ಪತ್ರ ಬರಹಗಾರರ ಪ್ರತಿಭಟನೆ..ಪ್ರತ್ಯೇಕ ಲಾಗಿನ್‌ ನೀಡಿ ಸಮಸ್ಯೆ ಬಗೆಹರಿಸಲು ಒತ್ತಾಯ…

ಪತ್ರ ಬರಹಗಾರರ ಪ್ರತಿಭಟನೆ..ಪ್ರತ್ಯೇಕ ಲಾಗಿನ್‌ ನೀಡಿ ಸಮಸ್ಯೆ ಬಗೆಹರಿಸಲು ಒತ್ತಾಯ…

ಪತ್ರ ಬರಹಗಾರರ ಪ್ರತಿಭಟನೆ..
ಪ್ರತ್ಯೇಕ ಲಾಗಿನ್‌ ನೀಡಿ ಸಮಸ್ಯೆ ಬಗೆಹರಿಸಲು ಒತ್ತಾಯ…

ಮೈಸೂರು,ಡಿ12,Tv10 ಕನ್ನಡ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮೈಸೂರು ನಗರ ಮತ್ತು ತಾಲೂಕು ಪತ್ರ ಬರಹಗಾರರ ಒಕ್ಕೂಟದ ವತಿಯಿಂದ
ಮೈಸೂರು ಉತ್ತರ ಉಪನೋಂದಣಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.
ಮುದ್ರಾಂಕ ಹಾಗೂ ನೋಂದಣಿ ಇಲಾಖೆಯು ಈಗಾಗಲೇ ಕಾವೇರಿ 2.0 ತಂತ್ರಾಂಶದ ಮೂಲಕ ದಾಖಲಾತಿಗಳನ್ನು ರವಾನಿಸುವ ಬಗ್ಗೆ ಕ್ರಮ ಕೈಗೊಂಡಿದ್ದು, ಈ ಸಂಬಂಧ ಆಗಿದ್ದಾಂಗ್ಲೆ ಸುಧಾರಣೆ ವಿಷಯದಲ್ಲಿ ಹಲವಾರು ಬದಲಾವಣೆಗಳನ್ನು ತರಲಾಗಿದೆ. ಸುಧಾರಣೆಗಳಿಂದಾಗಿ ಜನಸಾಮಾನ್ಯರ ನೋಂದಣಿ ಪ್ರಕ್ರಿಯೆಯ ವೇಗ ಕುಂಠಿತವಾಗುತ್ತಿದೆ. ಜನ ಸಾಮಾನ್ಯರಿಗೆ ಸೇವೆ ನೀಡುವುದು ದುಸ್ಸಾಹಸವಾಗಿದೆ. ನೋಂದಣಿ ಪ್ರಕ್ರಿಯೆಯಲ್ಲಿ ಈಗಾಗಲೇ ವಿಭಾಗ ಪತ್ರ. ದಾನಪತ್ರ ಹಾಗೂ ಇನ್ನಿತರೆ ದಾಖಲಾತಿಗಳನ್ನು ಅಪ್‌ಲೋಡ್ ಮಾಡುವುದು ಸಹಾ ಸಾಧ್ಯವಾಗದ ಕಾರಣ ಜನಸಾಮಾನ್ಯರು ತಮ್ಮ ಕುಟುಂಬದ ಸ್ಥಿರಾಸ್ತಿಗಳನ್ನು ನೋಂದಣಿ ಮಾಡಿಕೊಳ್ಳುವುದು ಸಾಧ್ಯವಿಲ್ಲದಂತಾಗಿದೆ. ಸುಧಾರಣೆಯ ನೆಪದಲ್ಲಿ ಪತ್ರಬರಹಗಾರರು, ವಕೀಲರು ಹಾಗೂ ಜನಸಾಮಾನ್ಯರಿಗೆ ಯಾವುದೇ ರೀತಿಯಲ್ಲಿ ವಿಷಯಗಳು ತಿಳಿಯದ ಕಾರಣ ಇಲಾಖೆಯಿಂದ ರಹದಾರಿ ಪಡೆದಿರುವ ಪತ್ರ ಬರಹಗಾರರು ಹಾಗೂ ಜನಸಾಮಾನ್ಯರು ತೀರ್ವ ತೊಂದರೆಯನ್ನು ಅನುಭವಿಸುವಂತಾಗಿದೆ. ಆದ ಕಾರಣ ಉನ್ನತ ಅಧಿಕಾರಿಗಳು ಹಾಗೂ ಸಚಿವರಿಗೆ ಮನದಟ್ಟು ಮಾಡುವ ಮೂಲಕ ಜನಸಾಮಾನ್ಯರ ನೋಂದಣಿ ಪ್ರಕ್ರಿಯೆಯನ್ನು ಪತ್ರ ಬರಹಗಾರರು ಸುಲಲಿತವಾಗಿ ನಡೆಸಲು ಅನುವು ಮಾಡಿಕೊಡಬೇಕೆಂದು ಪ್ರತಿಭಟನೆಕಾರರು ಒತ್ತಾಯಿಸಿದರು…

Spread the love

Related post

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು… ಹುಣಸೂರು,ಜೂ18,Tv10 ಕನ್ನಡ ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಹುಣಸೂರು…
ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…

Leave a Reply

Your email address will not be published. Required fields are marked *