ಬೆಟ್ಟಳ್ಳಿ ಮಾರಮ್ಮನಿಗೆ ಧನುರ್ಮಾಸದ ವಿಶೇಷ ಪೂಜೆ .

ಬೆಟ್ಟಳ್ಳಿ ಮಾರಮ್ಮನಿಗೆ ಧನುರ್ಮಾಸದ ವಿಶೇಷ ಪೂಜೆ .

ಬೆಟ್ಟಳ್ಳಿ ಮಾರಮ್ಮನಿಗೆ ಧನುರ್ಮಾಸದ ವಿಶೇಷ ಪೂಜೆ .

ಹನೂರು: ಮಂಗಳವಾರದಿಂದ ಧನುರ್ಮಾಸ ಪೂಜೆ ಪ್ರಾರಂಭವಾಗಿರುವ ಹಿನ್ನೆಲೆ ಪಟ್ಟಣದ ಗ್ರಾಮ ದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮನ ದೇಗುಲದಲ್ಲಿ ದೇವರ ಮೂರ್ತಿಗೆ ಫಲ ಪುಷ್ಪಗಳಿಂದ ಸಿಂಗರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಮಂಗವಾರ ಬೆಳಗಿನ ಜಾವ 5 ಗಂಟೆಗೆ ಪನ್ನೀರು, ಎಳನೀರು, ಅರಿಶಿಣ, ಕುಂಕುಮ, ಜೇನುತುಪ್ಪ, ಹಾಲು, ಮೊಸರು ಹಾಗೂ ಗಂಧದ ಅಭಿಷೇಕವನ್ನು ನೆರವೇರಿಸಲಾಯಿತು. ಬಳಿಕ ದೇವಿ ಮೂರ್ತಿಗೆ ಬಗೆ ಬಗೆಯ ಪುಷ್ಪಾಲಂಕಾರಗಳಿಂದ ಸಿಂಗರಿಸಲಾಯಿತು. ಪಂಚಾಮೃತ ಅಭಿಷೇಕ ಅರ್ಪಿಸಿ ಧೂಪದಾರತಿ, ಕೊಬ್ಬರಿ, ಬೆಲ್ಲ, ನಿಂಬೆಹಣ್ಣಿನ ಆರತಿ ಹಾಗೂ ಮಹಾಮಂಗಳಾರತಿ ನೆರವೇರಿಸಿ ನಂತರ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಯಿತು.

ಪಟ್ಟಣ ಸೇರಿದಂತೆ ಭೈರನತ್ತ ಉದ್ದನೂರು, ಚಿಕ್ಕಮಾಲಾಪುರ, ಅಜ್ಜೀಪುರ, ಚಿಂಚಳ್ಳಿ, ಮಣಗಳ್ಳಿ, ಮಂಗಲ ಹಾಗೂ ಈ ಭಾಗದ ಇನ್ನಿತರ ಕಡೆಗಳಿಂದ ಆಗಮಿಸಿದ್ದ ಭಕ್ತರು ಹಣ್ಣು ಕಾಯಿ ನೀಡಿ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದರು. ಹರಕೆ ಹೊತ್ತ ಭಕ್ತರು ದೇಗುಲದ ಮುಂಭಾಗದಲ್ಲಿ ಉಪ್ಪು ಸುರಿದು ಭಕ್ತಿ ಮೆರೆದರು.
ಅಲ್ಲದೆ ಆಗಮಿಸಿದ ಭಕ್ತರಿಗೆ ವಿಶೇಷ ದಾಸೋಹ ವ್ಯವಸ್ಥೆ ಕಲ್ಪಿಸಲಾಗಿತ್ತು.

ವರದಿ :ವಿಜಯ್ ಕುಮಾರ್.ಕಾಂಚಳ್ಳಿ /ಹನೂರು

Spread the love

Related post

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…

Leave a Reply

Your email address will not be published. Required fields are marked *