ಪತ್ರ ಬರಹಗಾರರ ಪ್ರತಿಭಟನೆ..ಪ್ರತ್ಯೇಕ ಲಾಗಿನ್‌ ನೀಡಿ ಸಮಸ್ಯೆ ಬಗೆಹರಿಸಲು ಒತ್ತಾಯ…

ಪತ್ರ ಬರಹಗಾರರ ಪ್ರತಿಭಟನೆ..ಪ್ರತ್ಯೇಕ ಲಾಗಿನ್‌ ನೀಡಿ ಸಮಸ್ಯೆ ಬಗೆಹರಿಸಲು ಒತ್ತಾಯ…

ಪತ್ರ ಬರಹಗಾರರ ಪ್ರತಿಭಟನೆ..
ಪ್ರತ್ಯೇಕ ಲಾಗಿನ್‌ ನೀಡಿ ಸಮಸ್ಯೆ ಬಗೆಹರಿಸಲು ಒತ್ತಾಯ…

ಮೈಸೂರು,ಡಿ12,Tv10 ಕನ್ನಡ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮೈಸೂರು ನಗರ ಮತ್ತು ತಾಲೂಕು ಪತ್ರ ಬರಹಗಾರರ ಒಕ್ಕೂಟದ ವತಿಯಿಂದ
ಮೈಸೂರು ಉತ್ತರ ಉಪನೋಂದಣಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.
ಮುದ್ರಾಂಕ ಹಾಗೂ ನೋಂದಣಿ ಇಲಾಖೆಯು ಈಗಾಗಲೇ ಕಾವೇರಿ 2.0 ತಂತ್ರಾಂಶದ ಮೂಲಕ ದಾಖಲಾತಿಗಳನ್ನು ರವಾನಿಸುವ ಬಗ್ಗೆ ಕ್ರಮ ಕೈಗೊಂಡಿದ್ದು, ಈ ಸಂಬಂಧ ಆಗಿದ್ದಾಂಗ್ಲೆ ಸುಧಾರಣೆ ವಿಷಯದಲ್ಲಿ ಹಲವಾರು ಬದಲಾವಣೆಗಳನ್ನು ತರಲಾಗಿದೆ. ಸುಧಾರಣೆಗಳಿಂದಾಗಿ ಜನಸಾಮಾನ್ಯರ ನೋಂದಣಿ ಪ್ರಕ್ರಿಯೆಯ ವೇಗ ಕುಂಠಿತವಾಗುತ್ತಿದೆ. ಜನ ಸಾಮಾನ್ಯರಿಗೆ ಸೇವೆ ನೀಡುವುದು ದುಸ್ಸಾಹಸವಾಗಿದೆ. ನೋಂದಣಿ ಪ್ರಕ್ರಿಯೆಯಲ್ಲಿ ಈಗಾಗಲೇ ವಿಭಾಗ ಪತ್ರ. ದಾನಪತ್ರ ಹಾಗೂ ಇನ್ನಿತರೆ ದಾಖಲಾತಿಗಳನ್ನು ಅಪ್‌ಲೋಡ್ ಮಾಡುವುದು ಸಹಾ ಸಾಧ್ಯವಾಗದ ಕಾರಣ ಜನಸಾಮಾನ್ಯರು ತಮ್ಮ ಕುಟುಂಬದ ಸ್ಥಿರಾಸ್ತಿಗಳನ್ನು ನೋಂದಣಿ ಮಾಡಿಕೊಳ್ಳುವುದು ಸಾಧ್ಯವಿಲ್ಲದಂತಾಗಿದೆ. ಸುಧಾರಣೆಯ ನೆಪದಲ್ಲಿ ಪತ್ರಬರಹಗಾರರು, ವಕೀಲರು ಹಾಗೂ ಜನಸಾಮಾನ್ಯರಿಗೆ ಯಾವುದೇ ರೀತಿಯಲ್ಲಿ ವಿಷಯಗಳು ತಿಳಿಯದ ಕಾರಣ ಇಲಾಖೆಯಿಂದ ರಹದಾರಿ ಪಡೆದಿರುವ ಪತ್ರ ಬರಹಗಾರರು ಹಾಗೂ ಜನಸಾಮಾನ್ಯರು ತೀರ್ವ ತೊಂದರೆಯನ್ನು ಅನುಭವಿಸುವಂತಾಗಿದೆ. ಆದ ಕಾರಣ ಉನ್ನತ ಅಧಿಕಾರಿಗಳು ಹಾಗೂ ಸಚಿವರಿಗೆ ಮನದಟ್ಟು ಮಾಡುವ ಮೂಲಕ ಜನಸಾಮಾನ್ಯರ ನೋಂದಣಿ ಪ್ರಕ್ರಿಯೆಯನ್ನು ಪತ್ರ ಬರಹಗಾರರು ಸುಲಲಿತವಾಗಿ ನಡೆಸಲು ಅನುವು ಮಾಡಿಕೊಡಬೇಕೆಂದು ಪ್ರತಿಭಟನೆಕಾರರು ಒತ್ತಾಯಿಸಿದರು…

