ತಿರುಪತಿ ಲಡ್ಡುಗೆನಕಲಿ ತುಪ್ಪ ಬಳಕೆ ಧೃಢ…ಕಠಿಣ ಶಿಕ್ಷೆಗೆ ಆಗ್ರಹ…

ತಿರುಪತಿ ಲಡ್ಡುಗೆನಕಲಿ ತುಪ್ಪ ಬಳಕೆ ಧೃಢ…ಕಠಿಣ ಶಿಕ್ಷೆಗೆ ಆಗ್ರಹ…

ಮೈಸೂರು,ನ11,Tv10 ಕನ್ನಡ

ತಿರುಪತಿ ಲಡ್ಡು ಪ್ರಸಾದ ತಯಾರಿಕೆಯಲ್ಲಿ ನಕಲಿ ತುಪ್ಪ ಬಳಸಿರುವುದು ಎಸ್‌ಐಟಿ ತನಿಖೆಯಲ್ಲಿ ದೃಢಪಟ್ಟಿದ್ದು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಕೆಎಂಪಿ ಕೆ ಚಾರಿಟಬಲ್ ಟ್ರಸ್ಟ್ ಪದಾಧಿಕಾರಿಗಳು ಜಿಲ್ಕಾಧಿಕಾರಿಗಳಿಗೆ ಮನವಿ ಪತ್ರ ನೀಡಿದರು. ತಹಸಿಲ್ದಾರ್ ಶಿವಪ್ರಸಾದ್ ರವರಿಗೆ ಮನವಿ ಪತ್ರ ನೀಡಿದರು.
ನಂತರ ಮಾತನಾಡಿದ ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್
‘ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿರುವ ಗಂಭೀರ ಪ್ರಕರಣ ಇದಾಗಿದೆ. ಆಂಧ್ರಪ್ರದೇಶದ ಹಿಂದಿನ ಮುಖ್ಯಮಂತ್ರಿ ಜಗನ್ ಮೋಹನ ರೆಡ್ಡಿ ನೇತೃತ್ವದ ಸರ್ಕಾರದ ಆಡಳಿತಾವಧಿಯಲ್ಲಿ ನಡೆದ ಕೃತ್ಯವಿದು. ಅಕ್ರಮಕ್ಕೆ ಕಾರಣರಾದವರ ವಿರುದ್ಧ ಸಿಬಿಐ ಮತ್ತು ಆಂಧ್ರಪ್ರದೇಶ ಪೊಲೀಸರ ತನಿಖೆಯ ಆಧಾರದ ಮೇಲೆ ಸೂಕ್ತ ಶಿಕ್ಷೆ ಆಗಬೇಕು’
‘ಲಡ್ಡುಗಳಲ್ಲಿ ಕೊಬ್ಬಿನಾಂಶ, ಮಾಂಸದ ಅಂಶವಿರುವ ಕಳಪೆ ಪದಾರ್ಥ ಗಳನ್ನು ಬಳಸಲಾಗಿದೆ ಎಂಬುದೂ ತನಿಖೆಯಲ್ಲಿ ದೃಢವಾಗಿದೆ. ಉತ್ತರಾಖಂಡ ಮೂಲದ ಬೋಲ್ ಬಾಬಾ ಎಂಬ ಸಂಸ್ಥೆಯಿಂದ ಕಳಪೆ ತುಪ್ಪ ತರಿಸಿಕೊಂಡು ಅವ್ಯವಹಾರ ನಡೆಸಲಾಗಿದೆ. ಪ್ರಸಾದದ ಗುಣಮಟ್ಟ ಕಾಪಾಡಲು ನಂದಿನಿ (ಕೆಎಂಎಫ್) ತುಪ್ಪವನ್ನೇ ಬಳಸಬೇಕು’ ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮುಖಂಡರುಗಳಾದ ಪ್ರಮೋದ್ ಗೌಡ, ಸಂದೇಶ್, ಗುರುರಾಜ್ ಶೆಟ್ಟಿ, ಎಸ್ ಎನ್ ರಾಜೇಶ್, ಪ್ರಶಾಂತ್, ಅಮಿತ್, ಸಚಿನ್ ನಾಯಕ್ ಹಾಗೂ ಇನ್ನಿತರರು ಹಾಜರಿದ್ದರು…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *