ಮದುವೆ ಆಗುವುದಾಗಿ ನಂಬಿಸಿ ಕೈಕೊಟ್ಟ ವಿವಾಹಿತ…ಎರಡನೇ ಮಹಡಿಯಿಂದ ತಳ್ಳಿ ಪ್ರಿಯಕರಳ ಕೊಲೆಗೆ ಯತ್ನ…ಮೂವರ ವಿರುದ್ದ FIR…

ಮದುವೆ ಆಗುವುದಾಗಿ ನಂಬಿಸಿ ಕೈಕೊಟ್ಟ ವಿವಾಹಿತ…ಎರಡನೇ ಮಹಡಿಯಿಂದ ತಳ್ಳಿ ಪ್ರಿಯಕರಳ ಕೊಲೆಗೆ ಯತ್ನ…ಮೂವರ ವಿರುದ್ದ FIR…

  • Crime
  • September 10, 2025
  • No Comment
  • 149

ಮದುವೆ ಆಗುವುದಾಗಿ ನಂಬಿಸಿ ಕೈಕೊಟ್ಟ ವಿವಾಹಿತ…ಎರಡನೇ ಮಹಡಿಯಿಂದ ತಳ್ಳಿ ಪ್ರಿಯಕರಳ ಕೊಲೆಗೆ ಯತ್ನ…ಮೂವರ ವಿರುದ್ದ FIR…

ಮೈಸೂರು,ಸೆ10,Tv10 ಕನ್ನಡ

ಒಂದು ಮದುವೆ ಆಗಿದ್ದರೂ ಯುವತಿಯೊಬ್ಬಳನ್ನ ಪ್ರೀತಿಸಿ ಮದುವೆ ಆಗುವುದಾಗಿ ನಂಬಿಸಿ ಕೈಕೊಟ್ಟ ಪ್ರಿಯಕರ ಪ್ರೇಯಸಿಯನ್ನ ಎರಡನೇ ಮಹಡಿಯಿಂದ ತಳ್ಳಿ ಕೊಲೆಗೆ ಯತ್ನಿಸಿದ ಘಟನೆ ಮೈಸೂರಿನ ದಟ್ಟಗಳ್ಳಿ ಬಡಾವಣೆಯಲ್ಲಿ ನಡೆದಿದೆ.ಎರಡನೇ ಮಹಡಿಯಿಂದ ಕೆಳಬಿದ್ದ ಯುವತಿ ತೀವ್ರ ಗಾಯಗೊಂಡಿದ್ದು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಈ ಸಂಭಂಧ ಪ್ರಿಯಕರ ಆಲ್ಬರ್ಟ್,ಈತನ ತಮ್ಮ ಗೋಕುಲ್ ಹಾಗೂ ಪತ್ನಿ ಸುಭಿತ ಮೇಲೆ ಯುವತಿ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ನೊಂದ ಯುವತಿ ಹಾಗೂ ಆಲ್ಬರ್ಟ್ ಬೆಂಗಳೂರಿನ ಕಾರ್ ಶೋರೂಂ ನಲ್ಲಿ ಸಹದ್ಯೋಗಿಗಳು.ಕಳೆದ ಮೂರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು.ಒಂದು ವರ್ಷದ ಹಿಂದೆ ಆಲ್ಬರ್ಟ್ ಮೈಸೂರಿನಲ್ಲಿ ನೆಲೆಸಿದ್ದು ಖಾಸಗಿ ಕಾರ್ ಶೋರೂಂ ನಲ್ಲಿ ಕೆಲಸ ಮಾಡುತ್ತಿದ್ದ.4 ತಿಂಗಳ ಹಿಂದೆ ಪ್ರೇಯಸಿಯನ್ನೂ ಸಹ ಮೈಸೂರಿಗೆ ಕರೆಸಿಕೊಂಡು ವಿಜಯನಗರದಲ್ಲಿ ಮನೆ ಮಾಡಿ ಇರಿಸಿದ್ದ.ವಿವಾಹಿತನಾಗಿದ್ದ ಆಲ್ಬರ್ಟ್ ತನಗೂ ಹಾಗೂ ಪತ್ನಿ ನಡುವಿನ ವೈವಾಹಿಕ ಜೀವನ ಸರಿ ಇಲ್ಲ,ಡೈವೋರ್ಸ್ ಕೊಡುತ್ತಿದ್ದೇನೆ ನಂತರ ನಿನ್ನನ್ನು ಮದುವೆ ಆಗುತ್ತೇನೆಂದು ನಂಬಿಸಿದ್ದ.ಕಳೆದ ನಾಲ್ಕಾರು ದಿನಗಳಿಂದ ಆಲ್ಬರ್ಟ್ ಮನೆಗೆ ಬಂದಿರಲಿಲ್ಲ.ಮದುವೆ ವಿಚಾರದಲ್ಲಿ ಇಬ್ಬರ ನಡುವೆ ಗಲಾಟೆ ಆಗಿತ್ತು.ಆಲ್ಬರ್ಟ್ ಕೆಲಸ ಮಾಡುತ್ತಿದ್ದ ಕಾರ್ ಶೋರೂಂ ಗೆ ಹೋಗಿ ಪರಿಶೀಲಿಸಿದಾಗ ಬಂದಿರಲಿಲ್ಲ.ನೇರವಾಗಿ ದಟ್ಟಗಳ್ಳಿಯಲ್ಲಿದ್ದ ಆಲ್ಬರ್ಟ್ ಮನೆಗೆ ಯುವತಿ ತೆರಳಿದಾಗ ಪತ್ನಿ ಸುಭಿತ ಎದುರಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.ನಂತರ ಆಲ್ಬರ್ಟ್ ತಮ್ಮ ಗೋಕುಲ್ ಸಹ ಬಂದು ಯುವತಿಗೆ ನಿಂದಿಸಿದ್ದಾರೆ.ಇದೇ ವೇಳೆ ಬಂದ ಆಲ್ಬರ್ಟ್ ಮಹಡಿಯಿಂದ ಕೆಳಗೆ ತಳ್ಳುವಂತೆ ಗೋಕುಲ್ ಗೆ ಸೂಚಿಸಿದ್ದಾನೆ.ಆಲ್ಬರ್ಟ್ ಸಹ ಎರಡನೇ ಮಹಡಿ ತಲುಪಿ ಇಬ್ಬರೂ ಸೇರಿ ಯುವತಿಯನ್ನ ಕೆಳಗೆ ತಳ್ಳಿದ್ದಾರೆ.ಘಟನೆಯಲ್ಲಿ ತೀವ್ರ ಗಾಯಗೊಂಡ ಯುವತಿಯನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ತನ್ನನ್ನು ಕೊಲೆ ಮಾಡುವು ಉದ್ದೇಶದಿಂದ ಮಹಡಿಯಿಂದ ಕೆಳಗೆ ತಳ್ಳಿದ್ದಾರೆಂದು ಆರೋಪಿಸಿ ಯುವತಿ ಆಲ್ಬರ್ಟ್ ಸೇರಿದಂತೆ ಮೂವರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ…

