SLOUCH HAT ಗೆ ಬೈ ಬೈ…PEAK CAP ಗೆ ಹಾಯ್ ಹಾಯ್…ಇಂದಿನಿಂದ ಪೊಲೀಸ್ ಸಿಬ್ಬಂದಿಗಳಿಗೆ ಹೊಸ ಕ್ಯಾಪ್…ಸಿಎಂ,ಡಿಸಿಎಂ ರಿಂದ ಲಾಂಚ್…

SLOUCH HAT ಗೆ ಬೈ ಬೈ…PEAK CAP ಗೆ ಹಾಯ್ ಹಾಯ್…ಇಂದಿನಿಂದ ಪೊಲೀಸ್ ಸಿಬ್ಬಂದಿಗಳಿಗೆ ಹೊಸ ಕ್ಯಾಪ್…ಸಿಎಂ,ಡಿಸಿಎಂ ರಿಂದ ಲಾಂಚ್…

ಬೆಂಗಳೂರು,ಅ28,Tv10 ಕನ್ನಡ

ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೇದೆ ಹಾಗೂ ಮುಖ್ಯಪೇದೆಗಳಿಗೆ ಹೊಸ ಕ್ಯಾಪ್ ಧರಿಸುವ ವ್ಯವಸ್ಥೆ ಜಾರಿಗೆ ತರಲಾಗಿದೆ.ನೂತನವಾಗಿ ಆಕರ್ಷಕವಾಗಿ ಸಿದ್ದಪಡಿಸಲಾದ PEAK CAP ಗೆ ಬೆಂಗಳೂರಿನ ವಿಧಾನಸೌಧದ ಬಾಂಕೆಟ್ ಹಾಲ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ PEAK CAP ವ್ಯವಸ್ಥೆ ಲಾಂಚ್ ಮಾಡಿದ್ದಾರೆ.ಬ್ರಿಟಿಷರ ಕಾಲದ SLOUCH HAT ಮರೆಯಾಗಲಿದ್ದು ಪೊಲೀಸ್ ಸಿಬ್ಬಂದಿಗಳ ಶಿರದ ಮೇಲೆ PEAK CAP ರಾರಾಜಿಸಲಿದೆ.ರಾಜ್ಯದ ಎಲ್ಲಾ ಪೇದೆ ಹಾಗೂ ಮುಖ್ಯಪೇದೆಗಳಿಗೆ PEAK CAP ವಿತರಿಸಲಾಗುತ್ತದೆ.ಇಂದು ಸಾಂಕೇತಿಕವಾಗಿ 600 ಸಿಬ್ಬಂದಿಗಳಿಗೆ PEAK CAP ವಿತರಿಸಲಾಗಿದೆ.ಇನ್ನು ಕೆಲವೇ ದಿನಗಳಲ್ಲಿ ಎಲ್ಲಾ ಸಿಬ್ಬಂದಿಗಳ ಶಿರದ ಮೇಲೆ PEAK CAP ಕಾಣಿಸಿಕೊಳ್ಳಲಿದೆ.ಇದುವರೆಗೆ ಪೇದೆಗಳಿಗೆ ನೀಡಿದ್ದ SLOUCH HAT ನಲ್ಲಿ ವೆತ್ಯಾಸಗಳೂ ಸಹ ಕಂಡು ಬರುತ್ತಿತ್ತು.ಇನ್ನುಮುಂದೆ ಅಂತಹ ವೆತ್ಯಾಸಗಳು ಈ ಕ್ಯಾಪ್ ನಲ್ಲಿ ಇರುವುದಿಲ್ಲ.KSRP,CAR ಹಾಗೂ DAR ನಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳೂ ಸಹ PEAK CAP ಧರಿಸಿ ಕರ್ತವ್ಯ ನಿರ್ವಹಿಸಬೇಕಿದೆ.ಇಂದಿನ ಕಾರ್ಯಕ್ರಮದಲ್ಲಿ ಗೃಹ ಸಚಿವ ಪರಮೇಶ್ವರ್ ಹಾಗೂ ಇಲಾಖೆಯ ಎಲ್ಲಾ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.ಪ್ರತಿ ಜಿಲ್ಲೆಯಿಂದ ಮೂವರು ಸಿಬ್ಬಂದಿಗಳನ್ನ ಗುರುತಿಸಿ ಒಟ್ಟು 600 ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿತ್ತು.ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲಾ ಸಿಬ್ಬಂದಿಗಳು ಏಕ ಕಾಲಕ್ಕೆ PEAK CAP ಧರಿಸುವ ಮೂಲಕ ಲಾಂಚಿಂಗ್ ಗೆ ಮೆರುಗು ನೀಡಿದರು…

Spread the love

Related post

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ… ಮೈಸೂರು,ಮೇ20,Tv10 ಕನ್ನಡ ಸಾಲದ ಹಣ ವಾಪಸ್ ಕೇಳಲು ಹೋದ…
ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ… ಮಂಡ್ಯ,ಮೇ20,Tv10 ಕನ್ನಡ ಮಂಡ್ಯ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ನಡೆದಿದೆ.ಮಾರಕಾಸ್ತ್ರಗಳಿಂದ ಯುವಕನನ್ನ ದುಷ್ಕರ್ಮಿಗಳು ಕೊಚ್ಚಿ ಹಾಕಿದ್ದಾರೆ.ಮಂಡ್ಯ ಜಿಲ್ಲೆ ಮದ್ದೂರು…
ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ… ಶ್ರೀರಂಗಪಟ್ಟಣ,ಮೇ19,Tv10 ಕನ್ನಡ ಅಕ್ರಮ ಗಣಿಗಾರಿಕೆ ವಿರುದ್ಧ ಮಂಡ್ಯ ಜಿಲ್ಲಾಡಳಿತದ ಸಮರ ಸಾರಿದೆ.ನಿಷೇಧದ ನಡುವೆಯೂ ಎಗ್ಗಿಲ್ಲದೆ ನಡೆಯುತ್ತಿದ್ದ ಅಕ್ರಮ…

Leave a Reply

Your email address will not be published. Required fields are marked *