ಮದುವೆ ಆಗುವುದಾಗಿ ನಂಬಿಸಿ ಕೈಕೊಟ್ಟ ವಿವಾಹಿತ…ಎರಡನೇ ಮಹಡಿಯಿಂದ ತಳ್ಳಿ ಪ್ರಿಯಕರಳ ಕೊಲೆಗೆ ಯತ್ನ…ಮೂವರ ವಿರುದ್ದ FIR…

ಮದುವೆ ಆಗುವುದಾಗಿ ನಂಬಿಸಿ ಕೈಕೊಟ್ಟ ವಿವಾಹಿತ…ಎರಡನೇ ಮಹಡಿಯಿಂದ ತಳ್ಳಿ ಪ್ರಿಯಕರಳ ಕೊಲೆಗೆ ಯತ್ನ…ಮೂವರ ವಿರುದ್ದ FIR…

  • Crime
  • September 10, 2025
  • No Comment
  • 164

ಮದುವೆ ಆಗುವುದಾಗಿ ನಂಬಿಸಿ ಕೈಕೊಟ್ಟ ವಿವಾಹಿತ…ಎರಡನೇ ಮಹಡಿಯಿಂದ ತಳ್ಳಿ ಪ್ರಿಯಕರಳ ಕೊಲೆಗೆ ಯತ್ನ…ಮೂವರ ವಿರುದ್ದ FIR…

ಮೈಸೂರು,ಸೆ10,Tv10 ಕನ್ನಡ

ಒಂದು ಮದುವೆ ಆಗಿದ್ದರೂ ಯುವತಿಯೊಬ್ಬಳನ್ನ ಪ್ರೀತಿಸಿ ಮದುವೆ ಆಗುವುದಾಗಿ ನಂಬಿಸಿ ಕೈಕೊಟ್ಟ ಪ್ರಿಯಕರ ಪ್ರೇಯಸಿಯನ್ನ ಎರಡನೇ ಮಹಡಿಯಿಂದ ತಳ್ಳಿ ಕೊಲೆಗೆ ಯತ್ನಿಸಿದ ಘಟನೆ ಮೈಸೂರಿನ ದಟ್ಟಗಳ್ಳಿ ಬಡಾವಣೆಯಲ್ಲಿ ನಡೆದಿದೆ.ಎರಡನೇ ಮಹಡಿಯಿಂದ ಕೆಳಬಿದ್ದ ಯುವತಿ ತೀವ್ರ ಗಾಯಗೊಂಡಿದ್ದು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಈ ಸಂಭಂಧ ಪ್ರಿಯಕರ ಆಲ್ಬರ್ಟ್,ಈತನ ತಮ್ಮ ಗೋಕುಲ್ ಹಾಗೂ ಪತ್ನಿ ಸುಭಿತ ಮೇಲೆ ಯುವತಿ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ನೊಂದ ಯುವತಿ ಹಾಗೂ ಆಲ್ಬರ್ಟ್ ಬೆಂಗಳೂರಿನ ಕಾರ್ ಶೋರೂಂ ನಲ್ಲಿ ಸಹದ್ಯೋಗಿಗಳು.ಕಳೆದ ಮೂರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು.ಒಂದು ವರ್ಷದ ಹಿಂದೆ ಆಲ್ಬರ್ಟ್ ಮೈಸೂರಿನಲ್ಲಿ ನೆಲೆಸಿದ್ದು ಖಾಸಗಿ ಕಾರ್ ಶೋರೂಂ ನಲ್ಲಿ ಕೆಲಸ ಮಾಡುತ್ತಿದ್ದ.4 ತಿಂಗಳ ಹಿಂದೆ ಪ್ರೇಯಸಿಯನ್ನೂ ಸಹ ಮೈಸೂರಿಗೆ ಕರೆಸಿಕೊಂಡು ವಿಜಯನಗರದಲ್ಲಿ ಮನೆ ಮಾಡಿ ಇರಿಸಿದ್ದ.ವಿವಾಹಿತನಾಗಿದ್ದ ಆಲ್ಬರ್ಟ್ ತನಗೂ ಹಾಗೂ ಪತ್ನಿ ನಡುವಿನ ವೈವಾಹಿಕ ಜೀವನ ಸರಿ ಇಲ್ಲ,ಡೈವೋರ್ಸ್ ಕೊಡುತ್ತಿದ್ದೇನೆ ನಂತರ ನಿನ್ನನ್ನು ಮದುವೆ ಆಗುತ್ತೇನೆಂದು ನಂಬಿಸಿದ್ದ.ಕಳೆದ ನಾಲ್ಕಾರು ದಿನಗಳಿಂದ ಆಲ್ಬರ್ಟ್ ಮನೆಗೆ ಬಂದಿರಲಿಲ್ಲ.ಮದುವೆ ವಿಚಾರದಲ್ಲಿ ಇಬ್ಬರ ನಡುವೆ ಗಲಾಟೆ ಆಗಿತ್ತು.ಆಲ್ಬರ್ಟ್ ಕೆಲಸ ಮಾಡುತ್ತಿದ್ದ ಕಾರ್ ಶೋರೂಂ ಗೆ ಹೋಗಿ ಪರಿಶೀಲಿಸಿದಾಗ ಬಂದಿರಲಿಲ್ಲ.ನೇರವಾಗಿ ದಟ್ಟಗಳ್ಳಿಯಲ್ಲಿದ್ದ ಆಲ್ಬರ್ಟ್ ಮನೆಗೆ ಯುವತಿ ತೆರಳಿದಾಗ ಪತ್ನಿ ಸುಭಿತ ಎದುರಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.ನಂತರ ಆಲ್ಬರ್ಟ್ ತಮ್ಮ ಗೋಕುಲ್ ಸಹ ಬಂದು ಯುವತಿಗೆ ನಿಂದಿಸಿದ್ದಾರೆ.ಇದೇ ವೇಳೆ ಬಂದ ಆಲ್ಬರ್ಟ್ ಮಹಡಿಯಿಂದ ಕೆಳಗೆ ತಳ್ಳುವಂತೆ ಗೋಕುಲ್ ಗೆ ಸೂಚಿಸಿದ್ದಾನೆ.ಆಲ್ಬರ್ಟ್ ಸಹ ಎರಡನೇ ಮಹಡಿ ತಲುಪಿ ಇಬ್ಬರೂ ಸೇರಿ ಯುವತಿಯನ್ನ ಕೆಳಗೆ ತಳ್ಳಿದ್ದಾರೆ.ಘಟನೆಯಲ್ಲಿ ತೀವ್ರ ಗಾಯಗೊಂಡ ಯುವತಿಯನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ತನ್ನನ್ನು ಕೊಲೆ ಮಾಡುವು ಉದ್ದೇಶದಿಂದ ಮಹಡಿಯಿಂದ ಕೆಳಗೆ ತಳ್ಳಿದ್ದಾರೆಂದು ಆರೋಪಿಸಿ ಯುವತಿ ಆಲ್ಬರ್ಟ್ ಸೇರಿದಂತೆ ಮೂವರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ ಹರಿಸಲು ರೈತರ ಮನವಿ

ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ…

ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ ಹರಿಸಲು ರೈತರ ಮನವಿ ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಗೇಟ್ ಸಮೀಪದ ಸರ್ವೇ ನಂ.218/1ಕ್ಕೆ ಸೇರಿದ ಸರ್ಕಾರಿ…
ಮೈಸೂರು, ಏಪ್ರಿಲ್ 13: ವಿಶ್ವಪ್ರಸಿದ್ಧ KRS Brindavan Gardens ನಲ್ಲಿ ಡಿಜಿಟಲ್ ಯುಗದಲ್ಲಿಯೂ “ಕ್ಯಾಶ್ ಮಾತ್ರ” ನಿಯಮ ಮುಂದುವರಿಯುತ್ತಿರುವುದು ಪ್ರವಾಸಿಗರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.

ಮೈಸೂರು, ಏಪ್ರಿಲ್ 13: ವಿಶ್ವಪ್ರಸಿದ್ಧ KRS Brindavan Gardens ನಲ್ಲಿ ಡಿಜಿಟಲ್…

ಮೈಸೂರು, ಏಪ್ರಿಲ್ 13: ವಿಶ್ವಪ್ರಸಿದ್ಧ KRS Brindavan Gardens ನಲ್ಲಿ ಡಿಜಿಟಲ್ ಯುಗದಲ್ಲಿಯೂ “ಕ್ಯಾಶ್ ಮಾತ್ರ” ನಿಯಮ ಮುಂದುವರಿಯುತ್ತಿರುವುದು ಪ್ರವಾಸಿಗರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಪ್ರವೇಶ ಟಿಕೆಟ್ ಪಡೆಯಲು ಬರುವವರಿಗೆ…
ಯುವಕನ ಕಿಡ್ನಾಪ್…ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್…ಸೆಕ್ಸ್ ವರ್ಕ್ ಗೆಯೂಸ್…ಕರಾಳದಂಧೆಯ ಮತ್ತೊಂದು ಮುಖ ಬಯಲು…

ಯುವಕನ ಕಿಡ್ನಾಪ್…ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್…ಸೆಕ್ಸ್ ವರ್ಕ್ ಗೆಯೂಸ್…ಕರಾಳದಂಧೆಯ ಮತ್ತೊಂದು ಮುಖ…

ಯುವಕನ ಕಿಡ್ನಾಪ್…ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್…ಸೆಕ್ಸ್ ವರ್ಕ್ ಗೆಯೂಸ್…ಕರಾಳದಂಧೆಯ ಮತ್ತೊಂದು ಮುಖ ಬಯಲು… ನಂಜನಗೂಡು,ಏ12,Tv10 ಕನ್ನಡ ಯುವಕನೊಬ್ಬನನ್ನ ಕಿಡ್ನಾಪ್ ಮಾಡಿ ಬಲವಂತವಾಗಿ ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್ ಹಾಗೂ…

Leave a Reply

Your email address will not be published. Required fields are marked *