳ್ಳಿದ್ದಾರೆಂದು ಆರೋಪಿಸಿ ಯುವತಿ ಆಲ್ಬರ್ಟ್ ಸೇರಿದಂತೆ ಮೂವರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು… ಹುಣಸೂರು,ಡಿ20,Tv10 ಕನ್ನಡ ಸುಡುತ್ತಿರುವ ಬಿಸಿನೀರಿನ ಪಾತ್ರೆಗೆ ಬಿದ್ದು ಹೆಣ್ಣುಮಗು ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ವಿಜಯಗಿರಿ ಹಾಡಿಯಲ್ಲಿ ನಡೆದಿದೆ. ಆದಿವಾಸಿ…
ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ… ಹುಣಸೂರು,ಡಿ19,Tv10 ಕನ್ನಡ ಕ್ಲುಲ್ಲಕ ಕಾರಣಕ್ಕೆ ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಹುಣಸೂರು ನಗರದಲ್ಲಿ ನಡೆದಿದೆ.ನಿಜಾಂ ಮೊಹಲ್ಲಾದ ನಿವಾಸಿ ಖಾಜಾಪೀರ್(44)ಕೊಲೆಯಾದ…
ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ… ಮಂಡ್ಯ,ಡಿ19,Tv10 ಕನ್ನಡ ಜಮೀನು ವಿಚಾರದಲ್ಲಿ ಮಾಜಿ ಶಾಸಕ ಹಾಗೂ ಪುತ್ರ ವ್ಯಕ್ತಿ ಮೇಲೆ…

Leave a Reply

Your email address will not be published. Required fields are marked *