Spread the love

Related post

MDA ವಿಶೇಷ ಭೂ ಸ್ವಾಧೀನ ಇಲಾಖೆ ವ್ಯವಸ್ಥಾಪಕಿ ಬಿ.ಶೃತಿ ಎತ್ತಂಗಡಿ…ಕ್ರಿಮಿನಲ್ ಪ್ರಕರಣದಲ್ಲಿ ಭಾಗಿ ಆರೋಪ ಹಿನ್ನಲೆ…ಮಾತೃ ಇಲಾಖೆಗೆ ಹಿಂದಿರುಗುವಂತೆ ಸೂಚನೆ…ಸೇವೆಯಿಂದ ಬಿಡುಗಡೆ ಮಾಡಲು ಎಂಡಿಎ ಮೀನಾಮೇಷ…

MDA ವಿಶೇಷ ಭೂ ಸ್ವಾಧೀನ ಇಲಾಖೆ ವ್ಯವಸ್ಥಾಪಕಿ ಬಿ.ಶೃತಿ ಎತ್ತಂಗಡಿ…ಕ್ರಿಮಿನಲ್ ಪ್ರಕರಣದಲ್ಲಿ…

MDA ವಿಶೇಷ ಭೂ ಸ್ವಾಧೀನ ಇಲಾಖೆ ವ್ಯವಸ್ಥಾಪಕಿ ಬಿ.ಶೃತಿ ಎತ್ತಂಗಡಿ…ಕ್ರಿಮಿನಲ್ ಪ್ರಕರಣದಲ್ಲಿ ಭಾಗಿ ಆರೋಪ ಹಿನ್ನಲೆ…ಮಾತೃ ಇಲಾಖೆಗೆ ಹಿಂದಿರುಗುವಂತೆ ಸೂಚನೆ…ಸೇವೆಯಿಂದ ಬಿಡುಗಡೆ ಮಾಡಲು ಎಂಡಿಎ ಮೀನಾಮೇಷ… ಮೈಸೂರು,ಮಾ10,Tv10 ಕನ್ನಡ…
ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…

Leave a Reply

Your email address will not be published. Required fields are marked *