ಪತ್ರ ಬರಹಗಾರರ ಪ್ರತಿಭಟನೆ..ಪ್ರತ್ಯೇಕ ಲಾಗಿನ್‌ ನೀಡಿ ಸಮಸ್ಯೆ ಬಗೆಹರಿಸಲು ಒತ್ತಾಯ…

ಪತ್ರ ಬರಹಗಾರರ ಪ್ರತಿಭಟನೆ..ಪ್ರತ್ಯೇಕ ಲಾಗಿನ್‌ ನೀಡಿ ಸಮಸ್ಯೆ ಬಗೆಹರಿಸಲು ಒತ್ತಾಯ…

ಪತ್ರ ಬರಹಗಾರರ ಪ್ರತಿಭಟನೆ..
ಪ್ರತ್ಯೇಕ ಲಾಗಿನ್‌ ನೀಡಿ ಸಮಸ್ಯೆ ಬಗೆಹರಿಸಲು ಒತ್ತಾಯ…

ಮೈಸೂರು,ಡಿ12,Tv10 ಕನ್ನಡ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮೈಸೂರು ನಗರ ಮತ್ತು ತಾಲೂಕು ಪತ್ರ ಬರಹಗಾರರ ಒಕ್ಕೂಟದ ವತಿಯಿಂದ
ಮೈಸೂರು ಉತ್ತರ ಉಪನೋಂದಣಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.
ಮುದ್ರಾಂಕ ಹಾಗೂ ನೋಂದಣಿ ಇಲಾಖೆಯು ಈಗಾಗಲೇ ಕಾವೇರಿ 2.0 ತಂತ್ರಾಂಶದ ಮೂಲಕ ದಾಖಲಾತಿಗಳನ್ನು ರವಾನಿಸುವ ಬಗ್ಗೆ ಕ್ರಮ ಕೈಗೊಂಡಿದ್ದು, ಈ ಸಂಬಂಧ ಆಗಿದ್ದಾಂಗ್ಲೆ ಸುಧಾರಣೆ ವಿಷಯದಲ್ಲಿ ಹಲವಾರು ಬದಲಾವಣೆಗಳನ್ನು ತರಲಾಗಿದೆ. ಸುಧಾರಣೆಗಳಿಂದಾಗಿ ಜನಸಾಮಾನ್ಯರ ನೋಂದಣಿ ಪ್ರಕ್ರಿಯೆಯ ವೇಗ ಕುಂಠಿತವಾಗುತ್ತಿದೆ. ಜನ ಸಾಮಾನ್ಯರಿಗೆ ಸೇವೆ ನೀಡುವುದು ದುಸ್ಸಾಹಸವಾಗಿದೆ. ನೋಂದಣಿ ಪ್ರಕ್ರಿಯೆಯಲ್ಲಿ ಈಗಾಗಲೇ ವಿಭಾಗ ಪತ್ರ. ದಾನಪತ್ರ ಹಾಗೂ ಇನ್ನಿತರೆ ದಾಖಲಾತಿಗಳನ್ನು ಅಪ್‌ಲೋಡ್ ಮಾಡುವುದು ಸಹಾ ಸಾಧ್ಯವಾಗದ ಕಾರಣ ಜನಸಾಮಾನ್ಯರು ತಮ್ಮ ಕುಟುಂಬದ ಸ್ಥಿರಾಸ್ತಿಗಳನ್ನು ನೋಂದಣಿ ಮಾಡಿಕೊಳ್ಳುವುದು ಸಾಧ್ಯವಿಲ್ಲದಂತಾಗಿದೆ. ಸುಧಾರಣೆಯ ನೆಪದಲ್ಲಿ ಪತ್ರಬರಹಗಾರರು, ವಕೀಲರು ಹಾಗೂ ಜನಸಾಮಾನ್ಯರಿಗೆ ಯಾವುದೇ ರೀತಿಯಲ್ಲಿ ವಿಷಯಗಳು ತಿಳಿಯದ ಕಾರಣ ಇಲಾಖೆಯಿಂದ ರಹದಾರಿ ಪಡೆದಿರುವ ಪತ್ರ ಬರಹಗಾರರು ಹಾಗೂ ಜನಸಾಮಾನ್ಯರು ತೀರ್ವ ತೊಂದರೆಯನ್ನು ಅನುಭವಿಸುವಂತಾಗಿದೆ. ಆದ ಕಾರಣ ಉನ್ನತ ಅಧಿಕಾರಿಗಳು ಹಾಗೂ ಸಚಿವರಿಗೆ ಮನದಟ್ಟು ಮಾಡುವ ಮೂಲಕ ಜನಸಾಮಾನ್ಯರ ನೋಂದಣಿ ಪ್ರಕ್ರಿಯೆಯನ್ನು ಪತ್ರ ಬರಹಗಾರರು ಸುಲಲಿತವಾಗಿ ನಡೆಸಲು ಅನುವು ಮಾಡಿಕೊಡಬೇಕೆಂದು ಪ್ರತಿಭಟನೆಕಾರರು ಒತ್ತಾಯಿಸಿದರು…

Spread the love

Related post

ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

*ಬಿಜಾಪುರ ಜಿಲ್ಲೆ ಇಂಡಿ ಪಟ್ಟಣದ ಅದ್ಭುತ ಪ್ರತಿಭೆ ತಮ್ಮ ರಾಷ್ಟ್ರಮಟ್ಟದ ಬಹು ಪ್ರಶಸ್ತಿಗಳ ಮೂಲಕ ದೇಶಕ್ಕೆ ನಾಡಿಗೆ ಮತ್ತೆ ಹುಟ್ಟುರಿಗೆ ಕೀರ್ತಿ ತಂದಿದ್ದಾರೆ ಚೇತನ ಬಸವರಾಜ ಮೂರಮನ ಕ್ಷಮಿಸಿ…
ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ…

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ… ನಂಜನಗೂಡು,ಜ31,Tv10 ಕನ್ನಡ ಗ್ರಾಮದ ಫೋಕಸ್ ಲೈಟ್…
ಕಟೌಟ್ ತೆರವು ವೇಳೆ ಅವಘಢ…ಆಯತಪ್ಪಿ ಕೆಳಗೆ ಬಿದ್ದು ಕಾರ್ಮಿಕ ಸಾವು…

ಕಟೌಟ್ ತೆರವು ವೇಳೆ ಅವಘಢ…ಆಯತಪ್ಪಿ ಕೆಳಗೆ ಬಿದ್ದು ಕಾರ್ಮಿಕ ಸಾವು…

ಕಟೌಟ್ ತೆರವು ವೇಳೆ ಅವಘಢ…ಆಯತಪ್ಪಿ ಕೆಳಗೆ ಬಿದ್ದು ಕಾರ್ಮಿಕ ಸಾವು… ಸುತ್ತೂರು,ಜ29,Tv10 ಕನ್ನಡ ಸುತ್ತೂರು ಜಾತ್ರೆಯ ಕಟೌಟ್ ಫ್ರೇಮ್ ತೆರವು ಮಾಡುವ ವೇಳೆಮೇಲಿಂದ ಕೆಳಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿದ…

Leave a Reply

Your email address will not be published. Required fields are marked *