ಸೆಂಟರಿಂಗ್ ಸೀಲಿಂಗ್ ಕುಸಿದು ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ…ಕಟ್ಟಡ ಮಾಲೀಕ ಸೇರಿದಂತೆ ನಾಲ್ವರ ವಿರುದ್ದ FIR

ಸೆಂಟರಿಂಗ್ ಸೀಲಿಂಗ್ ಕುಸಿದು ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ…ಕಟ್ಟಡ ಮಾಲೀಕ ಸೇರಿದಂತೆ ನಾಲ್ವರ ವಿರುದ್ದ FIR

ಮೈಸೂರು,ನ13,Tv10 ಕನ್ನಡ

ಸೆಂಟರಿಂಗ್ ಸೀಲಿಂಗ್ ಕುಸಿದು ಕೂಲಿಕಾರ್ಮಿಕ ಗಂಭೀರ ಗಾಯಗೊಂಡ ಘಟನೆ ಮೈಸೂರಿನ ಸಿದ್ದಾರ್ಥ ಬಡಾವಣೆಯಲ್ಲಿ ನಡೆದಿದೆ.ಸುರಕ್ಷತಾ ಕ್ರಮ ಅನುಸರಿಸದ ಕಟ್ಟಡ ಮಾಲೀಕ ಸೇರಿದಂತೆ ನಾಲ್ವರ ವಿರುದ್ದ ನಜರಬಾದ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.ಟಿ.ನರಸೀಪುರದ ನಿವಾಸಿ ಗಮಹದೇವಸ್ವಾಮಿ ಗಾಯಗೊಂಡ ಕೂಲಿ ಕಾರ್ಮಿಕ.ಸಿದ್ದಾರ್ಥ ಬಡಾವಣೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡದಲ್ಲಿ ಮಹದೇವಸ್ವಾಮಿ ಕೂಲಿ ಕೆಲಸ ಮಾಡುತ್ತಿದ್ದರು.ತಲೆ ಮೇಲೆ ಇಟ್ಟಿಗೆಗಳ ಬಾಂಡ್ಲಿ ಹೊತ್ತು 2 ನೇ ಮಹಡಿಯಿಂದ 3 ನೇ ಮಹಡಿಗೆ ತೆರಳುತ್ತಿದ್ದಾಗ ಸೆಂಟರಿಂಗ್ ಸೀಲಿಂಗ್ ಕುಸಿದು ಮಹದೇವಸ್ವಾಮಿ ತಲೆ ಮೇಲೆ ಬಿದ್ದಿದೆ.ತೀವ್ರ ಗಾಯಗೊಂಡ ಮಹದೇವಸ್ವಾಮಿಯನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಕಟ್ಟಡದ ಮಾಲೀಕ,ಮೇಸ್ತ್ರಿ,ಇಂಜಿನಿಯರ್ ಹಾಗೂ ಕಂಟ್ರಾಕ್ಟರ್ ವಿರುದ್ದ ಮಹದೇವಸ್ವಾಮಿ ತಂದೆ ಗುರುಸ್ವಾಮಿ ನಜರಬಾದ್ ಪೊಲೀಸ್ ಠಾಣೆಯಲ್ಲಿ ಸುರಕ್ಷತಾ ಕ್ರಮ ಅನುಸರಿಸದೆ ಕೆಲಸ ಮಾಡಿಸಿದ್ದಾರೆಂದು ಆರೋಪಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *