SLOUCH HAT ಗೆ ಬೈ ಬೈ…PEAK CAP ಗೆ ಹಾಯ್ ಹಾಯ್…ಇಂದಿನಿಂದ ಪೊಲೀಸ್ ಸಿಬ್ಬಂದಿಗಳಿಗೆ ಹೊಸ ಕ್ಯಾಪ್…ಸಿಎಂ,ಡಿಸಿಎಂ ರಿಂದ ಲಾಂಚ್…

SLOUCH HAT ಗೆ ಬೈ ಬೈ…PEAK CAP ಗೆ ಹಾಯ್ ಹಾಯ್…ಇಂದಿನಿಂದ ಪೊಲೀಸ್ ಸಿಬ್ಬಂದಿಗಳಿಗೆ ಹೊಸ ಕ್ಯಾಪ್…ಸಿಎಂ,ಡಿಸಿಎಂ ರಿಂದ ಲಾಂಚ್…

ಬೆಂಗಳೂರು,ಅ28,Tv10 ಕನ್ನಡ

ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೇದೆ ಹಾಗೂ ಮುಖ್ಯಪೇದೆಗಳಿಗೆ ಹೊಸ ಕ್ಯಾಪ್ ಧರಿಸುವ ವ್ಯವಸ್ಥೆ ಜಾರಿಗೆ ತರಲಾಗಿದೆ.ನೂತನವಾಗಿ ಆಕರ್ಷಕವಾಗಿ ಸಿದ್ದಪಡಿಸಲಾದ PEAK CAP ಗೆ ಬೆಂಗಳೂರಿನ ವಿಧಾನಸೌಧದ ಬಾಂಕೆಟ್ ಹಾಲ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ PEAK CAP ವ್ಯವಸ್ಥೆ ಲಾಂಚ್ ಮಾಡಿದ್ದಾರೆ.ಬ್ರಿಟಿಷರ ಕಾಲದ SLOUCH HAT ಮರೆಯಾಗಲಿದ್ದು ಪೊಲೀಸ್ ಸಿಬ್ಬಂದಿಗಳ ಶಿರದ ಮೇಲೆ PEAK CAP ರಾರಾಜಿಸಲಿದೆ.ರಾಜ್ಯದ ಎಲ್ಲಾ ಪೇದೆ ಹಾಗೂ ಮುಖ್ಯಪೇದೆಗಳಿಗೆ PEAK CAP ವಿತರಿಸಲಾಗುತ್ತದೆ.ಇಂದು ಸಾಂಕೇತಿಕವಾಗಿ 600 ಸಿಬ್ಬಂದಿಗಳಿಗೆ PEAK CAP ವಿತರಿಸಲಾಗಿದೆ.ಇನ್ನು ಕೆಲವೇ ದಿನಗಳಲ್ಲಿ ಎಲ್ಲಾ ಸಿಬ್ಬಂದಿಗಳ ಶಿರದ ಮೇಲೆ PEAK CAP ಕಾಣಿಸಿಕೊಳ್ಳಲಿದೆ.ಇದುವರೆಗೆ ಪೇದೆಗಳಿಗೆ ನೀಡಿದ್ದ SLOUCH HAT ನಲ್ಲಿ ವೆತ್ಯಾಸಗಳೂ ಸಹ ಕಂಡು ಬರುತ್ತಿತ್ತು.ಇನ್ನುಮುಂದೆ ಅಂತಹ ವೆತ್ಯಾಸಗಳು ಈ ಕ್ಯಾಪ್ ನಲ್ಲಿ ಇರುವುದಿಲ್ಲ.KSRP,CAR ಹಾಗೂ DAR ನಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳೂ ಸಹ PEAK CAP ಧರಿಸಿ ಕರ್ತವ್ಯ ನಿರ್ವಹಿಸಬೇಕಿದೆ.ಇಂದಿನ ಕಾರ್ಯಕ್ರಮದಲ್ಲಿ ಗೃಹ ಸಚಿವ ಪರಮೇಶ್ವರ್ ಹಾಗೂ ಇಲಾಖೆಯ ಎಲ್ಲಾ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.ಪ್ರತಿ ಜಿಲ್ಲೆಯಿಂದ ಮೂವರು ಸಿಬ್ಬಂದಿಗಳನ್ನ ಗುರುತಿಸಿ ಒಟ್ಟು 600 ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿತ್ತು.ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲಾ ಸಿಬ್ಬಂದಿಗಳು ಏಕ ಕಾಲಕ್ಕೆ PEAK CAP ಧರಿಸುವ ಮೂಲಕ ಲಾಂಚಿಂಗ್ ಗೆ ಮೆರುಗು ನೀಡಿದರು…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *