ತೆಂಗಿನಕಾಯಿ ವ್ಯಾಪಾರಿಗೆ 49.47 ಲಕ್ಷ ವಂಚನೆ…ಇಂಪೋರ್ಟ್ ಎಕ್ಸ್ಪೋರ್ಟ್ ವ್ಯಾಪಾರಿಯಿಂದ ಧೋಖಾ…

ತೆಂಗಿನಕಾಯಿ ವ್ಯಾಪಾರಿಗೆ 49.47 ಲಕ್ಷ ವಂಚನೆ…ಇಂಪೋರ್ಟ್ ಎಕ್ಸ್ಪೋರ್ಟ್ ವ್ಯಾಪಾರಿಯಿಂದ ಧೋಖಾ…

  • Crime
  • October 20, 2025
  • No Comment
  • 45

ತೆಂಗಿನಕಾಯಿ ವ್ಯಾಪಾರಿಗೆ 49.47 ಲಕ್ಷ ವಂಚನೆ…ಇಂಪೋರ್ಟ್ ಎಕ್ಸ್ಪೋರ್ಟ್ ವ್ಯಾಪಾರಿಯಿಂದ ಧೋಖಾ…

ಮೈಸೂರು,ಅ20,Tv10 ಕನ್ನಡ

ಇಂಪೋರ್ಟ್ ಅಂಡ್ ಎಕ್ಸ್ಪೋರ್ಟ್ ಉದ್ಯಮಿಯೊಬ್ಬ ಮೈಸೂರಿನ ತೆಂಗಿನಕಾರಿ ಹೋಲ್ ಸೇಲ್ ವ್ಯಾಪಾರಿಗೆ 49,47,401/- ರೂ ವಂಚಿಸಿದ್ದಾನೆ.ಈ ಸಂಬಂಧ ತೆಂಗಿನಕಾಯಿ ವ್ಯಾಪಾರಿ ಸುಬೇಕ್ ಅಗರವಾಲ್ ಎಂಬುವರು ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಚೆನ್ನೈನ ಶ್ರೀವತ್ಸನ್ ಎಂಬಾತನೇ ವಂಚಿಸಿರುವ ಉದ್ಯಮಿ.ಪುಟ್ಟಣ್ಣ ಇಂಪೋರ್ಟ್ಸ್ ಅಂಡ್ ಎಕ್ಸ್ಪೋರ್ಟ್ ಎಂಬ ಹೆಸರಲ್ಲಿ ಉದ್ಯಮ ನಡೆಸುತ್ತಿರುವ ಶ್ರೀವತ್ಸನ್ ತಮಿಳುನಾಡಿನ ನಿವಾಸಿ.ಸುಬೇದ್ ಅಗರವಾಲ್ ರವರು ಮೈಸೂರಿನ ಮಂಡಿ ಮೊಹಲ್ಲಾದ ಅಕ್ಬರ್ ರಸ್ತೆಯಲ್ಲಿ ಸುನಿಲ್ ಕುಮಾರ್ ಅಗರವಾಲ್ ಹೆಸರಲ್ಲಿ 15 ವರ್ಷಗಳಿಂದ ತೆಂಗಿನ ಕಾಯಿ ವ್ಯಾಪಾರ ಮಾಡುತ್ತಿದ್ದಾರೆ.ಮಾರ್ಚ್ ತಿಂಗಳಲ್ಲಿ ಸುಬೇದ್ ಅಗರವಾಲ್ ರನ್ನ ಶ್ರೀವತ್ಸನ್ ಸಂಪರ್ಕಿಸಿ ವ್ಯಾಪಾರ ಕುದುರಿಸಿ ಸುಮಾರು 15 ಲಕ್ಷ ಮೌಲ್ಯದ ತೆಂಗಿನಕಾಯಿ ಖರೀದಿಸಿ 10 ಲಕ್ಷ ನೀಡಿದ್ದಾರೆ.ನಂತರ ಶ್ರೀವತ್ಸನ್ ರವರ ಸೂಚನೆಯಂತೆ ವಿವಿದೆಡೆಗೆ ತೆಂಗಿನಕಾಯಿ ಲೋಡ್ ಕಳಿಸಿದ್ದಾರೆ.ತಿಂಗಳುಗಳು ಕಳೆದರೂ ತೆಂಗಿನಕಾಯಿ ಹಣ ಬಂದಿಲ್ಲ.ಶ್ರೀವತ್ಸನ್ ರವರಿಗೆ ಸೇರಿದ ನಾಲ್ಕು ಮೊಬೈಲ್ ಗಳು ಸ್ವಿಚ್ ಆಫ್ ಆಗಿದೆ.ಶ್ರೀವತ್ಸನ್ ರಿಂದ ಒಟ್ಟು 49,47,401/- ರೂ ಬಾಕಿ ಬರಬೇಕಿದೆ ಎಂದು ಸುಬೇದ್ ಅಗರವಾಲ್ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ವರುಣ ನಾಲೆ ಜಾಗ ಭೂ ಪರಿವರ್ತನೆ ಆರೋಪ ಸಾಬೀತು…ವಿಎ ಪ್ರಾಸಿಕ್ಯೂಷನ್‌ಗೆ ಜಿಲ್ಲಾಧಿಕಾರಿ ಅನುಮತಿ…Tv10 ಇಂಪ್ಯಾಕ್ಟ್

ವರುಣ ನಾಲೆ ಜಾಗ ಭೂ ಪರಿವರ್ತನೆ ಆರೋಪ ಸಾಬೀತು…ವಿಎ ಪ್ರಾಸಿಕ್ಯೂಷನ್‌ಗೆ ಜಿಲ್ಲಾಧಿಕಾರಿ…

ವರುಣ ನಾಲೆ ಜಾಗ ಭೂ ಪರಿವರ್ತನೆ ಆರೋಪ ಸಾಬೀತು…ವಿಎ ಪ್ರಾಸಿಕ್ಯೂಷನ್‌ಗೆ ಜಿಲ್ಲಾಧಿಕಾರಿ ಅನುಮತಿ…Tv10 ಇಂಪ್ಯಾಕ್ಟ್ ಶ್ರೀರಂಗಪಟ್ಟಣ,ಅ25,Tv10 ಕನ್ನಡ ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಗ್ರಾಮದ ಸರ್ವೇ ನಂ. 44ರಲ್ಲಿ 2.13…
ಸಂಸದ ಯದುವೀರ್ ತಾತ ವಿಧಿವಶ…ಸಂಸದರ ಅಧಿಕೃತ ಕಾರ್ಯಕ್ರಮ ಮುಂದೂಡಿಕೆ…

ಸಂಸದ ಯದುವೀರ್ ತಾತ ವಿಧಿವಶ…ಸಂಸದರ ಅಧಿಕೃತ ಕಾರ್ಯಕ್ರಮ ಮುಂದೂಡಿಕೆ…

ಮೈಸೂರು,ಅ23,Tv10 ಕನ್ನಡ ಸಂಸದರ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರ ತಾತ ಮದನ್ ಗೋಪಾಲ್ ರಾಜ್ ಅರಸ್ ವಿಧಿ ವಶರಾಗಿದ್ದಾರೆ.ಈ ಹಿನ್ನಲೆಯದುವೀರ್ ಅಧಿಕೃತ ಕಾರ್ಯಕ್ರಮಗಳು ತಾತ್ಕಾಲಿಕವಾಗಿ ಮುಂದೂಡಿಕೆಯಾಗಿದೆ.93 ವರ್ಷ…
ಹೃದಯಾಘಾತಕ್ಕೆ ರೈತ ಬಲಿ…ಜಮೀನು ಉಳುಮೆ ಮಾಡುವ ವೇಳೆ ಘಟನೆ…

ಹೃದಯಾಘಾತಕ್ಕೆ ರೈತ ಬಲಿ…ಜಮೀನು ಉಳುಮೆ ಮಾಡುವ ವೇಳೆ ಘಟನೆ…

ಹೃದಯಾಘಾತಕ್ಕೆ ರೈತ ಬಲಿ…ಜಮೀನು ಉಳುಮೆ ಮಾಡುವ ವೇಳೆ ಘಟನೆ… ಮಂಡ್ಯ,ಅ23,Tv10 ಕನ್ನಡ ಜಮೀನಲ್ಲಿ ಉಳುಮೆ ಮಾಡುವ ವೇಳೆ ಹೃದಯಾಘಾತದಿಂದ ರೈತ ಸಾವನ್ನಪ್ಪಿದ ಘಟನೆಮಂಡ್ಯ ತಾಲ್ಲೂಕಿನ ಎಸ್.ಐ.ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.ಗ್ರಾಮದ…

Leave a Reply

Your email address will not be published. Required fields are marked *