ಅಪ್ರಾಪ್ತ ಬಾಲಕಿ ಅಪಹರಿಸಿ,ವಿವಾಹವಾಗಿ ದೈಹಿಕ ಸಂಪರ್ಕ ಬೆಳೆಸಿದ ಆರೋಪ ಸಾಬೀತು…ಅಪರಾಧಿಗೆ 24 ವರ್ಷ ಜೈಲು ಶಿಕ್ಷೆ ತೀರ್ಪು…ಚಾಮರಾಜನಗರ ನ್ಯಾಯಾಲಯ ಆದೇಶ…

ಅಪ್ರಾಪ್ತ ಬಾಲಕಿ ಅಪಹರಿಸಿ,ವಿವಾಹವಾಗಿ ದೈಹಿಕ ಸಂಪರ್ಕ ಬೆಳೆಸಿದ ಆರೋಪ ಸಾಬೀತು…ಅಪರಾಧಿಗೆ 24 ವರ್ಷ ಜೈಲು ಶಿಕ್ಷೆ ತೀರ್ಪು…ಚಾಮರಾಜನಗರ ನ್ಯಾಯಾಲಯ ಆದೇಶ…

  • Crime
  • September 27, 2025
  • No Comment
  • 179

ಅಪ್ರಾಪ್ತ ಬಾಲಕಿ ಅಪಹರಿಸಿ,ವಿವಾಹವಾಗಿ ದೈಹಿಕ ಸಂಪರ್ಕ ಬೆಳೆಸಿದ ಆರೋಪ ಸಾಬೀತು…ಅಪರಾಧಿಗೆ 24 ವರ್ಷ ಜೈಲು ಶಿಕ್ಷೆ ತೀರ್ಪು…ಚಾಮರಾಜನಗರ ನ್ಯಾಯಾಲಯ ಆದೇಶ…

ಚಾಮರಾಜನಗರ,ಸೆ27,Tv10 ಕನ್ನಡ

ಅಪ್ರಾಪ್ತ ಬಾಲಕಿಯನ್ನ ಅಪಹರಿಸಿ ಬಾಲ್ಯವಿವಾಹ ಮಾಡಿಕೊಂಡು ದೈಹಿಕ ಸಂಪರ್ಕ ಬೆಳೆಸಿದ ಆರೋಪಿಗೆ ಚಾಮರಾಜನಗರ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 24 ವರ್ಷ ಜೈಲು ಶಿಕ್ಷೆ ತೀರ್ಪು ಪ್ರಕಟಿಸಿದೆ.ಆರೋಪಿಗೆ ಸಾಥ್ ನೀಡಿದ ಸ್ನೇಹಿತನಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿದೆ.ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಎಸ್.ಜೆ.ಕೃಷ್ಣ ರವರು ತೀರ್ಪು ಪ್ರಕಟಿಸಿದ್ದಾರೆ.ಯಳಂದೂರು ತಾಲೂಕಿನ ಹೇಮಂತ್ ಕುಮಾರ್(20) ಹಾಗೂ ಅರುಣ್ ಕುಮಾರ್ ಶಿಕ್ಷೆಗೆ ಒಳಗಾದವರು.

ಈ ಸಂಭಂಧ 2021 ರಲ್ಲಿ ಅಗರಮಾಂಬಳ್ಳಿ ಠಾಣೆಯ ಅಂದಿನ ವೃತ್ತ ನಿರೀಕ್ಷಕರಾದ ಎಂ.ಎಲ್.ಶೇಖರ್ ರವರು ಆರೋಪಿ ವಿರುದ್ದ ಪೋಕ್ಸೋ ಪ್ರಕರಣ ದಾಖಲಿಸಿದ್ದರು.

16 ವರ್ಷದ ಅಪ್ರಾಪ್ತ ಬಾಲಕಿಯನ್ನ ಮೊದಲ ಆರೋಪಿಯಾದ ಹೇಮಂತ್ ಕುಮಾರ್ ಪುಸಲಾಯಿಸಿ ರೈಲಿನಲ್ಲಿ ಬೆಂಗಳೂರಿಗೆ ಕರದೊಯ್ದಿದ್ದ.ರೈಲಿನಲ್ಲೇ ವಿವಾಹ ಮಾಡಿಕೊಂಡು ಬೆಂಗಳೂರಿಗೆ ತಲುಪಿ ಎರಡನೇ ಆರೋಪಿ ಅರುಣ್ ಕುಮಾರ್ ಸ್ನೇಹಿತನ ಮನೆಯಲ್ಲಿ ಇರಿಸಿಕೊಂಡು ಬಾಲಕಿಯ ಜೊತೆ ದೈಹಿಕ ಸಂಪರ್ಕ ಬೆಳೆಸಿದ್ದ.ಈ ಸಂಬಂಧ ಹೇಮಂತ್ ಕುಮಾರ್ ವಿರುದ್ದ ಅಪಹರಣ,ಬಾಲ್ಯ ವಿವಾಹ ಹಾಗೂ ಪೋಕ್ಸೋ ಪ್ರಕರಣ ದಾಖಲಿಸಲಾಗಿತ್ತು.ಕೃತ್ಯಕ್ಕೆ ಸಹಕರಿಸಿದ ಅರುಣ್ ಕುಮಾರ್ ಮೇಲೂ ಆರೋಪ ಹೊರೆಸಲಾಗಿತ್ತು.ವಾದ ವಿವಾದ ಆಲಿಸಿದ ನ್ಯಾಯಾಧೀಶರಾದ ಎಸ್.ಜೆ.ಕೃಷ್ಣ ರವರು ಹೇಮಂತ್ ಕುಮಾರ್ ಗೆ ಮೂರು ಕೃತ್ಯಗಳಿಗೆ ಸೇರಿದಂತೆ 24 ವರ್ಷ ಜೈಲು ಶಿಕ್ಷೆ ವಿಧಿಸಿದ್ದಾರೆ.ಎರಡನೇ ಆರೋಪಿ ಅರುಣ್ ಕುಮಾರ್ ಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿದ್ದಾರೆ.
ಸರ್ಕಾರದ ಪರವಾಗಿ ಕೆ.ಯೋಗೇಶ್ ರವರು ವಾದ ಮಂಡಿಸಿದ್ದಾರೆ…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *