ಅಕ್ರಮ ಸಂಬಂಧ ಬೆಳೆಸುವಂತೆ ಗೃಹಿಣಿಗೆ ಟಾರ್ಚರ್…ಕಾಮುಕನಿಗೆ ಗೂಸಾ…FIR

ಅಕ್ರಮ ಸಂಬಂಧ ಬೆಳೆಸುವಂತೆ ಗೃಹಿಣಿಗೆ ಟಾರ್ಚರ್…ಕಾಮುಕನಿಗೆ ಗೂಸಾ…FIR

  • Crime
  • November 29, 2025
  • No Comment
  • 181

ಅಕ್ರಮ ಸಂಬಂಧ ಬೆಳೆಸುವಂತೆ ಗೃಹಿಣಿಗೆ ಟಾರ್ಚರ್…ಕಾಮುಕನಿಗೆ ಗೂಸಾ…FIR

ಮೈಸೂರು,ನ28,Tv10 ಕನ್ನಡ

ಅಕ್ರಮ ಸಂಬಂಧ ಬೆಳೆಸುವಂತೆ ಗೃಹಿಣಿ ಹಿಂದೆ ಬಿದ್ದ ಕಾಮುಕನಿಗೆ ಧರ್ಮದೇಟು ಬಿದ್ದಿದೆ.ಕಾಮುಕನ ಕಿರುಕುಳಕ್ಕೆ ಬೇಸತ್ತ ಗೃಹಿಣಿ ಮೈಸೂರು ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಹುಣಸೂರು ತಾಲೂಕು ಬಿಳಿಕೆರೆ ಹೋಬಳಿಯ ಚಿಕ್ಕಬೆಂಚನಹಳ್ಳಿ ನಿವಾಸಿ ಮಹೇಶ್ ವಿರುದ್ದ ಪ್ರಕರಣ ದಾಖಲಾಗಿದೆ.

ಗೃಹಿಣಿ ಮೈಸೂರಿನ ಹೂಟಗಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾರೆ.ಪಕ್ಕದ ಮನೆಯ ನಿವಾಸಿ ಮಹೇಶ್ ಸಹ ಮೈಸೂರಿನಲ್ಲೇ ಕೆಲಸ ಮಾಡುತ್ತಿದ್ದಾನೆ.ಪ್ರತಿದಿನ ಗೃಹಿಣಿಯ ಹಿಂದೆ ಬೀಳುತ್ತಿದ್ದ ಮಹೇಶ ತನ್ನ ಜೊತೆ ಸಂಬಂಧ ಬೆಳೆಸುವಂತೆ ಒತ್ತಾಯಿಸಿದ್ದಾನೆ.ಲೆಲಸಕ್ಕೆ ಹೋಗುವ ಸ್ಥಳಕ್ಕೆ ಬಂದು ಟಾರ್ಚರ್ ನೀಡಿದ್ದಾನೆ.ಮಜಾ ಮಾಡೋಣ..ಸುತ್ತಾಡೋಣ…ಸಿನಿಮಾಗೆ ಹೋಗೋಣ…ಎಂಜಾಯ್ ಮಾಡೋಣ…ಹಣ ಕೊಡ್ತೀನಿ ಎಂದು ಮಾನಸಿಕವಾಗಿ ಕಿರುಕುಳ ನೀಡಿದ್ದಾನೆ.ತನ್ನ ಜೊತೆ ಬರದೆ ಇದ್ದರೆ ಫೋಟೋ ಹಾಗೂ ವಿಡಿಯೋಗಳನ್ನ ಮಾರ್ಫ್ ಮಾಡಿ ಇಂಟರ್ನೆಟ್ ನಲ್ಲಿ ಹಾಕಿ ಮಾನತೆಗೆದು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ.ಈ ಸಂಬಂಧ ಗೃಹಿಣಿ ತನ್ನ ಪತಿಯ ಅಣ್ಣನಿಗೆ ತಿಳಿಸಿದ್ದಾರೆ. ಮಹೇಶ್ ನೀಡುತ್ತಿದ್ದ ಕಿರುಕುಳವನ್ನ ಭಾವ ಕಣ್ಣಾರೆ ಕಂಡಾಗ ಪರಾರಿಯಾಗಿದ್ದಾನೆ.ಮಹೇಶ್ ನ ಚೇಸ್ ಮಾಡಿದ ಭಾವ ಬಿಳಿಕೆರೆ ಬಳಿ ಹಿಡಿದು ಹಿಗ್ಗಮುಗ್ಗ ಥಳಿಸಿದ್ದಾರೆ.ಮಹೇಶ್ ಆಸ್ಪತ್ರೆ ಸೇರಿಕೊಂಡಿದ್ದಾನೆ.ಹಲ್ಲೆ ನಡೆಸಿದ ಹಿನ್ನಲೆ ಗೃಹಿಣಿಯ ಭಾವನ ಮೇಲೆ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಈ ಹಿನ್ನಲೆ ಗೃಹಿಣಿ ಬಿಳಿಕೆರೆ ಠಾಣೆಗೆ ತೆರಳಿ ತನಗೆ ನೀಡುತ್ತಿದ್ದ ಕಿರುಕುಳದ ಬಗ್ಗೆ ಪೊಲೀಸರಿಗೆ ತಿಳಿಸಿದ್ದಾರೆ.ಹೂಟಗಳ್ಳಿಯಲ್ಲಿ ಕಿರುಕುಳ ನೀಡಿದ ಹಿನ್ನಲೆ ವಿಜಯನಗರ ಪೊಲೀಸ್ ಠಾಣೆಯಲ್ಲಿ ಮಹೇಶ್ ವಿರುದ್ದ ಪ್ರಕರಣ ದಾಖಲಾಗಿದೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *