ಅಕ್ರಮ ಸಂಬಂಧ ಬೆಳೆಸುವಂತೆ ಗೃಹಿಣಿಗೆ ಟಾರ್ಚರ್…ಕಾಮುಕನಿಗೆ ಗೂಸಾ…FIR

ಅಕ್ರಮ ಸಂಬಂಧ ಬೆಳೆಸುವಂತೆ ಗೃಹಿಣಿಗೆ ಟಾರ್ಚರ್…ಕಾಮುಕನಿಗೆ ಗೂಸಾ…FIR

  • Crime
  • November 29, 2025
  • No Comment
  • 178

ಅಕ್ರಮ ಸಂಬಂಧ ಬೆಳೆಸುವಂತೆ ಗೃಹಿಣಿಗೆ ಟಾರ್ಚರ್…ಕಾಮುಕನಿಗೆ ಗೂಸಾ…FIR

ಮೈಸೂರು,ನ28,Tv10 ಕನ್ನಡ

ಅಕ್ರಮ ಸಂಬಂಧ ಬೆಳೆಸುವಂತೆ ಗೃಹಿಣಿ ಹಿಂದೆ ಬಿದ್ದ ಕಾಮುಕನಿಗೆ ಧರ್ಮದೇಟು ಬಿದ್ದಿದೆ.ಕಾಮುಕನ ಕಿರುಕುಳಕ್ಕೆ ಬೇಸತ್ತ ಗೃಹಿಣಿ ಮೈಸೂರು ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಹುಣಸೂರು ತಾಲೂಕು ಬಿಳಿಕೆರೆ ಹೋಬಳಿಯ ಚಿಕ್ಕಬೆಂಚನಹಳ್ಳಿ ನಿವಾಸಿ ಮಹೇಶ್ ವಿರುದ್ದ ಪ್ರಕರಣ ದಾಖಲಾಗಿದೆ.

ಗೃಹಿಣಿ ಮೈಸೂರಿನ ಹೂಟಗಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾರೆ.ಪಕ್ಕದ ಮನೆಯ ನಿವಾಸಿ ಮಹೇಶ್ ಸಹ ಮೈಸೂರಿನಲ್ಲೇ ಕೆಲಸ ಮಾಡುತ್ತಿದ್ದಾನೆ.ಪ್ರತಿದಿನ ಗೃಹಿಣಿಯ ಹಿಂದೆ ಬೀಳುತ್ತಿದ್ದ ಮಹೇಶ ತನ್ನ ಜೊತೆ ಸಂಬಂಧ ಬೆಳೆಸುವಂತೆ ಒತ್ತಾಯಿಸಿದ್ದಾನೆ.ಲೆಲಸಕ್ಕೆ ಹೋಗುವ ಸ್ಥಳಕ್ಕೆ ಬಂದು ಟಾರ್ಚರ್ ನೀಡಿದ್ದಾನೆ.ಮಜಾ ಮಾಡೋಣ..ಸುತ್ತಾಡೋಣ…ಸಿನಿಮಾಗೆ ಹೋಗೋಣ…ಎಂಜಾಯ್ ಮಾಡೋಣ…ಹಣ ಕೊಡ್ತೀನಿ ಎಂದು ಮಾನಸಿಕವಾಗಿ ಕಿರುಕುಳ ನೀಡಿದ್ದಾನೆ.ತನ್ನ ಜೊತೆ ಬರದೆ ಇದ್ದರೆ ಫೋಟೋ ಹಾಗೂ ವಿಡಿಯೋಗಳನ್ನ ಮಾರ್ಫ್ ಮಾಡಿ ಇಂಟರ್ನೆಟ್ ನಲ್ಲಿ ಹಾಕಿ ಮಾನತೆಗೆದು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ.ಈ ಸಂಬಂಧ ಗೃಹಿಣಿ ತನ್ನ ಪತಿಯ ಅಣ್ಣನಿಗೆ ತಿಳಿಸಿದ್ದಾರೆ. ಮಹೇಶ್ ನೀಡುತ್ತಿದ್ದ ಕಿರುಕುಳವನ್ನ ಭಾವ ಕಣ್ಣಾರೆ ಕಂಡಾಗ ಪರಾರಿಯಾಗಿದ್ದಾನೆ.ಮಹೇಶ್ ನ ಚೇಸ್ ಮಾಡಿದ ಭಾವ ಬಿಳಿಕೆರೆ ಬಳಿ ಹಿಡಿದು ಹಿಗ್ಗಮುಗ್ಗ ಥಳಿಸಿದ್ದಾರೆ.ಮಹೇಶ್ ಆಸ್ಪತ್ರೆ ಸೇರಿಕೊಂಡಿದ್ದಾನೆ.ಹಲ್ಲೆ ನಡೆಸಿದ ಹಿನ್ನಲೆ ಗೃಹಿಣಿಯ ಭಾವನ ಮೇಲೆ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಈ ಹಿನ್ನಲೆ ಗೃಹಿಣಿ ಬಿಳಿಕೆರೆ ಠಾಣೆಗೆ ತೆರಳಿ ತನಗೆ ನೀಡುತ್ತಿದ್ದ ಕಿರುಕುಳದ ಬಗ್ಗೆ ಪೊಲೀಸರಿಗೆ ತಿಳಿಸಿದ್ದಾರೆ.ಹೂಟಗಳ್ಳಿಯಲ್ಲಿ ಕಿರುಕುಳ ನೀಡಿದ ಹಿನ್ನಲೆ ವಿಜಯನಗರ ಪೊಲೀಸ್ ಠಾಣೆಯಲ್ಲಿ ಮಹೇಶ್ ವಿರುದ್ದ ಪ್ರಕರಣ ದಾಖಲಾಗಿದೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *