
2 ಕೋಟಿ ವೆಚ್ಚದ ಚಕ್ ಡ್ಯಾಮ್, ತಡೆಗೋಡೆ ನಿರ್ಮಾಣ ಕಾಮಗಾರಿಗೆ ಚಾಲನೆ… ಭೂಮಿ ಪೂಜೆ ನೆರವೇರಿಸಿದ ಶಾಸಕ ಎಂ. ಆರ್ ಮಂಜುನಾಥ್…
- TV10 Kannada Exclusive
- October 17, 2025
- No Comment
- 23

2 ಕೋಟಿ ವೆಚ್ಚದ ಚಕ್ ಡ್ಯಾಮ್, ತಡೆಗೋಡೆ ನಿರ್ಮಾಣ ಕಾಮಗಾರಿಗೆ ಚಾಲನೆ… ಭೂಮಿ ಪೂಜೆ ನೆರವೇರಿಸಿದ ಶಾಸಕ ಎಂ. ಆರ್ ಮಂಜುನಾಥ್…
ಹನೂರು,ಅ17,Tv10 ಕನ್ನಡ
ತಾಲೂಕಿನ ಪ್ರಸಿದ್ಧ ಧಾರ್ಮಿಕ ಮಲೆ ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ ಮಠದ ಬಳಿ ಸಣ್ಣ ನೀರಾವರಿ ಇಲಾಖೆಯ ವತಿಯಿಂದ 2 ಕೋಟಿ ವೆಚ್ಚದಲ್ಲಿ ಚೆಕ್ ಡ್ಯಾಮ್ ಮತ್ತು ತಡೆಗೋಡೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಭೂಮಿ ಪೂಜೆ ಯನ್ನು ನೆರವೇರಿಸುವ ಮೂಲಕ
ಶಾಸಕ ಎಂ.ಆರ್.ಮಂಜುನಾಥ್ ಚಾಲನೆ ನೀಡಿದರು.
ನಂತರ ಮಾತನಾಡಿ ಗುಣಮಟ್ಟ ಕಾಮಗಾರಿಯನ್ನು ಕೈಗೊಳ್ಳುವಂತೆ ಗುತ್ತಿಗೆ ದಾರರಿಗೆ ಸಲಹೆ ನೀಡಿದರು.ಸಾಲೂರು ಮಠದ ಸುತ್ತ ನಿರ್ಮಿಸುವ ತಡೆಗೋಡೆಯನ್ನು ಅಚ್ಚುಕಟ್ಟಾಗಿ ನಿರ್ಮಿಸಿ ಭಕ್ತಾದಿಗಳಿಗೆ ಅನುಕೂಲ ಕಲ್ಪಿಸುವಂತೆ ಸೂಚಿಸಿದರು. ಈ ಪುಣ್ಯ ಸ್ಥಳದಲ್ಲಿ ಯಾವುದೇ ರೀತಿಯಾದ ಲಾಭವನ್ನು ಕಾಣದೆ ಗುಣಮಟ್ಟದ ವಸ್ತುಗಳನ್ನು ಬಳಸಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಬರುವಂತಹ ಭಕ್ತರು ತುಂಬು ಮನಸ್ಸಿನಿಂದ ಹರಸುವುದರಿಂದ ನಿಮ್ಮ ಬಾಳಲ್ಲಿ ನೆಮ್ಮದಿಯನ್ನು ತರುತ್ತದೆ. ಮುಂದಿನ ದಿನಗಳಲ್ಲಿ ಸಾಲೂರು ಮಠವು ಅತೀ ಹೆಚ್ಚು ಭಕ್ತರನ್ನು ಸೆಳೆಯುವಂತಾಗಿ ಭಕ್ತರು ನೆಮ್ಮದಿಯಿಂದ ವಾಸ್ತವ್ಯವನ್ನು ಹೂಡಿ ತಮ್ಮ ಕಷ್ಟಗಳನ್ನು ಪರಿಹರಿಸಿಕೊಳ್ಳುವಂತವರಾಗಲಿ ಎಂದು ಈ ಸಮಯದಲ್ಲಿ ತಿಳಿಸಿದರು.
ಈ ಸಂರ್ಭದಲ್ಲಿ ಶಾಂತಮಲ್ಲಿಕಾರ್ಜುನ ಸ್ವಾಮಿಗಳು, ಪ್ರಾಧಿಕಾರದ ಕಾರ್ಯದರ್ಶಿ ಎ ಈ ರಘು, ಉಪ ಕಾರ್ಯದರ್ಶಿ ಚಂದ್ರಶೇಖರ್, ಸಣ್ಣ ನೀರಾವರಿ ಇಲಾಖೆಯ ಎಇಇ ಅಭಿಲಾಷ್, ಎ.ಇ ಪ್ರತಾಪ್,ಹಾಗೂ ಮುಖಂಡರುಗಳಾದ ಮಂಜೇಶ್ ಗೌಡ, ಚಿನ್ನವೆಂಕಟ್, ಡಿ ಕೆ ರಾಜು, ಸುರೇಶ್, ನವೀನ್, ಹಾಗೂ ಇತರರು ಇದ್ದರು.