ತಾಳಿ ಕಟ್ಟಲು 25 ಲಕ್ಷ ಕ್ಯಾಶ್ ಹಾಯುಂಡೈ ಕಾರಿಗೆ ಡಿಮ್ಯಾಂಡ್…ಮುರಿದುಬಿದ್ದ ಮದುವೆ…ಮದುವೆ ಗಂಡು ಸೇರಿದಂತೆ 5 ಮಂದಿ ವಿರುದ್ದ FIR ದಾಖಲು…

ತಾಳಿ ಕಟ್ಟಲು 25 ಲಕ್ಷ ಕ್ಯಾಶ್ ಹಾಯುಂಡೈ ಕಾರಿಗೆ ಡಿಮ್ಯಾಂಡ್…ಮುರಿದುಬಿದ್ದ ಮದುವೆ…ಮದುವೆ ಗಂಡು ಸೇರಿದಂತೆ 5 ಮಂದಿ ವಿರುದ್ದ FIR ದಾಖಲು…

  • Crime
  • October 11, 2025
  • No Comment
  • 471

ಮೈಸೂರು,ಅ11,Tv10 ಕನ್ನಡ

ವೈದ್ಯೆಯನ್ನ ವರಿಸಿ ಹಸೆಮಣೆ ಏರಬೇಕಿದ್ದ ವರನ ವರದಕ್ಷಿಣೆ ದುರಾಸೆಗೆ ಮದುವೆ ಮುರಿದುಬಿದ್ದ ಘಟನೆ ಮೈಸೂರಿನಲ್ಲಿ ನಡೆದಿದೆ.ನಿಶ್ಚಿತಾರ್ಥದ ಸಮಯದಲ್ಲಿ ಸಾಕಷ್ಟು ವರದಕ್ಷಿಣೆ ಪಡೆದರೂ ಮತ್ತಷ್ಟು ವರದಕ್ಷಿಣೆಗೆ ಬೇಡಿಕೆ ಇಟ್ಟ ಹಿನ್ನಲೆ ಮದುವೆ ಮುರಿದುಬಿದ್ದಿದೆ.

ಈ ಬೆಳವಣಿಗೆಯಿಂದ ಮೈಸೂರಿನ ಗಂಗೋತ್ರಿ ಬಡಾವಣೆಯ ವಧು ಕುಟುಂಬ ಆತಂಕಕ್ಕೆ ಸಿಲುಕಿದೆ.ವರನಾಗಬೇಕಿದ್ದ ತೇಜಸ್,ಈತನ ತಾಯಿ ನಾಗರತ್ನ,ತಂದೆ ಮಹದೇವ,ಶಶಿಕುಮಾರ್ ಹಾಗೂ ಸುಮ ಎಂಬುವರ ವಿರುದ್ದ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಗಂಗೋತ್ರಿ ಬಡಾವಣೆಯ ಮಮತಾದೇವಿ ಎಂಬುವರ ಮಗಳು ಡಾ.ನೀತು ಜೊತೆ ಕೂರ್ಗಳ್ಳಿ ಗ್ರಾಮದ ತೇಜಸ್ ಜೊತೆ ಆಗಸ್ಟ್ 31 ರಂದು ನಿಶ್ಚಿತಾರ್ಥ ನೆರವೇರಿತ್ತು.ನಿಶ್ಚಿತಾರ್ಥ ವೇಳೆ ವರನಿಗೆ 150 ಗ್ರಾಂ ಚಿನ್ನ,ಒಂದು ವಜ್ರದ ಉಂಗುರ,10 ಲಕ್ಷ ಕ್ಯಾಶ್ ವರದಕ್ಷಿಣೆಯಾಗಿ ನೀಡಲಾಗಿತ್ತು.ಹುಡುಗನ ಮನೆಯವರ ಬೇಡಿಕೆಯಂತೆ ಕೋಟೆ ಹುಂಡಿ ಗ್ರಾಮದಲ್ಲಿರುವ ವಿಹಂಗಮ ಹೋಂಸ್ಟೇ ನಲ್ಲಿ ನಿಶ್ಚಿತಾರ್ಥ ಮಾಡಿಕೊಡಲಾಗಿತ್ತು.ಜೊತೆಗೆ ಸಾ.ರಾ ಕನ್ವೆನ್ಷನ್ ಹಾಲ್ ನಲ್ಲೇ ಮದುವೆ ಮಾಡಬೇಕೆಂಬ ಷರತ್ತು ಹಾಕಲಾಗಿತ್ತು.ಮಗಳ ಉಜ್ವಲ ಭವಿಷ್ಯಕ್ಕಾಗಿ ತಂದೆ 1.5 ಲಕ್ಷ ಮುಂಗಡ ನೀಡಿ ಸಾ.ರಾ.ಕನ್ವೆನ್ಷನ್ ಹಾಲ್ ಬುಕ್ ಮಾಡಿದ್ರು.ಇನ್ನೇನು ಹಸೆಮಣೆ ಏರಲು ವಧು ಸಿದ್ದತೆ ನಡೆಸುತ್ತಿರುವಾಗಲೇ ತೇಜಸ್ ಮನೆಯವರು ಬಂದು ಶಾಕ್ ಕೊಟ್ಟಿದ್ದಾರೆ.25 ಲಕ್ಷ ಹೆಚ್ಚಿನ ವರದಕ್ಷಿಣೆ ಹಾಗೂ 20 ಲಕ್ಷ ಮೌಲ್ಯದ ಹೈಯುಂಡಾಯ್ ಕಾರ್ ಗೆ ಬೇಡಿಕೆ ಇಟ್ಟಿದ್ದಾರೆ.ಸಾಕಷ್ಟು ವರದಕ್ಷಿಣೆ ಕೊಟ್ಟಿದ್ದೇವೆ ಮತ್ತೆ ಕೊಡಲು ಸಾಧ್ಯವಿಲ್ಲ ಎಂದು ನಿರಾಕರಿಸಿದಾಗ ಮದುವೆ ಕ್ಯಾನ್ಸಲ್ ಮಾಡಿದ್ದಾರೆ.ಕಾರು ಕೊಡಿಸಲು ಸಾಧ್ಯವಾಗದಿದ್ರೆ ಮದುವೆ ಯಾಕೆ ಮಾಡ್ತೀರಾ ಎಂದು ವೆಂಗ್ಯ ಮಾಡಿದ್ದಾರೆ.ಸಾಕಷ್ಟು ಮನವಿ ಮಾಡಿದ್ರೂ ಹೆಚ್ಚಿನ ವರದಕ್ಷಿಣೆ ಬೇಡಿಕೆಯ ಪಟ್ಟು ಸಡಲಿಸದೆ ಮದುವೆ ಕ್ಯಾನ್ಸಲ್ ಮಾಡಿದ್ದಾರೆ.ಈ ಬೆಳವಣಿಗೆಯಿಂದ ಬೇಸತ್ತ ಮಮತಾ ದೇವಿ ಹಾಗೂ ಡಾ.ನೀತು ರವರು ಕೈ ಹಿಡಿಯಬೇಕಿದ್ದ ತೇಜಸ್ ಹಾಗೂ ಮನೆಯವರ ವಿರುದ್ದ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *