ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

  • Crime
  • December 19, 2025
  • No Comment
  • 36

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಹುಣಸೂರು,ಡಿ19,Tv10 ಕನ್ನಡ

ಕ್ಲುಲ್ಲಕ ಕಾರಣಕ್ಕೆ ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಹುಣಸೂರು ನಗರದಲ್ಲಿ ನಡೆದಿದೆ.ನಿಜಾಂ ಮೊಹಲ್ಲಾದ ನಿವಾಸಿ ಖಾಜಾಪೀರ್(44)ಕೊಲೆಯಾದ ದುರ್ದೈವಿ. ಖಾಜಾಪೀರ್ ಸ್ನೇಹಿತ ನಗರದ ಮುಸ್ಲಿಂಬ್ಲಾಕ್‌ನ ಜಾವಿದ್ ಹಾಗೂ ಇನಾಯತುಲ್ಲಾ ಬಂಧಿತ ಕೊಲೆ ಆರೋಪಿಗಳು.
ಆಟೋ ಚಾಲಕ ಹಾಗೂ ಲೋಡರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಖಾಜಾಪೀರ್ ಆರೋಪಿಗಳಾದ ಜಾವಿದ್ ಹಾಗೂ ಇನಾಯತುಲ್ಲಾರವರು ಸ್ನೇಹಿತರಾಗಿದ್ದು ಕುಡಿತದ ದಾಸರಾಗಿದ್ದರು.ಜಾವಿದ್ ವ್ಯಕ್ತಿಯೊಬ್ಬರಿಂದ 15ಸಾವಿರ ರೂ ಸಾಲ ಪಡೆದಿದ್ದ.ಸಾಲ ಮರುಪಾವತಿಸಲು ವಿಫಲನಾದ ಕಾರಣ ಜಾವಿದ್‌ನ ಬೈಕನ್ನು ವಶಕ್ಕೆ ಪಡೆದು ಸಾಲ ತೀರಿಸಿ ವಾಪಸ್ ಪಡೆಯುವಂತೆ ವಾರ್ನಿಂಗ್ ಕೊಟ್ಟಿದ್ದರು.
ಬೈಕ್ ಕಿತ್ತುಕೊಳ್ಳಲು ಕೊಲೆಯಾದ ಖಾಜಾಪೀರ್ ಕಾರಣವಾಗಿದ್ದಾನೆಂದು ಗುರುವಾರ ಮದ್ಯ ರಾತ್ರಿ ಮಂಟಿ ಸರ್ಕಲ್ ಬಳಿಯಲ್ಲಿ ಮೂವರ ನಡುವೆ ಜಗಳವಾಗಿದೆ. ಕುಡಿದ ಮತ್ತಿನಲ್ಲಿ ಮರದ ರಿಪೀಸ್ ಪಟ್ಟಿಯಲ್ಲಿ ಬಡಿದಾಡಿಕೊಂಡಿದ್ದು, ತೀವ್ರ ಪೆಟ್ಟು ಬಿದ್ದಿದ್ದ ಖಾಜಾಪೀರ್ ಕೆಳಗೆ ಬಿದ್ದು ಸಾವನ್ನಪ್ಪಿದ್ದಾನೆ. ಈ ಸಂಬಂಧ ಹುಣಸೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೃತ್ಯ ನಡೆದ ಸ್ಥಳಕ್ಕೆ ಎಸ್.ಪಿ.ವಿಷ್ಣುವರ್ಧನ್, ಡಿವೈಎಸ್‌ಪಿ. ರಾಜು, ಇನ್ಸ್ಫೆಕ್ಟರ್ ಸಂತೋಷ್ ಕಶ್ಯಪ್ ಭೇಟಿ ಇತ್ತು ಪರಿಶೀಲಿಸಿದರು. ಅರೋಪಿಗಳನ್ನು ನಗರದ ಎಪಿಎಂಸಿ ಮಾರುಕಟ್ಟೆ ಬಳಿಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ…

Spread the love

Related post

ಪ್ರೊ.ಭಾಷ್ಯಂ ಸ್ವಾಮೀಜಿ ಹಾಗೂ ಕೆ.ಬಿ.ಲಿಂಗರಾಜು ರವರಿಗೆ ಮೈಸೂರು ಪತ್ರಿಕಾ ಛಾಯಾಗ್ರಹಕರ ಸಂಘದಿಂದ ಅಭಿನಂದನೆ…

ಪ್ರೊ.ಭಾಷ್ಯಂ ಸ್ವಾಮೀಜಿ ಹಾಗೂ ಕೆ.ಬಿ.ಲಿಂಗರಾಜು ರವರಿಗೆ ಮೈಸೂರು ಪತ್ರಿಕಾ ಛಾಯಾಗ್ರಹಕರ ಸಂಘದಿಂದ…

ಮೈಸೂರು,ಫೆ4,Tv10 ಕನ್ನಡ ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಪದವಿ ಪಡೆದ ಶ್ರೀ ಯೋಗ ನರಸಿಂಹಸ್ವಾಮಿ ದೇವಸ್ಥಾನದ ಸಂಸ್ಥಾಪಕರಾದ ಪ್ರೊಫೆಸರ್ ಶ್ರೀ ಭಾಷ್ಯಂ ಸ್ವಾಮೀಜಿ ಹಾಗೂ ಸಮಾಜಸೇವಕರು ಮೈಸೂರು…
ಕರ್ತವ್ಯ ನಿರ್ವಹಣೆ ವೇಳೆ ಸೆಸ್ಕ್ ಸಿಬ್ಬಂದಿ ಸಾವು ಪ್ರಕರಣ…ಮೃತರ ಕುಟುಂಬಕ್ಕೆ ಪರಿಹಾರ ಚೆಕ್ ವಿತರಣೆ…

ಕರ್ತವ್ಯ ನಿರ್ವಹಣೆ ವೇಳೆ ಸೆಸ್ಕ್ ಸಿಬ್ಬಂದಿ ಸಾವು ಪ್ರಕರಣ…ಮೃತರ ಕುಟುಂಬಕ್ಕೆ ಪರಿಹಾರ…

ಕರ್ತವ್ಯ ನಿರ್ವಹಣೆ ವೇಳೆ ಸೆಸ್ಕ್ ಸಿಬ್ಬಂದಿ ಸಾವು ಪ್ರಕರಣ…ಮೃತರ ಕುಟುಂಬಕ್ಕೆ ಪರಿಹಾರ ಚೆಕ್ ವಿತರಣೆ… ಮೈಸೂರು,ಫೆ3,Tv10 ಕನ್ನಡ ಇತ್ತೀಚೆಗೆ ಹನೂರು ಉಪ ವಿಭಾಗ ವ್ಯಾಪ್ತಿಯ ಚಾವಿಸನಿನಿ (ಸೆಸ್ಕ್‌) ಸಿಬ್ಬಂದಿ…
ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ…

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ ಮೈಸೂರು:ಮೈಸೂರಿನಲ್ಲಿ 01/02/2026 ರಂದು ನಡೆದ ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ…

Leave a Reply

Your email address will not be published. Required fields are marked *