ಹಾಡುಹಗಲೇ ರೌಡಿಶೀಟರ್ ಭೀಕರ ಕೊ…ದಸರಾ ವಸ್ತು ಪ್ರದರ್ಶನ ಬಳಿ ಘಟನೆ…ಯುವಕರ ತಂಡದಿಂದ ಕೃತ್ಯ…ಕಾರ್ತಿಕ್ ಕೊ ಗೂ ಈ ಘಟನೆಗೂ ಸಂಭಂಧವಿದೆಯೇ…?

ಹಾಡುಹಗಲೇ ರೌಡಿಶೀಟರ್ ಭೀಕರ ಕೊ…ದಸರಾ ವಸ್ತು ಪ್ರದರ್ಶನ ಬಳಿ ಘಟನೆ…ಯುವಕರ ತಂಡದಿಂದ ಕೃತ್ಯ…ಕಾರ್ತಿಕ್ ಕೊ ಗೂ ಈ ಘಟನೆಗೂ ಸಂಭಂಧವಿದೆಯೇ…?

ಮೈಸೂರು,ಅ7,Tv10 ಕನ್ನಡ

ಹಾಡುಹಗಲೇ ಯುವಕರ ತಂಡವೊಂದು ರೌಡಿಶೀಟರ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಚ್ಚಿ ಹತ್ಯೆಗೈದ ಘಟನೆ ಮೈಸೂರಿನ ದಸರಾ ವಸ್ತುಪ್ರದರ್ಶನ ಬಳಿ ನಡೆದಿದೆ.ಕ್ಯಾತಮಾರನಹಳ್ಳಿ ನಿವಾಸಿ ವೆಂಕಟೇಶ್@ಮುಖಾಮುಚ್ಚಿ@ಗಿಲಿಗಿಲಿ ಎಂದು ಗುರುತಿಸಲಾಗಿದೆ.ಕಾರಿನಲ್ಲಿದ್ದ ವ್ಯಕ್ತಿಯ ಮೇಲೆ ಲಾಂಗ್ ಗಳಿಂದ ದಾಳಿ ನಡೆಸಿದ ಯುವಕರ ಗುಂಪು ಕಾರಿನಿಂದ ಹೊರಗೆ ಎಳೆದು ಹಿಗ್ಗಾ ಮುಗ್ಗ ಹಲ್ಲೆ ನಡೆಸಿ ಪರಾರಿಯಾಗಿದೆ.ತಲೆ ಕೈ ಕಾಲು ಹಾಗೂ ದೇಹದ ಭಾಗಗಳಿಗೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಎಸ್ಕೇಪ್ ಆಗಿದ್ದಾರೆ.ಇತ್ತೀಚೆಗೆ ವರುಣಾ ಗ್ರಾಮದ ಹೋಟೆಲ್ ಮುಂಭಾಗ ಕ್ಯಾತಮಾರನಹಳ್ಳಿಯ ರೌಡಿ ಶೀಟರ್ ಕಾರ್ತಿಕ್ ಎಂಬಾತನ ಕೊಲೆ ಆಗಿತ್ತು. ಕಾರ್ತಿಕ್ ಗೂ ಹಾಗೂ ಇಂದು ಕೊಲೆಯಾದ ವೆಂಕಟೇಶ್ ಗೂ ನಿಕಟ ಸಂಪರ್ಕವಿತ್ತು ಎನ್ನಲಾಗಿದೆ.ಒಂದು ಮೂಲದ ಪ್ರಕಾರ ಕಾರ್ತಿಕ್ ಕೊಲೆಗೆ ವೆಂಕಟೇಶ್ ಸಹಕಾರವಿತ್ತು ಎನ್ನಲಾಗಿದೆ.ಕಾರ್ತಿಕ್ ಕಡೆಯ ಗುಂಪು ದಾಳಿ ನಡೆಸಿ ಕೊಲೆ ಮಾಡಿದ್ದಾರೆಂದು ಹೇಳಲಾಗಿದೆ.ಕಾರ್ತಿಕ್ ಕೊಲೆಗೆ ಈ ಹತ್ಯೆ ರಿವೆಂಜ್ ಎಂದು ಹೇಳಲಾಗಿದೆ.ಘಟನೆ ನಡೆದ ಸ್ಥಳಕ್ಕೆ ಪೊಲೀಸ್ ಕಮೀಷನರ್ ಸೀಮಾ ಲಾಟ್ಕರ್ ಡಿಸಿಪಿಗಳಾದ ಬಿಂದುಮಣಿ ಹಾಗೂ ಸುಂದರರಾಜ್ ಭೇಟಿ ನೀಡಿದ್ದಾರೆ.ಸ್ಥಳಕ್ಕೆ ನಜರಬಾದ್ ಠಾಣೆ ಪೊಲೀಸರು ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *