ಅಪ್ರಾಪ್ತ ಬಾಲಕಿ ಅಪಹರಿಸಿ,ವಿವಾಹವಾಗಿ ದೈಹಿಕ ಸಂಪರ್ಕ ಬೆಳೆಸಿದ ಆರೋಪ ಸಾಬೀತು…ಅಪರಾಧಿಗೆ 24 ವರ್ಷ ಜೈಲು ಶಿಕ್ಷೆ ತೀರ್ಪು…ಚಾಮರಾಜನಗರ ನ್ಯಾಯಾಲಯ ಆದೇಶ…

ಅಪ್ರಾಪ್ತ ಬಾಲಕಿ ಅಪಹರಿಸಿ,ವಿವಾಹವಾಗಿ ದೈಹಿಕ ಸಂಪರ್ಕ ಬೆಳೆಸಿದ ಆರೋಪ ಸಾಬೀತು…ಅಪರಾಧಿಗೆ 24 ವರ್ಷ ಜೈಲು ಶಿಕ್ಷೆ ತೀರ್ಪು…ಚಾಮರಾಜನಗರ ನ್ಯಾಯಾಲಯ ಆದೇಶ…

  • Crime
  • September 27, 2025
  • No Comment
  • 148

ಅಪ್ರಾಪ್ತ ಬಾಲಕಿ ಅಪಹರಿಸಿ,ವಿವಾಹವಾಗಿ ದೈಹಿಕ ಸಂಪರ್ಕ ಬೆಳೆಸಿದ ಆರೋಪ ಸಾಬೀತು…ಅಪರಾಧಿಗೆ 24 ವರ್ಷ ಜೈಲು ಶಿಕ್ಷೆ ತೀರ್ಪು…ಚಾಮರಾಜನಗರ ನ್ಯಾಯಾಲಯ ಆದೇಶ…

ಚಾಮರಾಜನಗರ,ಸೆ27,Tv10 ಕನ್ನಡ

ಅಪ್ರಾಪ್ತ ಬಾಲಕಿಯನ್ನ ಅಪಹರಿಸಿ ಬಾಲ್ಯವಿವಾಹ ಮಾಡಿಕೊಂಡು ದೈಹಿಕ ಸಂಪರ್ಕ ಬೆಳೆಸಿದ ಆರೋಪಿಗೆ ಚಾಮರಾಜನಗರ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 24 ವರ್ಷ ಜೈಲು ಶಿಕ್ಷೆ ತೀರ್ಪು ಪ್ರಕಟಿಸಿದೆ.ಆರೋಪಿಗೆ ಸಾಥ್ ನೀಡಿದ ಸ್ನೇಹಿತನಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿದೆ.ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಎಸ್.ಜೆ.ಕೃಷ್ಣ ರವರು ತೀರ್ಪು ಪ್ರಕಟಿಸಿದ್ದಾರೆ.ಯಳಂದೂರು ತಾಲೂಕಿನ ಹೇಮಂತ್ ಕುಮಾರ್(20) ಹಾಗೂ ಅರುಣ್ ಕುಮಾರ್ ಶಿಕ್ಷೆಗೆ ಒಳಗಾದವರು.

ಈ ಸಂಭಂಧ 2021 ರಲ್ಲಿ ಅಗರಮಾಂಬಳ್ಳಿ ಠಾಣೆಯ ಅಂದಿನ ವೃತ್ತ ನಿರೀಕ್ಷಕರಾದ ಎಂ.ಎಲ್.ಶೇಖರ್ ರವರು ಆರೋಪಿ ವಿರುದ್ದ ಪೋಕ್ಸೋ ಪ್ರಕರಣ ದಾಖಲಿಸಿದ್ದರು.

16 ವರ್ಷದ ಅಪ್ರಾಪ್ತ ಬಾಲಕಿಯನ್ನ ಮೊದಲ ಆರೋಪಿಯಾದ ಹೇಮಂತ್ ಕುಮಾರ್ ಪುಸಲಾಯಿಸಿ ರೈಲಿನಲ್ಲಿ ಬೆಂಗಳೂರಿಗೆ ಕರದೊಯ್ದಿದ್ದ.ರೈಲಿನಲ್ಲೇ ವಿವಾಹ ಮಾಡಿಕೊಂಡು ಬೆಂಗಳೂರಿಗೆ ತಲುಪಿ ಎರಡನೇ ಆರೋಪಿ ಅರುಣ್ ಕುಮಾರ್ ಸ್ನೇಹಿತನ ಮನೆಯಲ್ಲಿ ಇರಿಸಿಕೊಂಡು ಬಾಲಕಿಯ ಜೊತೆ ದೈಹಿಕ ಸಂಪರ್ಕ ಬೆಳೆಸಿದ್ದ.ಈ ಸಂಬಂಧ ಹೇಮಂತ್ ಕುಮಾರ್ ವಿರುದ್ದ ಅಪಹರಣ,ಬಾಲ್ಯ ವಿವಾಹ ಹಾಗೂ ಪೋಕ್ಸೋ ಪ್ರಕರಣ ದಾಖಲಿಸಲಾಗಿತ್ತು.ಕೃತ್ಯಕ್ಕೆ ಸಹಕರಿಸಿದ ಅರುಣ್ ಕುಮಾರ್ ಮೇಲೂ ಆರೋಪ ಹೊರೆಸಲಾಗಿತ್ತು.ವಾದ ವಿವಾದ ಆಲಿಸಿದ ನ್ಯಾಯಾಧೀಶರಾದ ಎಸ್.ಜೆ.ಕೃಷ್ಣ ರವರು ಹೇಮಂತ್ ಕುಮಾರ್ ಗೆ ಮೂರು ಕೃತ್ಯಗಳಿಗೆ ಸೇರಿದಂತೆ 24 ವರ್ಷ ಜೈಲು ಶಿಕ್ಷೆ ವಿಧಿಸಿದ್ದಾರೆ.ಎರಡನೇ ಆರೋಪಿ ಅರುಣ್ ಕುಮಾರ್ ಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿದ್ದಾರೆ.
ಸರ್ಕಾರದ ಪರವಾಗಿ ಕೆ.ಯೋಗೇಶ್ ರವರು ವಾದ ಮಂಡಿಸಿದ್ದಾರೆ…

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *