ಅಕ್ರಮ ಸಂಬಂಧ ಬೆಳೆಸುವಂತೆ ಗೃಹಿಣಿಗೆ ಟಾರ್ಚರ್…ಕಾಮುಕನಿಗೆ ಗೂಸಾ…FIR

ಅಕ್ರಮ ಸಂಬಂಧ ಬೆಳೆಸುವಂತೆ ಗೃಹಿಣಿಗೆ ಟಾರ್ಚರ್…ಕಾಮುಕನಿಗೆ ಗೂಸಾ…FIR

  • Crime
  • November 29, 2025
  • No Comment
  • 140

ಅಕ್ರಮ ಸಂಬಂಧ ಬೆಳೆಸುವಂತೆ ಗೃಹಿಣಿಗೆ ಟಾರ್ಚರ್…ಕಾಮುಕನಿಗೆ ಗೂಸಾ…FIR

ಮೈಸೂರು,ನ28,Tv10 ಕನ್ನಡ

ಅಕ್ರಮ ಸಂಬಂಧ ಬೆಳೆಸುವಂತೆ ಗೃಹಿಣಿ ಹಿಂದೆ ಬಿದ್ದ ಕಾಮುಕನಿಗೆ ಧರ್ಮದೇಟು ಬಿದ್ದಿದೆ.ಕಾಮುಕನ ಕಿರುಕುಳಕ್ಕೆ ಬೇಸತ್ತ ಗೃಹಿಣಿ ಮೈಸೂರು ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಹುಣಸೂರು ತಾಲೂಕು ಬಿಳಿಕೆರೆ ಹೋಬಳಿಯ ಚಿಕ್ಕಬೆಂಚನಹಳ್ಳಿ ನಿವಾಸಿ ಮಹೇಶ್ ವಿರುದ್ದ ಪ್ರಕರಣ ದಾಖಲಾಗಿದೆ.

ಗೃಹಿಣಿ ಮೈಸೂರಿನ ಹೂಟಗಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾರೆ.ಪಕ್ಕದ ಮನೆಯ ನಿವಾಸಿ ಮಹೇಶ್ ಸಹ ಮೈಸೂರಿನಲ್ಲೇ ಕೆಲಸ ಮಾಡುತ್ತಿದ್ದಾನೆ.ಪ್ರತಿದಿನ ಗೃಹಿಣಿಯ ಹಿಂದೆ ಬೀಳುತ್ತಿದ್ದ ಮಹೇಶ ತನ್ನ ಜೊತೆ ಸಂಬಂಧ ಬೆಳೆಸುವಂತೆ ಒತ್ತಾಯಿಸಿದ್ದಾನೆ.ಲೆಲಸಕ್ಕೆ ಹೋಗುವ ಸ್ಥಳಕ್ಕೆ ಬಂದು ಟಾರ್ಚರ್ ನೀಡಿದ್ದಾನೆ.ಮಜಾ ಮಾಡೋಣ..ಸುತ್ತಾಡೋಣ…ಸಿನಿಮಾಗೆ ಹೋಗೋಣ…ಎಂಜಾಯ್ ಮಾಡೋಣ…ಹಣ ಕೊಡ್ತೀನಿ ಎಂದು ಮಾನಸಿಕವಾಗಿ ಕಿರುಕುಳ ನೀಡಿದ್ದಾನೆ.ತನ್ನ ಜೊತೆ ಬರದೆ ಇದ್ದರೆ ಫೋಟೋ ಹಾಗೂ ವಿಡಿಯೋಗಳನ್ನ ಮಾರ್ಫ್ ಮಾಡಿ ಇಂಟರ್ನೆಟ್ ನಲ್ಲಿ ಹಾಕಿ ಮಾನತೆಗೆದು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ.ಈ ಸಂಬಂಧ ಗೃಹಿಣಿ ತನ್ನ ಪತಿಯ ಅಣ್ಣನಿಗೆ ತಿಳಿಸಿದ್ದಾರೆ. ಮಹೇಶ್ ನೀಡುತ್ತಿದ್ದ ಕಿರುಕುಳವನ್ನ ಭಾವ ಕಣ್ಣಾರೆ ಕಂಡಾಗ ಪರಾರಿಯಾಗಿದ್ದಾನೆ.ಮಹೇಶ್ ನ ಚೇಸ್ ಮಾಡಿದ ಭಾವ ಬಿಳಿಕೆರೆ ಬಳಿ ಹಿಡಿದು ಹಿಗ್ಗಮುಗ್ಗ ಥಳಿಸಿದ್ದಾರೆ.ಮಹೇಶ್ ಆಸ್ಪತ್ರೆ ಸೇರಿಕೊಂಡಿದ್ದಾನೆ.ಹಲ್ಲೆ ನಡೆಸಿದ ಹಿನ್ನಲೆ ಗೃಹಿಣಿಯ ಭಾವನ ಮೇಲೆ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಈ ಹಿನ್ನಲೆ ಗೃಹಿಣಿ ಬಿಳಿಕೆರೆ ಠಾಣೆಗೆ ತೆರಳಿ ತನಗೆ ನೀಡುತ್ತಿದ್ದ ಕಿರುಕುಳದ ಬಗ್ಗೆ ಪೊಲೀಸರಿಗೆ ತಿಳಿಸಿದ್ದಾರೆ.ಹೂಟಗಳ್ಳಿಯಲ್ಲಿ ಕಿರುಕುಳ ನೀಡಿದ ಹಿನ್ನಲೆ ವಿಜಯನಗರ ಪೊಲೀಸ್ ಠಾಣೆಯಲ್ಲಿ ಮಹೇಶ್ ವಿರುದ್ದ ಪ್ರಕರಣ ದಾಖಲಾಗಿದೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *