ಪತ್ರ ಬರಹಗಾರರ ಪ್ರತಿಭಟನೆ..ಪ್ರತ್ಯೇಕ ಲಾಗಿನ್‌ ನೀಡಿ ಸಮಸ್ಯೆ ಬಗೆಹರಿಸಲು ಒತ್ತಾಯ…

ಪತ್ರ ಬರಹಗಾರರ ಪ್ರತಿಭಟನೆ..ಪ್ರತ್ಯೇಕ ಲಾಗಿನ್‌ ನೀಡಿ ಸಮಸ್ಯೆ ಬಗೆಹರಿಸಲು ಒತ್ತಾಯ…

ಪತ್ರ ಬರಹಗಾರರ ಪ್ರತಿಭಟನೆ..
ಪ್ರತ್ಯೇಕ ಲಾಗಿನ್‌ ನೀಡಿ ಸಮಸ್ಯೆ ಬಗೆಹರಿಸಲು ಒತ್ತಾಯ…

ಮೈಸೂರು,ಡಿ12,Tv10 ಕನ್ನಡ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮೈಸೂರು ನಗರ ಮತ್ತು ತಾಲೂಕು ಪತ್ರ ಬರಹಗಾರರ ಒಕ್ಕೂಟದ ವತಿಯಿಂದ
ಮೈಸೂರು ಉತ್ತರ ಉಪನೋಂದಣಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.
ಮುದ್ರಾಂಕ ಹಾಗೂ ನೋಂದಣಿ ಇಲಾಖೆಯು ಈಗಾಗಲೇ ಕಾವೇರಿ 2.0 ತಂತ್ರಾಂಶದ ಮೂಲಕ ದಾಖಲಾತಿಗಳನ್ನು ರವಾನಿಸುವ ಬಗ್ಗೆ ಕ್ರಮ ಕೈಗೊಂಡಿದ್ದು, ಈ ಸಂಬಂಧ ಆಗಿದ್ದಾಂಗ್ಲೆ ಸುಧಾರಣೆ ವಿಷಯದಲ್ಲಿ ಹಲವಾರು ಬದಲಾವಣೆಗಳನ್ನು ತರಲಾಗಿದೆ. ಸುಧಾರಣೆಗಳಿಂದಾಗಿ ಜನಸಾಮಾನ್ಯರ ನೋಂದಣಿ ಪ್ರಕ್ರಿಯೆಯ ವೇಗ ಕುಂಠಿತವಾಗುತ್ತಿದೆ. ಜನ ಸಾಮಾನ್ಯರಿಗೆ ಸೇವೆ ನೀಡುವುದು ದುಸ್ಸಾಹಸವಾಗಿದೆ. ನೋಂದಣಿ ಪ್ರಕ್ರಿಯೆಯಲ್ಲಿ ಈಗಾಗಲೇ ವಿಭಾಗ ಪತ್ರ. ದಾನಪತ್ರ ಹಾಗೂ ಇನ್ನಿತರೆ ದಾಖಲಾತಿಗಳನ್ನು ಅಪ್‌ಲೋಡ್ ಮಾಡುವುದು ಸಹಾ ಸಾಧ್ಯವಾಗದ ಕಾರಣ ಜನಸಾಮಾನ್ಯರು ತಮ್ಮ ಕುಟುಂಬದ ಸ್ಥಿರಾಸ್ತಿಗಳನ್ನು ನೋಂದಣಿ ಮಾಡಿಕೊಳ್ಳುವುದು ಸಾಧ್ಯವಿಲ್ಲದಂತಾಗಿದೆ. ಸುಧಾರಣೆಯ ನೆಪದಲ್ಲಿ ಪತ್ರಬರಹಗಾರರು, ವಕೀಲರು ಹಾಗೂ ಜನಸಾಮಾನ್ಯರಿಗೆ ಯಾವುದೇ ರೀತಿಯಲ್ಲಿ ವಿಷಯಗಳು ತಿಳಿಯದ ಕಾರಣ ಇಲಾಖೆಯಿಂದ ರಹದಾರಿ ಪಡೆದಿರುವ ಪತ್ರ ಬರಹಗಾರರು ಹಾಗೂ ಜನಸಾಮಾನ್ಯರು ತೀರ್ವ ತೊಂದರೆಯನ್ನು ಅನುಭವಿಸುವಂತಾಗಿದೆ. ಆದ ಕಾರಣ ಉನ್ನತ ಅಧಿಕಾರಿಗಳು ಹಾಗೂ ಸಚಿವರಿಗೆ ಮನದಟ್ಟು ಮಾಡುವ ಮೂಲಕ ಜನಸಾಮಾನ್ಯರ ನೋಂದಣಿ ಪ್ರಕ್ರಿಯೆಯನ್ನು ಪತ್ರ ಬರಹಗಾರರು ಸುಲಲಿತವಾಗಿ ನಡೆಸಲು ಅನುವು ಮಾಡಿಕೊಡಬೇಕೆಂದು ಪ್ರತಿಭಟನೆಕಾರರು ಒತ್ತಾಯಿಸಿದರು…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *