ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

  • Crime
  • December 19, 2025
  • No Comment
  • 14

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಹುಣಸೂರು,ಡಿ19,Tv10 ಕನ್ನಡ

ಕ್ಲುಲ್ಲಕ ಕಾರಣಕ್ಕೆ ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಹುಣಸೂರು ನಗರದಲ್ಲಿ ನಡೆದಿದೆ.ನಿಜಾಂ ಮೊಹಲ್ಲಾದ ನಿವಾಸಿ ಖಾಜಾಪೀರ್(44)ಕೊಲೆಯಾದ ದುರ್ದೈವಿ. ಖಾಜಾಪೀರ್ ಸ್ನೇಹಿತ ನಗರದ ಮುಸ್ಲಿಂಬ್ಲಾಕ್‌ನ ಜಾವಿದ್ ಹಾಗೂ ಇನಾಯತುಲ್ಲಾ ಬಂಧಿತ ಕೊಲೆ ಆರೋಪಿಗಳು.
ಆಟೋ ಚಾಲಕ ಹಾಗೂ ಲೋಡರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಖಾಜಾಪೀರ್ ಆರೋಪಿಗಳಾದ ಜಾವಿದ್ ಹಾಗೂ ಇನಾಯತುಲ್ಲಾರವರು ಸ್ನೇಹಿತರಾಗಿದ್ದು ಕುಡಿತದ ದಾಸರಾಗಿದ್ದರು.ಜಾವಿದ್ ವ್ಯಕ್ತಿಯೊಬ್ಬರಿಂದ 15ಸಾವಿರ ರೂ ಸಾಲ ಪಡೆದಿದ್ದ.ಸಾಲ ಮರುಪಾವತಿಸಲು ವಿಫಲನಾದ ಕಾರಣ ಜಾವಿದ್‌ನ ಬೈಕನ್ನು ವಶಕ್ಕೆ ಪಡೆದು ಸಾಲ ತೀರಿಸಿ ವಾಪಸ್ ಪಡೆಯುವಂತೆ ವಾರ್ನಿಂಗ್ ಕೊಟ್ಟಿದ್ದರು.
ಬೈಕ್ ಕಿತ್ತುಕೊಳ್ಳಲು ಕೊಲೆಯಾದ ಖಾಜಾಪೀರ್ ಕಾರಣವಾಗಿದ್ದಾನೆಂದು ಗುರುವಾರ ಮದ್ಯ ರಾತ್ರಿ ಮಂಟಿ ಸರ್ಕಲ್ ಬಳಿಯಲ್ಲಿ ಮೂವರ ನಡುವೆ ಜಗಳವಾಗಿದೆ. ಕುಡಿದ ಮತ್ತಿನಲ್ಲಿ ಮರದ ರಿಪೀಸ್ ಪಟ್ಟಿಯಲ್ಲಿ ಬಡಿದಾಡಿಕೊಂಡಿದ್ದು, ತೀವ್ರ ಪೆಟ್ಟು ಬಿದ್ದಿದ್ದ ಖಾಜಾಪೀರ್ ಕೆಳಗೆ ಬಿದ್ದು ಸಾವನ್ನಪ್ಪಿದ್ದಾನೆ. ಈ ಸಂಬಂಧ ಹುಣಸೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೃತ್ಯ ನಡೆದ ಸ್ಥಳಕ್ಕೆ ಎಸ್.ಪಿ.ವಿಷ್ಣುವರ್ಧನ್, ಡಿವೈಎಸ್‌ಪಿ. ರಾಜು, ಇನ್ಸ್ಫೆಕ್ಟರ್ ಸಂತೋಷ್ ಕಶ್ಯಪ್ ಭೇಟಿ ಇತ್ತು ಪರಿಶೀಲಿಸಿದರು. ಅರೋಪಿಗಳನ್ನು ನಗರದ ಎಪಿಎಂಸಿ ಮಾರುಕಟ್ಟೆ ಬಳಿಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ…

Spread the love

Related post

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು… ಹುಣಸೂರು,ಡಿ20,Tv10 ಕನ್ನಡ ಸುಡುತ್ತಿರುವ ಬಿಸಿನೀರಿನ ಪಾತ್ರೆಗೆ ಬಿದ್ದು ಹೆಣ್ಣುಮಗು ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ವಿಜಯಗಿರಿ ಹಾಡಿಯಲ್ಲಿ ನಡೆದಿದೆ. ಆದಿವಾಸಿ…
ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ… ಮಂಡ್ಯ,ಡಿ19,Tv10 ಕನ್ನಡ ಜಮೀನು ವಿಚಾರದಲ್ಲಿ ಮಾಜಿ ಶಾಸಕ ಹಾಗೂ ಪುತ್ರ ವ್ಯಕ್ತಿ ಮೇಲೆ…
ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರಿಗೆ 34.28 ಲಕ್ಷ ಪಂಗನಾಮ…ಸೆನ್ ಠಾಣೆಯಲ್ಲಿ FIR..

ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರಿಗೆ 34.28 ಲಕ್ಷ ಪಂಗನಾಮ…ಸೆನ್ ಠಾಣೆಯಲ್ಲಿ FIR..

ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರಿಗೆ 34.28 ಲಕ್ಷ ಪಂಗನಾಮ…ಸೆನ್ ಠಾಣೆಯಲ್ಲಿ FIR.. ಮೈಸೂರು,ಡಿ19,Tv10 ಕನ್ನಡ ಶೇರು ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ ತೋರಿಸಿ ಇಬ್ಬರಿಗೆ 34.28 ಲಕ್ಷ ವಂಚಿಸಿದ…

Leave a Reply

Your email address will not be published. Required fields are marked *