Spread the love

Related post

ಮೈಸೂರು ನಗರ ನೂತನ ಡಿಸಿಪಿ ಯಾಗಿ ಡಾ.ಹರ್ಷ ಪ್ರಿಯಂವದ ನೇಮಕ…77 ದಿನಗಳ ನಂತರ ನಿಯೋಜನೆ…

ಮೈಸೂರು ನಗರ ನೂತನ ಡಿಸಿಪಿ ಯಾಗಿ ಡಾ.ಹರ್ಷ ಪ್ರಿಯಂವದ ನೇಮಕ…77 ದಿನಗಳ…

ಮೈಸೂರು ನಗರ ನೂತನ ಡಿಸಿಪಿ ಯಾಗಿ ಡಾ.ಹರ್ಷ ಪ್ರಿಯಂವದ ನೇಮಕ…77 ದಿನಗಳ ನಂತರ ನಿಯೋಜನೆ… ಮೈಸೂರು,ಮಾ18,Tv10 ಕನ್ನಡ ಮೈಸೂರು ನಗರ ಪೊಲೀಸ್‌ ಇಲಾಖೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ…
ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕೋರ್ಸ್‌ ಮುಚ್ಚುವಿಕೆ: ಪ್ರೊ. ಕೆ.ಎಸ್. ರಂಗಪ ತೀವ್ರ ಅಸಮಾಧಾನ

ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕೋರ್ಸ್‌ ಮುಚ್ಚುವಿಕೆ: ಪ್ರೊ. ಕೆ.ಎಸ್. ರಂಗಪ ತೀವ್ರ ಅಸಮಾಧಾನ

ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕೋರ್ಸ್‌ ಮುಚ್ಚುವಿಕೆ: ಪ್ರೊ. ಕೆ.ಎಸ್. ರಂಗಪ ತೀವ್ರ ಅಸಮಾಧಾನ ಮೈಸೂರು: 100 ವರ್ಷಗಳ ಇತಿಹಾಸ ಹೊಂದಿರುವ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ವಿವಿಧ ಕೋರ್ಸ್‌ಗಳನ್ನು ಹಂತ ಹಂತವಾಗಿ ಮುಚ್ಚಲಾಗುತ್ತಿರುವ…
ಲೋಕಾಯುಕ್ತ ಟ್ರಾಪ್…ಗ್ರಾ.ಪಂ.ಪಿಡಿಓ ಲೋಕಾ ಬಲೆಗೆ…25 ಸಾವಿರ ಲಂಚ ಪಡೆದು ಲಾಕ್…ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಪಿಡಿಓ…ಅಧಿಕಾರಿಗಳ ಮುಂದೆ ಹರಿತವಾದ ಆಯುಧದಿಂದ ಕೈ ಕೊಯ್ದುಕೊಂಡ ಮಂಜುಳಾ…

ಲೋಕಾಯುಕ್ತ ಟ್ರಾಪ್…ಗ್ರಾ.ಪಂ.ಪಿಡಿಓ ಲೋಕಾ ಬಲೆಗೆ…25 ಸಾವಿರ ಲಂಚ ಪಡೆದು ಲಾಕ್…ರೆಡ್ ಹ್ಯಾಂಡಾಗಿ…

ಲೋಕಾಯುಕ್ತ ಟ್ರಾಪ್…ಗ್ರಾ.ಪಂ.ಪಿಡಿಓ ಲೋಕಾ ಬಲೆಗೆ…25 ಸಾವಿರ ಲಂಚ ಪಡೆದು ಲಾಕ್…ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಪಿಡಿಓ…ಅಧಿಕಾರಿಗಳ ಮುಂದೆ ಹರಿತವಾದ ಆಯುಧದಿಂದ ಕೈ ಕೊಯ್ದುಕೊಂಡ ಮಂಜುಳಾ… ಹುಣಸೂರು,ಮಾ16,Tv10 ಕನ್ನಡ ಬಾಕಿ ಸಂಬಳ…

Leave a Reply

Your email address will not be published. Required fields are marked *