ಹಾಡುಹಗಲೇ ರೌಡಿಶೀಟರ್ ಭೀಕರ ಕೊ…ದಸರಾ ವಸ್ತು ಪ್ರದರ್ಶನ ಬಳಿ ಘಟನೆ…ಯುವಕರ ತಂಡದಿಂದ ಕೃತ್ಯ…ಕಾರ್ತಿಕ್ ಕೊ ಗೂ ಈ ಘಟನೆಗೂ ಸಂಭಂಧವಿದೆಯೇ…?

ಹಾಡುಹಗಲೇ ರೌಡಿಶೀಟರ್ ಭೀಕರ ಕೊ…ದಸರಾ ವಸ್ತು ಪ್ರದರ್ಶನ ಬಳಿ ಘಟನೆ…ಯುವಕರ ತಂಡದಿಂದ ಕೃತ್ಯ…ಕಾರ್ತಿಕ್ ಕೊ ಗೂ ಈ ಘಟನೆಗೂ ಸಂಭಂಧವಿದೆಯೇ…?

ಮೈಸೂರು,ಅ7,Tv10 ಕನ್ನಡ

ಹಾಡುಹಗಲೇ ಯುವಕರ ತಂಡವೊಂದು ರೌಡಿಶೀಟರ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಚ್ಚಿ ಹತ್ಯೆಗೈದ ಘಟನೆ ಮೈಸೂರಿನ ದಸರಾ ವಸ್ತುಪ್ರದರ್ಶನ ಬಳಿ ನಡೆದಿದೆ.ಕ್ಯಾತಮಾರನಹಳ್ಳಿ ನಿವಾಸಿ ವೆಂಕಟೇಶ್@ಮುಖಾಮುಚ್ಚಿ@ಗಿಲಿಗಿಲಿ ಎಂದು ಗುರುತಿಸಲಾಗಿದೆ.ಕಾರಿನಲ್ಲಿದ್ದ ವ್ಯಕ್ತಿಯ ಮೇಲೆ ಲಾಂಗ್ ಗಳಿಂದ ದಾಳಿ ನಡೆಸಿದ ಯುವಕರ ಗುಂಪು ಕಾರಿನಿಂದ ಹೊರಗೆ ಎಳೆದು ಹಿಗ್ಗಾ ಮುಗ್ಗ ಹಲ್ಲೆ ನಡೆಸಿ ಪರಾರಿಯಾಗಿದೆ.ತಲೆ ಕೈ ಕಾಲು ಹಾಗೂ ದೇಹದ ಭಾಗಗಳಿಗೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಎಸ್ಕೇಪ್ ಆಗಿದ್ದಾರೆ.ಇತ್ತೀಚೆಗೆ ವರುಣಾ ಗ್ರಾಮದ ಹೋಟೆಲ್ ಮುಂಭಾಗ ಕ್ಯಾತಮಾರನಹಳ್ಳಿಯ ರೌಡಿ ಶೀಟರ್ ಕಾರ್ತಿಕ್ ಎಂಬಾತನ ಕೊಲೆ ಆಗಿತ್ತು. ಕಾರ್ತಿಕ್ ಗೂ ಹಾಗೂ ಇಂದು ಕೊಲೆಯಾದ ವೆಂಕಟೇಶ್ ಗೂ ನಿಕಟ ಸಂಪರ್ಕವಿತ್ತು ಎನ್ನಲಾಗಿದೆ.ಒಂದು ಮೂಲದ ಪ್ರಕಾರ ಕಾರ್ತಿಕ್ ಕೊಲೆಗೆ ವೆಂಕಟೇಶ್ ಸಹಕಾರವಿತ್ತು ಎನ್ನಲಾಗಿದೆ.ಕಾರ್ತಿಕ್ ಕಡೆಯ ಗುಂಪು ದಾಳಿ ನಡೆಸಿ ಕೊಲೆ ಮಾಡಿದ್ದಾರೆಂದು ಹೇಳಲಾಗಿದೆ.ಕಾರ್ತಿಕ್ ಕೊಲೆಗೆ ಈ ಹತ್ಯೆ ರಿವೆಂಜ್ ಎಂದು ಹೇಳಲಾಗಿದೆ.ಘಟನೆ ನಡೆದ ಸ್ಥಳಕ್ಕೆ ಪೊಲೀಸ್ ಕಮೀಷನರ್ ಸೀಮಾ ಲಾಟ್ಕರ್ ಡಿಸಿಪಿಗಳಾದ ಬಿಂದುಮಣಿ ಹಾಗೂ ಸುಂದರರಾಜ್ ಭೇಟಿ ನೀಡಿದ್ದಾರೆ.ಸ್ಥಳಕ್ಕೆ ನಜರಬಾದ್ ಠಾಣೆ ಪೊಲೀಸರು ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದಾರೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *