ರಾಷ್ಟ್ರೀಯ ಆಯುರ್ವೇದ ದಿನಾಚರಣೆ…ಆಯುರ್ವೇದ ಗಿಡಗಳನ್ನ ವಿತರಿಸಿ ಆಚರಣೆ…

ರಾಷ್ಟ್ರೀಯ ಆಯುರ್ವೇದ ದಿನಾಚರಣೆ…ಆಯುರ್ವೇದ ಗಿಡಗಳನ್ನ ವಿತರಿಸಿ ಆಚರಣೆ…

ರಾಷ್ಟ್ರೀಯ ಆಯುರ್ವೇದ ದಿನಾಚರಣೆ…ಆಯುರ್ವೇದ ಗಿಡಗಳನ್ನ ವಿತರಿಸಿ ಆಚರಣೆ…

ಮೈಸೂರು,ಅ28,Tv10 ಕನ್ನಡ

ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಅಂಗವಾಗಿ ಇಂದು ಅಪೂರ್ವ ಸ್ನೇಹಬಳಗದ ವತಿಯಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು.ಚಾಮುಂಡಿಪುರಂ ನಿವಾಸಿಗಳಿಗೆ ಹಾಗೂ ಸಾರ್ವಜನಿಕರಿಗೆ ಆಯುರ್ವೇದ ಗಿಡಗಳನ್ನ ವಿತರಿಸುವ ಮೂಲಕ ಜಾಗೃತಿ ಮೂಡಿಸಲಾಯಿತು.ಈ ಸಂಧರ್ಭದಲ್ಲಿ
ಒತ್ತಡದ ಜೀವನದಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳಲು ಯೋಗ, ಧ್ಯಾನ, ಆಯುರ್ವೇದ ಆಹಾರ ಕ್ರಮಗಳು ಪ್ರಸ್ತುತ ದಿನಗಳಲ್ಲಿ ಅಗತ್ಯವಾಗಿವೆ ಎಂದು
ಆಯುರ್ವೇದ ಹಿರಿಯ ವೈದ್ಯರಾದ ಡಾ. ಚಂದ್ರಶೇಖರ್ ಹೇಳಿದರು.ಆಯುರ್ವೇದ ವೈದ್ಯ ಪದ್ಧತಿ ಕಾಯಿಲೆ ಗುಣಪಡಿಸುವ ಜೊತೆಗೆ ಆರೋಗ್ಯಯುತ ಜೀವನ ನಡೆಸುವ ಕ್ರಮವನ್ನು ಕಲಿಸುತ್ತದೆ’ ಎಂದರು.
ಆಯುರ್ವೇದದ ಬಗ್ಗೆ ಜನರಿಗೆ ತಿಳಿವಳಿಕೆ ಬರಲು ಹೆಚ್ಚಿನ ಪ್ರಚಾರದ ಅಗತ್ಯ ಇದೆ’ ಎಂದರು. ಮಾಜಿ ಮಹಾಪೌರರಾದ ಸಂದೇಶ ಸ್ವಾಮಿ ರವರು ಸಾರ್ವಜನಿಕರಿಗೆ
ಆಯುರ್ವೇದ ಸಸ್ಯಗಳಾದ ಅಮೃತ ಬಳ್ಳಿ, ಕೃಷ್ಣ ತುಳಸಿ, ರಾಮ ತುಳಸಿ, ಬೆಟ್ಟದ ನೆಲ್ಲಿಕಾಯಿ, ದೊಡ್ಡಿಪತ್ರೆ, ಅಗಸೆ ಗಿಡ, ನೇರಳೆ ಗಿಡ, ಬೇವಿನ ಗಿಡ, ಅರಿಶಿನ ಗಿಡ ಸೇರಿದಂತೆ ಇನ್ನಿತರ ಗಿಡ ಗಳನ್ನು ವಿತರಣೆ ಮಾಡಿದರು.

ಕಾರ್ಯಕ್ರಮದಲ್ಲಿ ಮೈಸೂರು ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೇಬಲ್ ಮಹೇಶ್, ಮಾಜಿನಗರ ಪಾಲಿಕೆ ಸದಸ್ಯರಾದ ಜಗದೀಶ್, ಅಪೂರ್ವ ಸ್ನೇಹ ಬಳಗದ ಅಧ್ಯಕ್ಷರಾದ ಅಪೂರ್ವ ಸುರೇಶ್, ಅಗಸ್ತ್ಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಖಜಾಂಜಿ ನಾಗರಾಜ್, ಉದ್ಯಮಿ ಜಯರಾಮ್, ಕೆ ಎಸ್ ವಿಶ್ವನಾಥ್, ದೂರ ರಾಜಣ್ಣ, ಸುಚಿಂದ್ರ ಆನಂದ, ಪುರುಷೋತ್ತಮ್, ಜತ್ತಿ ಪ್ರಸಾದ್, ಆದರ್ಶ್, ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *